ವಿಡಿಯೋ: ನಡುರಸ್ತೆಯಲ್ಲಿ ಪ್ರತಾಪ್ ಸಿಂಹಗೆ ಸ್ವಪಕ್ಷದವರಿಂದಲೇ ಮಂಗಳಾರತಿ
Recommended Video

ಮೈಸೂರು, ಸೆಪ್ಟೆಂಬರ್ 13: ಮೈಸೂರು-ಕೊಡಗು ಸಂಸದ ಬಿಜೆಪಿಯ ಪ್ರತಾಪ್ ಸಿಂಹ ಅವರು ಇಂದು ಸ್ವಪಕ್ಷದವರಿಂದಲೇ ಬೈಸಿಕೊಳ್ಳಬೇಕಾಯಿತು. ಅದೂ ನಡು ರಸ್ತೆಯಲ್ಲಿ.
ಕೊಡಗು ಜಿಲ್ಲೆಯ ಹೆಬ್ಬೆಟ್ಟಗೆರಿಗೆ ಇಂದು ಕೇಂದ್ರದ ನೆರೆ ಅಧ್ಯಯನ ತಂಡ ಪರಿಶೀಲನೆ ಬಂದಿತ್ತು. ಆ ಅಧಿಕಾರಿಗಳಿಗೆ ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ಮಾಹಿತಿ ನೀಡುತ್ತಿದ್ದರು.
ಈ ಸಮಯದಲ್ಲಿ ಅಲ್ಲೇ ಇದ್ದ ದೇವಯ್ಯ ಎಂಬ ಬಿಜೆಪಿ ಮುಖಂಡ ಏಕಾಏಕಿ ಪ್ರತಾಪ್ ಸಿಂಹ ಅವರ ಮೇಲೆ ಸಿಟ್ಟಾಗಿ 'ನಿಮ್ಮನ್ನು ಸಂಸದರಾಗಿ ಮಾಡಿದ್ದು ನಮ್ಮ ತಪ್ಪು' ಎಂದು ತರಾಟೆಗೆ ತೆಗೆದುಕೊಂಡರು. ಪ್ರತಾಪ್ ಸಿಂಹ ಅವರು ಅಧಿಕಾರಿಗಳಿಗೆ ತಪ್ಪು ಮಾಹಿತಿ ಕೊಡುತ್ತಿದ್ದಾರೆ ಎಂಬುದೇ ದೇವಯ್ಯ ಅವರ ಸಿಟ್ಟಿಗೆ ಕಾರಣ.

ದೇವಯ್ಯ ಅವರನ್ನು ಸಮಾಧಾನ ಪಡಿಸಲು ಪ್ರತಾಪ್ ಸಿಂಹ ಯತ್ನಿಸಿದರಾದರೂ ದೇವಯ್ಯ ತಣ್ಣಗಾಗಲಿಲ್ಲ. 'ನಿಮ್ಮಂತಹವರಿಂದಲೇ ಪಕ್ಷ ಹಾಳಾಗುತ್ತಿರುವುದು, ಮೊದಲು ನಮ್ಮ ಜೊತೆ ಚರ್ಚೆ ಮಾಡಿ ಆ ನಂತರ ಮಾಹಿತಿ ನೀಡಬೇಕು, ನಿಮ್ಮಂತವರಿಂದ ಪಕ್ಷ ಉದ್ಧಾರವಾಗಲ್ಲ' ಎಂದು ಸಾರ್ವಜನಿಕವಾಗಿಯೇ ತರಾಟೆಗೆ ತೆಗೆದುಕೊಂಡರು.
ಜಮೀನೊಂದು ಖಾಸಗಿ ಸಂಸ್ಥೆಗೆ ಭೂ ಪರಿವರ್ತನೆ ಎಂದು ಪ್ರತಾಪ್ ಸಿಂಹ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅದು ಸಂಪೂರ್ಣ ತಪ್ಪು, ಪ್ರತಾಪ್ ಸಿಂಹ ಜನರನ್ನು ಒಕ್ಕಲೆಬ್ಬಿಸುವ ಯತ್ನ ಮಾಡುತ್ತಿದ್ದಾರೆ. ಆ ನಂತರ ದೇವಯ್ಯ ಅವರು ಮಾಧ್ಯಮಗಳ ಜೊತೆ ಮಾತನಾಡಿ ಹೇಳಿದ್ದಾರೆ.
ಈ ಮುಂಚೆ ಇದೇ ದೇವಯ್ಯ ಅವರು ಬಿಜೆಪಿ ಶಾಸಕರಾದ ಅಪ್ಪಚ್ಚು ರಂಜನ್, ಬೋಪಯ್ಯ ಅವರ ವಿರುದ್ಧವೂ ಹರಿಹಾಯ್ದಿದ್ದರು ಎನ್ನಲಾಗಿದೆ.
-
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ












Click it and Unblock the Notifications