ಮಾ. ಸಚಿವ ರಾಮದಾಸ್ ಮೇಲೆ ಆರೋಪ ಮಾಡಿದ್ದ ಪ್ರೇಮಕುಮಾರಿ ಚುನಾವಣೆಗೆ
ಮೈಸೂರು, ಡಿಸೆಂಬರ್ 15: ಬಿಜೆಪಿಯ ಮಾಜಿ ಸಚಿವ ಎಸ್.ಎ.ರಾಮದಾಸ್ ಅವರ ವಿರುದ್ಧ ನಂಬಿಕೆ ದ್ರೋಹದ ಆರೋಪ ಮಾಡಿ ರಾಜ್ಯಾದ್ಯಂತ ಸುದ್ದಿಯಾಗಿದ್ದ ಪ್ರೇಮಕುಮಾರಿ ಅವರು 2018ರ ರಾಜ್ಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿದ್ದಾರೆ.
ಮಾಜಿ ಸಚಿವ ರಾಮದಾಸ್ ಅವರು ತನ್ನನ್ನು ಮದುವೆಯಾಗುತ್ತೇನೆಂದು ಹೇಳಿ ವಂಚಿಸಿದ್ದಾರೆ ಎಂದು ಪ್ರೇಮಕುಮಾರಿ ಆರೋಪ ಮಾಡಿದ್ದರು, ಆಗ ಇದು ರಾಜ್ಯದಲ್ಲೆಲ್ಲಾ ಸುದ್ದಿಯಾಗಿ, ರಾಮದಾಸ್ ಅವರು ಆತ್ಮಹತ್ಯೆ ಯತ್ನ ಕೂಡ ಮಾಡಿದ್ದರು.

ಪ್ರೇಮಕುಮಾರಿ ಅವರ ಆರೋಪಗಳಿಂದ ರಾಜಕೀಯವಾಗಿ ಭಾರಿ ಮುಖಭಂಗವನ್ನು ರಾಮದಾಸ್ ಅವರು ಅನುಭವಿಸಿದ್ದರು, ಆತ್ಮಹತ್ಯೆ ಯತ್ನದ ಬಳಿಕ ಪೊಲೀಸರು ಕೇಸು ದಾಖಲಿಸಿಕೊಂಡು ಇದೀಗ ಪ್ರಕರಣ ನ್ಯಾಯಾಲಯದಲ್ಲಿದೆ. ಈ ಮಧ್ಯೆ ಪ್ರೇಮಕುಮಾರಿ ಚುನಾವಣಾ ಕಣಕ್ಕೆ ಇಳಿಯುವುದಾಗಿ ಹೇಳಿರುವುದು ರಾಮದಾಸ್ ಅವರಿಗೆ ಹೊಸ ತಲೆ ನೋವು ತಂದಿಡುವ ಸಾಧ್ಯತೆ ಇದೆ.
ಜನಸೇವೆಯಲ್ಲಿ ನನಗೆ ಮುಂಚಿನಿಂದಲೂ ಆಸಕ್ತಿ ಇದ್ದು, ಚುನಾವಣೆಗೆ ಸ್ಪರ್ಧಿಸಿ ಗೆಲ್ಲುವ ಮೂಲಕ ಜನಸೇವೆಯ ಆಸೆಯನ್ನು ಪೂರೈಸಿಕೊಳ್ಳುವುದಾಗಿ ಅವರು ಸುದ್ದಿಗಾರರಿಗೆ ಹೇಳಿದ್ದಾರೆ.
'ರಾಮದಾಸ್ ಅವರು ಎಂದೆಂದಿಗೂ ನನ್ನ ಪತಿ ಎಂದಿರುವ ಅವರು, ಅವರೇ ನನ್ನ ರಾಜಕೀಯ ಮಾರ್ಗದರ್ಶಕರು ಕೂಡ ಎಂದು ಅವರು ಹೊಸ ಬಾಂಬ್ ಸಿಡಿಸಿರುವ ಅವರು ಅಗತ್ಯ ಬಿದ್ದರೆ ರಾಮದಾಸ್ ವಿರುದ್ಧವಾಗಿಯೂ ಸ್ಪರ್ಧಿಸುವುದಾಗಿಯೂ ಹೇಳಿದ್ದಾರೆ.
ನ್ಯಾಯಾಲಯದ ಅಡೆತಡೆಗಳು ಕೆಲವು ಇದ್ದು (ರಾಮದಾಸ್ ಪ್ರಕರಣ) ಅವುಗಳನ್ನು ಮುಗಿಸಿಕೊಂಡು ರಾಜಕೀಯಕ್ಕೆ ಪಾದಾರ್ಪಣೆ ಮಾಡುತ್ತೇನೆ, ಯಾವ ಪಕ್ಷಕ್ಕೆ ಸೇರುತ್ತೇನೆ ಎಂದು ಈಗಲೇ ಹೇಳುವುದಿಲ್ಲ ಎಂದು ಅವರು ಹೇಳಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications