ರಾಮದಾಸ್ ಅವರೇ ನನ್ನ ಗಂಡ ಎಂದ ಪ್ರೇಮಕುಮಾರಿ!
ಮೈಸೂರು, ಫೆ. 5 : ನಾನು ಮಾಜಿ ಸಚಿವ ಎಸ್.ಎ. ರಾಮದಾಸ್ ಅವರನ್ನು ಪತಿಯಾಗಿ ಸ್ವೀಕರಿಸಿದ್ದು, ಅವರೊಡನೆ ಬಾಳಬೇಕೆಂದು ಹೋರಾಟ ನಡೆಸುತ್ತಿರುವುದು ತಪ್ಪೇ? ನನಗೇಕೆ ಈ ರೀತಿ ತೊಂದರೆ ನೀಡಲಾಗುತ್ತಿದೆ? ಎಂದು ಪ್ರೇಮಕುಮಾರ್ ಖಾರವಾಗಿ ಪ್ರಶ್ನಿಸಿದ್ದಾರೆ.
ಮೈಸೂರಿನ ಪತ್ರಿಕಾಭವನದಲ್ಲಿ ಗುರುವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅಳಲು ತೋಡಿಕೊಂಡ ಪ್ರೇಮಕುಮಾರಿ, ಸರ್ಕಾರದಿಂದ ನನಗೆ ಅನ್ಯಾಯವಾಗುತ್ತಿದೆ, ರಾಜೀನಾಮೆಯನ್ನೂ ಸ್ವೀಕರಿಸುತ್ತಿಲ್ಲ, ಸಂಬಳವನ್ನೂ ನೀಡುತ್ತಿಲ್ಲ. ನನಗೆ ನ್ಯಾಯ ಕೊಡಿಸಿ ಎಂದು ಗೋಳು ತೋಡಿಕೊಂಡರು.
ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿ 3 ತಿಂಗಳಾದರೂ ಅದನ್ನು ಅಂಗೀಕರಿಸಿಲ್ಲ. ಅಷ್ಟೇ ಅಲ್ಲದೆ ನನಗೆ ಸರ್ಕಾರ ಯಾವುದೇ ಸವಲತ್ತುಗಳನ್ನು ನೀಡದೆ ಮಾನಸಿಕವಾಗಿ ಕಿರುಕುಳ ನೀಡುತ್ತಿದೆ. ನಾನು ರಾಮದಾಸ್ರೊಂದಿಗೆ ಬಾಳ್ವೆ ನಡೆಸಲು ಹೋರಾಟ ಮಾಡುತ್ತಿದ್ದು, ಪ್ರಾರಂಭದಿಂದಲೂ ನನಗೆ ತುಂಬಾ ಅನ್ಯಾಯವಾಗುತ್ತಿದೆ. ದ್ವಿತೀಯ ದರ್ಜೆ ಗುಮಾಸ್ತೆಯಾಗಿರುವ ತನ್ನನ್ನು ಹಲವು ಬಾರಿ ವರ್ಗಾವಣೆ ಮಾಡಿದ್ದಲ್ಲದೆ, ಎಂಟು ತಿಂಗಳಿನಿಂದ ಯಾವುದೇ ವೇತನ ನೀಡದೆ ಸತಾಯಿಸಲಾಗುತ್ತಿದೆ ಎಂದು ಆರೋಪಿಸಿದರು. ['ಪ್ರೇಮಾ' ಪುರಾಣ ಬಯಲು]

ವೇತನದ ಕುರಿತು ತುಮಕೂರು ಕಚೇರಿಯಲ್ಲಿ ವಿಚಾರಿಸಿದರೂ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಸಿಎಂ ಸಮ್ಮುಖದಲ್ಲೇ ಮಹಿಳಾ ಆಯೋಗದ ಅಧ್ಯಕ್ಷರಿಗೆ ಮನವಿ ಸಲ್ಲಿಸಿದ್ದರೂ, ಸಮಸ್ಯೆ ಏನೆಂದು ಕೇಳುವ ಸೌಜನ್ಯ ತೋರಲಿಲ್ಲ. ಇದರಿಂದ ಬೇಸತ್ತು ಮೂರು ತಿಂಗಳ ಹಿಂದೆ ಸ್ವಯಂ ಪ್ರೇರಣೆಯಿಂದ ರಾಜೀನಾಮೆ ನೀಡಿದ್ದು, ಇದನ್ನು ಅಂಗೀಕರಿಸದೆ ಕಡತವನ್ನು ವಿಲೇವಾರಿ ಮಾಡಿಲ್ಲ. ಬದಲಿಗೆ ನೋಟೀಸ್ ಜಾರಿ ಮಾಡಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ನಾನು ಎಂಟು ತಿಂಗಳಿನಿಂದ ವೇತನವಿಲ್ಲದೆ ತೊಂದರೆ ಅನುಭವಿಸುತ್ತಿದ್ದೇನೆ. ಇದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ ಎಂದು ಅಳಲು ತೋಡಿಕೊಂಡರು. [ರಾಮದಾಸ್ ಆತ್ಮಹತ್ಯೆಗೆ ಯತ್ನ]
ಮಾಜಿ ಸಚಿವ ಎಸ್.ಎ. ರಾಮದಾಸ್ ಜತೆ ನನ್ನ ಹೆಸರು ಬೆರೆತುಹೋಗಿದೆ. ಅವರೇ ನನ್ನ ಗಂಡ. ನಮ್ಮಿಬ್ಬರನ್ನು ಯಾರಿಂದಲೂ ಬೇರ್ಪಡಿಸಲು ಸಾಧ್ಯವಿಲ್ಲ. ಅವರು ಯಾವುದೇ ಸಮಯದಲ್ಲಿ ನನ್ನ ಮನೆಗೆ ಬರಬಹುದು ಎಂದು ಹೇಳುವ ಮೂಲಕ ಮತ್ತೊಮ್ಮೆ ರಾಮದಾಸ್ ನನ್ನ ಪತಿ ಎಂದು ಹೇಳುವುದನ್ನು ಮರೆಯಲಿಲ್ಲ. [ಪ್ರೇಮಕುಮಾರಿ ಪ್ರಕರಣಕ್ಕೆ ಹೊಸಜೀವ!]
-
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ












Click it and Unblock the Notifications