ಮಾರ್ಚ್ 11ರಂದು ಮೈಸೂರಿನಲ್ಲಿ ತೊಗಾಡಿಯಾ ಭಾಷಣ
ಮೈಸೂರು, ಫೆ. 25 : ಮೈಸೂರಿನಲ್ಲಿ ಮಾರ್ಚ್ 11ರಂದು ವಿರಾಟ್ ಹಿಂದೂ ಸಮಾಜೋತ್ಸವ ನಡೆಯಲಿದೆ. ವಿಶ್ವಹಿಂದೂ ಪರಿಷತ್ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಸಮಾಜೋತ್ಸವ ಉದ್ದೇಶಿಸಿ ಮಾತನಾಡಲಿದ್ದಾರೆ. ಮಾರ್ಚ್ ತಿಂಗಳಿನಲ್ಲಿ ರಾಜ್ಯದಲ್ಲಿ ನಾಲ್ಕು ಸಮಾವೇಶ ಉದ್ದೇಶಿಸಿ ತೊಗಾಡಿಯಾ ಭಾಷಣ ಮಾಡಲಿದ್ದಾರೆ.
ಮೈಸೂರಿನಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ವಿರಾಟ್ ಹಿಂದೂ ಸಮಾಜೋತ್ಸವದ ಕಾರ್ಯಾಧ್ಯಕ್ಷ ರಾಜೇಂದ್ರ ಅವರು, ನಗರದ ದೊಡ್ಡಕೆರೆ ಮೈದಾನದಲ್ಲಿ ಮಾರ್ಚ್ 11ರಂದು ನಾಲ್ಕು ಗಂಟೆಗೆ ಸಮಾಜೋತ್ಸವ ಆಯೋಜಿಸಲಾಗಿದೆ ಎಂದು ಹೇಳಿದರು. [ಮಂಗಳೂರಿನಲ್ಲಿ ಮಾರ್ಚ್ 1ರಂದು ಸಮಾಜೋತ್ಸವ]

ವಿಶ್ವಹಿಂದೂ ಪರಿಷತ್ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಸಮಾಜೋತ್ಸವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ತೊಗಾಡಿಯಾ ಅವರು ಬೆಂಗಳೂರು ಸಮಾವೇಶದಲ್ಲಿ ಭಾಷಣ ಮಾಡದಂತೆ ಪೊಲೀಸರು ನಿಷೇಧ ಹೇರಿದ್ದರು. ಆ ನಿಷೇಧ ಮೈಸೂರಿಗೆ ಅನ್ವಯವಾಗುವುದಿಲ್ಲ ಎಂದರು. [ಬೆಂಗಳೂರಿನಲ್ಲಿ ತೊಗಾಡಿಯಾ ಮಾಡಿದ ಭಾಷಣ]
ಮೈಸೂರಿನ ಸಮಾವೇಶದಲ್ಲಿ ಪ್ರವೀಣ್ ತೊಗಾಡಿಯಾ ಭಾಗವಹಿಸಲಿದ್ದಾರೆ ಎಂದು ಪೊಲೀಸರಿಗೆ ಈಗಾಗಲೇ ಮಾಹಿತಿ ನೀಡಲಾಗಿದೆ. ಪೊಲೀಸರಿಂದ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ತಿಳಿಸಿದರು.
ಹಿಂದೂ ಸಮಾಜೋತ್ಸವದ ಅಧ್ಯಕ್ಷತೆಯನ್ನು ಮೈಸೂರು ವಿವಿ ವಿಶ್ರಾಂತ ಕುಲಪತಿ ಡಾ.ಕೆ.ಚಿದಾನಂದಗೌಡ ವಹಿಸಲಿದ್ದಾರೆ. ವಿಜಯ ವಿಠಲ ಸಂಸ್ಥೆ ಕಾರ್ಯದರ್ಶಿ ವಾಸುದೇವ ಭಟ್, ಕೌಟಿಲ್ಯ ವಿದ್ಯಾಸಂಸ್ಥೆ ಆರ್.ರಘು, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವು ಮುಖಂಡರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ನಾಲ್ಕು ಭಾಷಣ ಮಾಡಲಿದ್ದಾರೆ ತೊಗಾಡಿಯಾ : ಬೆಂಗಳೂರಿನಲ್ಲಿ ಪ್ರವೀಣ್ ತೊಗಾಡಿಯಾ ಭಾಷಣ ಮಾಡದಂತೆ ಪೊಲೀಸರು ನಿಷೇಧ ಹೇರಿದ್ದರು. ಆದರೆ, ಮಾರ್ಚ್ ತಿಂಗಳಿನಲ್ಲಿ ತೊಗಾಡಿಯಾ ಅವರು ರಾಜ್ಯದಲ್ಲಿ ನಾಲ್ಕು ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.
ಉಡುಪಿಯಲ್ಲಿ ಮಾರ್ಚ್ 9ರಂದು, ಚಿಕ್ಕಮಗಳೂರು ಮತ್ತು ಹಾಸನದಲ್ಲಿ ಮಾರ್ಚ್ 10 ರಂದು, ಮಾರ್ಚ್ 11ರಂದು ಮೈಸೂರಿನಲ್ಲಿ ಹಿಂದೂ ಸಮಾಜೋತ್ಸವ ಉದ್ದೇಶಿಸಿ ಅವರು ಮಾತನಾಡಲಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications