ಮೈಸೂರು: ವೃತ್ತಕ್ಕೆ ಮೃತ ಪಾಲಿಕೆ ಸದಸ್ಯರ ಹೆಸರಿಡಲು ಪ್ರತಾಪ್ ಸಿಂಹ ವಿರೋಧ

ಮೈಸೂರು, ಅಕ್ಟೋಬರ್ 21: ರಾಷ್ಟ್ರೀಯ ಹೆದ್ದಾರಿ 766ರ ವ್ಯಾಪ್ತಿಗೆ ಒಳಪಡುವ ಮೈಸೂರು-ತಿ.ನರಸೀಪುರ ರಸ್ತೆಯ ಲಲಿತಮಹಲ್ ಜಂಕ್ಷನ್ ಬಳಿ ಇರುವ ವೃತ್ತಕ್ಕೆ ಮೃತ ಪಾಲಿಕೆ ಸದಸ್ಯರ ಹೆಸರಿಡಲು ಸಂಸದ ಪ್ರತಾಪ್ ಸಿಂಹ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮೈಸೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಪತ್ರ ಬರೆದಿರುವ ಅವರು, ರಾಷ್ಟ್ರೀಯ ಹೆದ್ದಾರಿ 766ರ ವ್ಯಾಪ್ತಿಗೆ ಒಳಪಡುವ ಮೈಸೂರು-ತಿ.ನರಸೀಪುರ ರಸ್ತೆಯ ಲಲಿತಮಹಲ್ ಜಂಕ್ಷನ್ ಬಳಿ ಇರುವ ವೃತ್ತಕ್ಕೆ ಅ.6ರಂದು ನಡೆದ ಮೈಸೂರು ಮಹಾನಗರ ಪಾಲಿಕೆ ಕೌನ್ಸಿಲ್ ಸಭೆಯಲ್ಲಿ ನಾಮಕರಣ ಮಾಡಿ, ನಿರ್ಣಯ ಕೈಗೊಂಡಿರುವುದು ತಿಳಿದುಬಂದಿದೆ. ಆದರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವ್ಯಾಪ್ತಿಗೆ ಒಳಪಡುವ ವೃತ್ತಕ್ಕೆ ಹೆಸರಿಡಲು ಪಾಲಿಕೆ, ಪ್ರಾಧಿಕಾರ, ಪುರಸಭೆ ಅಥವಾ ನಗರ ಸಭೆಗೆ ಅಧಿಕಾರವಿಲ್ಲ ಎಂದಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅನುಮತಿ ಇಲ್ಲದೆ ಅಂತಹ ಪ್ರಯತ್ನಕ್ಕೆ ಕೈಹಾಕುವುದು ಕಾನೂನು ಬಾಹಿರ. ಆದ್ದರಿಂದ ಪಾಲಿಕೆ ಕೌನ್ಸಿಲ್ ಸಭೆಯಲ್ಲಿ ವೃತ್ತಕ್ಕೆ ನಾಮಕರಣ ಮಾಡಿರುವುದು ಕಾನೂನು ಬಾಹಿರವಾಗಿದ್ದು ಕೂಡಲೇ ಆ ನಿರ್ಣಯವನ್ನು ಕೈಬಿಡಬೇಕು ಎಂದು ಮನವಿ ಮಾಡಿದ್ದಾರೆ.

Mysuru: Pratap Simha opposed to naming of deceased Corporator Name to circle

ಪಾಲಿಕೆ ಮಾಜಿ ಸದಸ್ಯರು ಮೃತಪಟ್ಟರೆ ಸಾಂತ್ವನ ಹೇಳೋಣ. ಆದರೆ, ಹೆಸರು ಇಡುವುದು ಏಕೆ ಎಂದು ಪ್ರಶ್ನಿಸಿರುವ ಪ್ರತಾಪ್ ಸಿಂಹ, ಎನ್‌ಎಚ್ ರಸ್ತೆಯ ವೃತ್ತಕ್ಕೆ ಪಾಲಿಕೆಯಿಂದ ಈ ರೀತಿ ಹೆಸರನ್ನು ಇಡಲು ನಿರ್ಣಯ ಮಾಡುವುದು ಕಾನೂನು ಬಾಹಿರ. ಗಣ್ಯರು, ಸಾಧಕರ ಹೆಸರನ್ನು ಇಟ್ಟರೆ ಉತ್ತಮ. ಮುಂದಿನ ದಿನಗಳಲ್ಲಿ ನಗರಪಾಲಿಕೆ ಸದಸ್ಯರಾಗಿ ಮೃತಪಡುವವರ ಹೆಸರನ್ನು ಇಡಲು ಸಾಧ್ಯವೇ? ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಬೇಕು ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+