ರಾಮದಾಸ್ ಅವರೇ ನನ್ನ ಗಂಡ ಎಂದ ಪ್ರೇಮಕುಮಾರಿ!
ಮೈಸೂರು, ಫೆ. 5 : ನಾನು ಮಾಜಿ ಸಚಿವ ಎಸ್.ಎ. ರಾಮದಾಸ್ ಅವರನ್ನು ಪತಿಯಾಗಿ ಸ್ವೀಕರಿಸಿದ್ದು, ಅವರೊಡನೆ ಬಾಳಬೇಕೆಂದು ಹೋರಾಟ ನಡೆಸುತ್ತಿರುವುದು ತಪ್ಪೇ? ನನಗೇಕೆ ಈ ರೀತಿ ತೊಂದರೆ ನೀಡಲಾಗುತ್ತಿದೆ? ಎಂದು ಪ್ರೇಮಕುಮಾರ್ ಖಾರವಾಗಿ ಪ್ರಶ್ನಿಸಿದ್ದಾರೆ.
ಮೈಸೂರಿನ ಪತ್ರಿಕಾಭವನದಲ್ಲಿ ಗುರುವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅಳಲು ತೋಡಿಕೊಂಡ ಪ್ರೇಮಕುಮಾರಿ, ಸರ್ಕಾರದಿಂದ ನನಗೆ ಅನ್ಯಾಯವಾಗುತ್ತಿದೆ, ರಾಜೀನಾಮೆಯನ್ನೂ ಸ್ವೀಕರಿಸುತ್ತಿಲ್ಲ, ಸಂಬಳವನ್ನೂ ನೀಡುತ್ತಿಲ್ಲ. ನನಗೆ ನ್ಯಾಯ ಕೊಡಿಸಿ ಎಂದು ಗೋಳು ತೋಡಿಕೊಂಡರು.
ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿ 3 ತಿಂಗಳಾದರೂ ಅದನ್ನು ಅಂಗೀಕರಿಸಿಲ್ಲ. ಅಷ್ಟೇ ಅಲ್ಲದೆ ನನಗೆ ಸರ್ಕಾರ ಯಾವುದೇ ಸವಲತ್ತುಗಳನ್ನು ನೀಡದೆ ಮಾನಸಿಕವಾಗಿ ಕಿರುಕುಳ ನೀಡುತ್ತಿದೆ. ನಾನು ರಾಮದಾಸ್ರೊಂದಿಗೆ ಬಾಳ್ವೆ ನಡೆಸಲು ಹೋರಾಟ ಮಾಡುತ್ತಿದ್ದು, ಪ್ರಾರಂಭದಿಂದಲೂ ನನಗೆ ತುಂಬಾ ಅನ್ಯಾಯವಾಗುತ್ತಿದೆ. ದ್ವಿತೀಯ ದರ್ಜೆ ಗುಮಾಸ್ತೆಯಾಗಿರುವ ತನ್ನನ್ನು ಹಲವು ಬಾರಿ ವರ್ಗಾವಣೆ ಮಾಡಿದ್ದಲ್ಲದೆ, ಎಂಟು ತಿಂಗಳಿನಿಂದ ಯಾವುದೇ ವೇತನ ನೀಡದೆ ಸತಾಯಿಸಲಾಗುತ್ತಿದೆ ಎಂದು ಆರೋಪಿಸಿದರು. ['ಪ್ರೇಮಾ' ಪುರಾಣ ಬಯಲು]

ವೇತನದ ಕುರಿತು ತುಮಕೂರು ಕಚೇರಿಯಲ್ಲಿ ವಿಚಾರಿಸಿದರೂ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಸಿಎಂ ಸಮ್ಮುಖದಲ್ಲೇ ಮಹಿಳಾ ಆಯೋಗದ ಅಧ್ಯಕ್ಷರಿಗೆ ಮನವಿ ಸಲ್ಲಿಸಿದ್ದರೂ, ಸಮಸ್ಯೆ ಏನೆಂದು ಕೇಳುವ ಸೌಜನ್ಯ ತೋರಲಿಲ್ಲ. ಇದರಿಂದ ಬೇಸತ್ತು ಮೂರು ತಿಂಗಳ ಹಿಂದೆ ಸ್ವಯಂ ಪ್ರೇರಣೆಯಿಂದ ರಾಜೀನಾಮೆ ನೀಡಿದ್ದು, ಇದನ್ನು ಅಂಗೀಕರಿಸದೆ ಕಡತವನ್ನು ವಿಲೇವಾರಿ ಮಾಡಿಲ್ಲ. ಬದಲಿಗೆ ನೋಟೀಸ್ ಜಾರಿ ಮಾಡಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ನಾನು ಎಂಟು ತಿಂಗಳಿನಿಂದ ವೇತನವಿಲ್ಲದೆ ತೊಂದರೆ ಅನುಭವಿಸುತ್ತಿದ್ದೇನೆ. ಇದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ ಎಂದು ಅಳಲು ತೋಡಿಕೊಂಡರು. [ರಾಮದಾಸ್ ಆತ್ಮಹತ್ಯೆಗೆ ಯತ್ನ]
ಮಾಜಿ ಸಚಿವ ಎಸ್.ಎ. ರಾಮದಾಸ್ ಜತೆ ನನ್ನ ಹೆಸರು ಬೆರೆತುಹೋಗಿದೆ. ಅವರೇ ನನ್ನ ಗಂಡ. ನಮ್ಮಿಬ್ಬರನ್ನು ಯಾರಿಂದಲೂ ಬೇರ್ಪಡಿಸಲು ಸಾಧ್ಯವಿಲ್ಲ. ಅವರು ಯಾವುದೇ ಸಮಯದಲ್ಲಿ ನನ್ನ ಮನೆಗೆ ಬರಬಹುದು ಎಂದು ಹೇಳುವ ಮೂಲಕ ಮತ್ತೊಮ್ಮೆ ರಾಮದಾಸ್ ನನ್ನ ಪತಿ ಎಂದು ಹೇಳುವುದನ್ನು ಮರೆಯಲಿಲ್ಲ. [ಪ್ರೇಮಕುಮಾರಿ ಪ್ರಕರಣಕ್ಕೆ ಹೊಸಜೀವ!]
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications