ಘಟನೆಗೆ ಜಿಲ್ಲಾಡಳಿತವೇ ಕಾರಣ : ಪ್ರತಾಪ್ ಸಿಂಹ
ಮೈಸೂರು, ಡಿಸೆಂಬರ್ 04 : ಜಿಲ್ಲಾಧಿಕಾರಿ ಆಜ್ಞೆ ಉಲ್ಲಂಘಿಸಿ, ಪೊಲೀಸರನ್ನು ನಿಂದಿಸಿ, ಬ್ಯಾರಿಕೆಡ್ ಮೇಲೆ ಕಾರು ಚಲಾಯಿಸಿಕೊಂಡು ಹೋಗಿ ವಿವಾದ ಎಬ್ಬಿಸಿದ್ದ ಪ್ರತಾಪ್ ಸಿಂಹ ಅವರು ಘಟನೆ ಕುರಿತು ತಮ್ಮ ನಿಲುವು ವ್ಯಕ್ತಪಡಿಸಲು ಇಂದು (ಡಿಸೆಂಬರ್ 04) ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹುಣಸೂರಿನಲ್ಲಿ ನಿನ್ನೆ(ಡಿಸೆಂಬರ್ 04) ನಡೆದ ಘಟನೆಗೆ ಮೈಸೂರು ಜಿಲ್ಲಾಡಳಿತವೇ ನೇರ ಹೊಣೆ ಎಂದರು. ಜಿಲ್ಲಾಡಳಿತದ ವೈಫಲ್ಯದಿಂದಲೇ ಈ ರೀತಿಯ ಅಹಿತಕರ ಘಟನೆ ನಡೆದದ್ದು ಎಂದ ಅವರು ಮೈಸೂರು ಎಸ್ಪಿ ರವಿ ಚೆನ್ನಣ್ಣನವರ್ ಸರ್ಕಾರದ ಅಣತಿಯಂತೆ ಕೆಲಸ ಮಾಡುತ್ತಿದ್ದಾರೆ, ಅವರು ಸರ್ಕಾರದ ಆಳು ಎಂದು ಟೀಕಿಸಿದರು.

ಪ್ರತಾಪ್ ಸಿಂಹ ಅವರ ನಡೆಯನ್ನು ಗೂಂಡಾ ಸಂಸ್ಕೃತಿ ಎಂದಿದ್ದ ಕಾಂಗ್ರೆಸ್ ಮುಖಂಡರ ಟೀಕೆಗೆ ಉತ್ತರಿದ ಪ್ರತಾಪ್ ಸಿಂಹ 'ಗೂಂಡಾ ಸಂಸ್ಕೃತಿ ನನ್ನದಲ್ಲ, ಸಿ.ಎಂ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಅವರ ಅಪ್ಪ ಗುಂಡೂರಾವ್ ಅವರು ಗೂಂಡಾ ರಾಜಕೀಯ ಮಾಡಿದ್ದಾರೆ ಎಂದು ಕಿಡಿಕಾರಿದರು.
ಕಾರಿನಲ್ಲಿ ಬ್ಯಾರಿಕೆಡ್ ಗುದ್ದಿ ಹೋದದನ್ನು ಸಮರ್ಥನೆ ಮಾಡಿಕೊಂಡ ಅವರು 'ನಿನ್ನೆ ಪೊಲೀಸರು ನನ್ನ ಧಾರ್ಮಿಕ ಭಾವನೆಗೆ ಧಕ್ಕೆ ಮಾಡಿದರು ಹೀಗಾಗಿ ನಾನೆ ನನ್ನ ಕಾರಿನಲ್ಲಿ ಬಲವಂತವಾಗಿ ತೆರಳಬೇಕಾಯ್ತು' ಎಂದರು.
ಅಮಿತ್ ಷಾ ಅವರ ಆಣತಿಯಂತೆ ಬೇಕೆಂದೇ ಗದ್ದಲ ಸೃಷ್ಠಿ ಮಾಡಲಾಗಿದೆ ಎಂಬ ಆರೋಪವನ್ನು ತಳ್ಳಿ ಹಾಕಿದ ಪ್ರತಾಪ್ ಸಿಂಹ "ಘಟನೆಗೂ ಅಮಿತ್ ಷಾ ಅವರಿಗೂ ಸಂಬಂಧವಿಲ್ಲ, ಅವರು ಎಂದೂ ಸಮಾಜದ ಶಾಂತಿ ಕದಡಿ ಉಗ್ರ ಹೋರಾಟ ಮಾಡುವಂತೆ ಸೂಚನೆ ನೀಡಿಲ್ಲ' ಎಂದರು. ಆದರೆ ಈ ಹಿಂದೆ ಪ್ರತಾಪ್ ಸಿಂಹ ಅವರೇ ಮಾಡಿರುವ ವಿಡಿಯೋದಲ್ಲಿ ಅಮಿತ್ ಷಾ ಉಗ್ರ ಹೋರಾಟ ಮಾಡಿರೆಂದು ಸೂಚನೆ ನೀಡಿದ್ದಾರೆ ಎಂದು ಹೇಳಿದ್ದರು.
ಹುಣಸೂರಿನ ಇಂದಿನ ಸ್ಥಿತಿ ಹೀಗಿದೆ...
ಇನ್ನು ನಿನ್ನೆ ಹನುಮ ಜಯಂತಿ ಆಚರಣೆ ವೇಳೆ ಹುಣಸೂರಿನಲ್ಲಿ ನಡೆದ ಘರ್ಷಣೆ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ಮುನೇಶ್ವರ ಕಾವಲ್ ಮೈದಾನದಲ್ಲಿ ಇರಿಸಲಾಗಿದ್ದ ಹನುಮನ ಮೂರ್ತಿಯನ್ನು ತೆರವುಗೊಳಿಸಲಾಗಿದೆ. ಕಾವಲ್ ಮೈದಾನದಿಂದ ಬ್ರಾಹ್ಮಣ ಬೀದಿಯಲ್ಲಿರುವ ರಂಗನಾಥ ದೇವಾಲಯಕ್ಕೆ ಹನುಮನ ಬೃಹತ್ ಮೂರ್ತಿಯನ್ನು ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ಟ್ರ್ಯಾಕ್ಟರ್ ಗಳ ಮೂಲಕ ಸ್ಥಳಾಂತರ ಮಾಡಲಾಗಿದೆ.
ನಿನ್ನೆ ನಡೆದ ಗಲಾಟೆಯಲ್ಲಿ ಕಲ್ಲು ತೂರಾಟ ನಡೆದಿದ್ದ ಹುಣಸೂರು ಪಟ್ಟಣದಲ್ಲಿ ಇಂದು ಬಂದ್ ಗೆ ಕರೆ ನೀಡಲಾಗಿದೆ. ಬೆಳಗ್ಗೆಯಿಂದಲೇ ಹುಣಸೂರು ಪಟ್ಟಣ ಬಿಕೋ ಎನ್ನುತ್ತಿದ್ದು, ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ಸರ್ಕಾರಿ ಬಸ್ಗಳು ರಸ್ತೆಗೆ ಇಳಿದಿಲ್ಲ. ಮುಂಜಾಗ್ರತಾ ಕ್ರಮವಾಗಿ ಹುಣಸೂರಿನಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ












Click it and Unblock the Notifications