ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಎಸ್ ವೈ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಬೇಡಿ ಎಂದ ಪ್ರತಾಪ್ ಸಿಂಹ

|
Google Oneindia Kannada News

Recommended Video

ಬಿಎಸ್ ವೈ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಬೇಡಿ ಎಂದ ಪ್ರತಾಪ್ ಸಿಂಹ | Oneindia Kannada

ಮೈಸೂರು, ಫೆಬ್ರವರಿ 28:ಉಗ್ರರ ಮೇಲೆ ಪ್ರತಿದಾಳಿಯಿಂದ ಬಿಜೆಪಿಗೆ ಚುನಾವಣೆಯಲ್ಲಿ ಲಾಭವಾಗುತ್ತದೆ ಎಂಬ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆ ವಿಚಾರವನ್ನು
ಸಂಸದ ಪ್ರತಾಪ್ ಸಿಂಹ ಸಮರ್ಥಿಸಿಕೊಂಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಸ್ ವೈ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಬೇಡಿ.ಉಗ್ರರ ಮೇಲೆ ಪ್ರತಿದಾಳಿಗೆ ಗಡಿ ನಿಯಂತ್ರಣ ರೇಖೆ ದಾಟಲು 1971 ರ ನಂತರ ಯಾವ ಪ್ರಧಾನಿಯೂ ಒಪ್ಪಿರಲಿಲ್ಲ.ಮೋದಿ ಅಂತಹ ಧೈರ್ಯ ತೋರಿದ್ದಾರೆ.ಇಂತಹ ಧೈರ್ಯವಂತ ಪ್ರಧಾನಿ ಜತೆ ದೇಶ ನಿಲ್ಲುತ್ತೆ, ಹೀಗಾಗಿ ಸೀಟು ಹೆಚ್ಚಾಗುತ್ತೆ ಎನ್ನುವ ಅರ್ಥದಲ್ಲಿ ಯಡಿಯೂರಪ್ಪ ಮಾತನಾಡಿದ್ದಾರೆ ಎಂದು ಉತ್ತರಿಸಿದ್ದಾರೆ.

Pratap Simha defended former CM BS Yeddyurappas statement

ಅಯ್ಯೋ, ನಾ ಹೇಳಿದ್ದು ಹಾಗಲ್ಲ ಹೀಗೆ ಎಂದರಪ್ಪ ಯಡಿಯೂರಪ್ಪಅಯ್ಯೋ, ನಾ ಹೇಳಿದ್ದು ಹಾಗಲ್ಲ ಹೀಗೆ ಎಂದರಪ್ಪ ಯಡಿಯೂರಪ್ಪ

ಇದರಲ್ಲಿ ಯಾವುದೇ ತಪ್ಪಿಲ್ಲ, ತಪ್ಪಾಗಿ ಅರ್ಥೈಸಲಾಗುತ್ತಿದೆ ಅಷ್ಟೇ. ನಮಗೆ ಇದರಲ್ಲಿ ರಾಜಕೀಯ ಮಾಡುವ ಅವಶ್ಯಕತೆ ಇಲ್ಲ.ಮಾಜಿ ಸಿಎಂ ಸಿದ್ದರಾಮಯ್ಯ ಈ ವಿಚಾರದಲ್ಲಿ ಬಾಯಿಗೆ ಬಂದ ಹಾಗೇ ಮಾತಾಡಿರುವುದು ಸರಿಯಲ್ಲ. ಹೀಗೆ ಮಾತಾಡಿ ಮಾತಾಡಿಯೇ ಅವರು ಕೆಟ್ಟರು. ಸಿಎಂ ಎಚ್.ಡಿ. ಕುಮಾರಸ್ವಾಮಿ ಕೂಡ ಅದೇ ಹಾದಿಯಲ್ಲಿ ಸಾಗುತ್ತಿದ್ದಾರೆ ಎಂದು ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ.

English summary
MP Pratap Simha defended former CM BS Yeddyurappa's statement in Mysuru. He said Yeddyurappa's speech is misinterpreted. We do not need to do politics in it.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X