ಪರಸ್ಪರ ಕಾಲೆಳೆದುಕೊಂಡ ಪ್ರತಾಪ್ ಸಿಂಹ- ಸಚಿವ ವೆಂಕಟರಮಣಪ್ಪ
ಮೈಸೂರು, ನವೆಂಬರ್ 28 : ಬರೀ ಭಾಷಣಕಾರರಾದರೇ ಸಾಲದು. ಮಾತಿಗಿಂತ ಕೃತಿ ಲೇಸು ಎಂಬುದನ್ನು ಅರಿತು ಕೆಲಸ ಮಾಡಬೇಕು ಎಂದು ವೇದಿಕೆಯಲ್ಲೇ ರಾಜ್ಯ ಕಾರ್ಮಿಕ ಸಚಿವ ವೆಂಕಟರಮಣಪ್ಪಗೆ ಸಂಸದ ಪ್ರತಾಪ್ ಸಿಂಹ ಟಾಂಗ್ ಕೊಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನಲ್ಲಿ ನೂತನ ಇಎಸ್ ಐ ಆಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮದ ವೇಳೆ ವೇದಿಕೆಯಲ್ಲೇ ನೇರವಾಗಿ ತಮ್ಮ ಕಾಲೆಳೆದ ಸಚಿವ ವೆಂಕಟರಮಣ್ಣಪ್ಪಗೆ ಸಂಸದ ಪ್ರತಾಪ್ ಸಿಂಹ ತಮ್ಮದೇ ದಾಟಿಯಲ್ಲಿ ತಿರುಗೇಟು ನೀಡಿದರು.
ಕಾರ್ಯಕ್ರಮದಲ್ಲಿ ನಡೆದಿದ್ದೇನು ?
ಆಸ್ಪತ್ರೆ ಉದ್ಘಾಟನೆಯಾದ ಬಳಿಕ ಮೊದಲು ಮಾತನಾಡಿದ ಸಂಸದ ಪ್ರತಾಪ್ ಸಿಂಹ , 2012ರಲ್ಲಿ ಸಂಸದನಾದಾಗ ಈ ಆಸ್ಪತ್ರೆಗೆ ಹಣ ಬಿಡುಗಡೆಗೊಂಡಿದ್ದರೂ ಸರಿಯಾಗಿ ಕೆಲಸ ಮಾಡದೆ ನಿಂತಿತ್ತು. ಹೀಗಾಗಿ ಮತ್ತೆ 9 ಕೋಟಿ ಅನುದಾನ ತಂದು ಕಾಮಗಾರಿ ಪೂರ್ಣಗೊಳಿಸಿದೆ. ನೂತನ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಇದೆ. ಹೀಗಾಗಿ ರಾಜ್ಯದ ಸಚಿವರು ಗಮನಹರಿಸಿಬೇಕು.

ಜೊತೆಗೆ ಮೈಸೂರಿನ ಇಎಸ್ ಐ ಆಸ್ಪತ್ರೆ ಕೇಂದ್ರ ಸರ್ಕಾರದ ಸುಪರ್ದಿಗೆ ವಹಿಸಿಕೊಟ್ಟರೆ ಉತ್ತಮ ರೀತಿಯಲ್ಲಿ ಆರೋಗ್ಯ ಸೇವೆ ಒದಗಿಸಲಾಗುವುದು ಎಂದು ತಿಳಿಸಿದರು.
ಇದಾದ ನಂತರ ಕಾರ್ಮಿಕ ಸಚಿವ ವೆಂಕಟರಮಣಪ್ಪ ಭಾಷಣ ಆರಂಭಿಸಿ,ಕಾರ್ಮಿಕ ಇಲಾಖೆಯಲ್ಲಿ ನಾವು ಸಾಕಷ್ಟು ಬದಲಾವಣೆ ತಂದಿದ್ದೇವೆ. ಈ ನಡುವೆ ಬಹಳಷ್ಟು ವೈದ್ಯರ ಕೊರತೆ ಇದ್ದು, ನರ್ಸ್ ಗಳು ಫಾರ್ಮಾಸಿಸ್ಟ್ ಗಳ ಕೊರತೆಯನ್ನ ನೀಗಿಸುವಂತೆ ಕೆಪಿಎಸ್ ಸಿಗೆ ತಿಳಿಸಿದ್ದೇವೆ ಎಂದರು.
ಇದೇ ವೇಳೆ ಪ್ರತಾಪ್ ಸಿಂಹ ಕುರಿತು ನೇರವಾಗಿ ಮಾತನಾಡಿದ ವೆಂಕಟರಮಣಪ್ಪ, ಪ್ರತಾಪ್ ಸಿಂಹ ಕೇವಲ ಮಾತನಾಡಬಾರದು. ಹೇಳಿದ ಮಾತು ಕಾರ್ಯಗತವಾಗಬೇಕು. ಕೇವಲ ಭಾಷಣಕಾರರಾಗಬಾರದು ಎಂದು ವೇದಿಕೆಯಲ್ಲೇ ಚಾಟಿ ಬೀಸಿದರು.

ವೆಂಕಟರಮಣಪ್ಪ ಭಾಷಣ ಮಗಿದ ಬಳಿಕ ಹೇಳಿಕೆಗೆ ಗರಂ ಆದ ಸಂಸದ ಪ್ರತಾಪ್ ಸಿಂಹ ಮತ್ತೆ ಮೈಕ್ ಮುಂದೆ ನಿಂತು ವೇದಿಕೆಯಲ್ಲೇ ಸಚಿವರನ್ನ ತರಾಟೆ ತೆಗೆದುಕೊಂಡರು. ನಾನು ಹೇಳಿದಂತೆ ಮಾಡಿದ್ದೇನೆ. ಮೈಸೂರಲ್ಲಿ ಬಂಗಲೆ ಕಟ್ಟಲು ಅಥವಾ ಕೊಡಗಿನಲ್ಲಿ ಎಸ್ಟೇಟ್ ಖರೀದಿಸಲು ಬಂದಿಲ್ಲ ಎಂದ ಖಾರವಾಗಿ ನುಡಿದರು.
ಮೈಸೂರಿನಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರ ತೆರೆಯುವುದಾಗಿ ಹೇಳಿದ್ದೆ. ಬ್ರಾಂಡ್ ನ್ಯೂ ಎರ್ ಪೋರ್ಟ್ ನಿರ್ಮಾಣಕ್ಕೆ 700 ಕೋಟಿ ಬಿಡುಗಡೆ ಮಾಡಿಸಿದ್ದೇನೆ. ಮೈಸೂರು - ಮಡಿಕೇರಿ ಚತುಷ್ಪತ ರಸ್ತೆ ನಿರ್ಮಾಣಕ್ಕೆ ಹಣ ಬಿಡುಗಡೆಗೊಳಿಸಲಾಗಿದೆ. ಹೀಗಾಗಿ ಮೊದಲು ರಾಜ್ಯ ಸರ್ಕಾರ ರಸ್ತೆ ನಿರ್ಮಾಣಕ್ಕೆ ಭೂಮಿ ನೀಡಲಿ ಎಂದು ಸಚಿವ ವೆಂಕಟರಮಣಪ್ಪಗೆ ತಿರುಗೇಟು ನೀಡಿದರು.
ಈ ವೇಳೆ ಸಂಸದರಾದ ಧೃವನಾರಾಯಣ್, ಶಾಸಕ ತನ್ವೀರ್ ಸೇಠ್, ಬಿಜೆಪಿ ಶಾಸಕ ಎಲ್ ನಾಗೇಂದ್ರ, ಅಶ್ವಿನ್ ಕುಮಾರ್ , ಜಿಲ್ಲಾ ಪಂಚಾಯತ್ ಅಧ್ಯಕ್ಷೆ ನಹಿಮಾ ಸುಲ್ತಾನ್ ಭಾಗಿಯಾಗಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications