ಚುನಾವಣೆಗೆ ಪ್ರೇಮಕುಮಾರಿ ರೆಡಿ: ರಾಮ್ ದಾಸ್ ವಿರುದ್ಧ ಕಿಡಿ
ಮೈಸೂರು, ಜನವರಿ 9: ನನಗೆ ಬಂದ ರಾಜಕೀಯ ಮತ್ತು ಸಿನಿಮಾರಂಗದ ಅವಕಾಶಗಳನ್ನು ಮಾಜಿ ಸಚಿವ ರಾಮ್ ದಾಸ್ ಪಿತೂರಿ ಮಾಡಿ ತಪ್ಪಿಸಿದ್ದಾರೆ. ಅಧಿಕಾರ, ಹಣ ದುರುಪಯೋಗ ಪಡಿಸಿಕೊಂಡು ಕಿರುಕುಳ ನೀಡಿದ್ದಾರೆ. ಸಾಮಾಜಿಕ ಹೋರಾಟಕ್ಕಾಗಿ ನಾನು ರಾಜಕೀಯ ಪ್ರವೇಶಿಸುವೆ ಎಂದು ಪ್ರೇಮಕುಮಾರಿ ಮಾಜಿ ಸಚಿವರ ವಿರುದ್ಧ ಬಾಂಬ್ ಸಿಡಿಸಿದರು.[ರಾಮದಾಸ್ ವಿದೇಶಕ್ಕೆ; ಪ್ರೇಮ ಸತ್ಯಾಗ್ರಹಕ್ಕೆ ಸಜ್ಜು]
ಎರಡು ವರ್ಷದ ಹಿಂದೆ ರಾಮ್ ದಾಸ್, ಪ್ರೇಮಕುಮಾರಿ ನಡುವಿನ ಪ್ರೇಮ ಪ್ರಕರಣ ಮಾಸುವ ಮುನ್ನವೇ ಮರುಜೀವ ಪಡೆದಿದೆ. ಪತ್ರಕರ್ತರ ಭವನದಲ್ಲಿ ಪ್ರೇಮಕುಮಾರಿ ಮಾತನಾಡಿ, ರಾಮ್ ದಾಸ್ ಅವರು ತಮ್ಮ ಹಣ, ಅಧಿಕಾರ ದುರುಪಯೋಗ ಪಡಿಸಿಕೊಂಡು ನನಗೆ ಕರುಕುಳ ನೀಡುತ್ತಿದ್ದಾರೆ. ಹಾಲಿ ಇರುವ ಪ್ರಕರಣದ ಸಾಕ್ಷಿಗಳನ್ನು ನಾಶಪಡಿಸಿ ತಾನು ದೋಷಮುಕ್ತವೆಂದು ಬೀಗುತ್ತಿದ್ದಾರೆ ಎಂದರು.
ನಾನು ಸಾಮಾಜಿಕ ಹೋರಾಟ ಮಾಡಲಿದ್ದೇನೆ. ಇದಕ್ಕಾಗಿ ರಾಜಕೀಯ ಪ್ರವೇಶ ಅನಿವಾರ್ಯವಾಗಿದ್ದು, ಯಾವ ಪಕ್ಷವೆಂದು ಇನ್ನೂ ನಿರ್ಧಾರವಾಗಿಲ್ಲ, ಯಾವುದೇ ಪಕ್ಷ ಸರಿಹೊಂದದಿದ್ದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವೆ ಎಂದರು.[ರಾಮದಾಸ್ - ಪ್ರೇಮಕುಮಾರಿ ಪ್ರಕರಣಕ್ಕೆ ಹೊಸಜೀವ!]

ಸರ್ಕಾರದಿಂದ ತನಿಖಾ ವರದಿ ಹಾಗೂ ದಾಖಲೆ ಸೋರಿಕೆಯಾಗಿವೆ. ತಮ್ಮ ಪ್ರಭಾವ ಬೀರಿ, ನನಗೆ ರಾಜಕೀಯ ಮತ್ತು ಸಿನಿಮಾರಂಗದಿಂದ ಬಂಧ ಅವಕಾಶಗಳನ್ನು ಪಿತೂರಿ ಮಾಡಿ ತಪ್ಪಿಸಿದ್ದಾರೆ ಎಂದರು. ಅವರ ರಾಜಕೀಯ ಬೆಳವಣಿಗೆಗಾಗಿ ನಾನು ದಾಖಲಿಸಿದ್ದ ಎಲ್ಲ ಪ್ರಕರಣಗಳನ್ನು ಒತ್ತಾಯ ಪೂರ್ವಕವಾಗಿ ಮುಚ್ಚಿಹಾಕಿದ್ದಾರೆ ಎಂದರು. ಈ ಬಗ್ಗೆ ಬಿಜೆಪಿಯ ಯಡಿಯೂರಪ್ಪ ಮುಂತಾದ ಮುಖಂಡರನ್ನು ಕೇಳಿಕೊಂಡರೂ ಅವರೂ ಸಹ ಸ್ಪಂದಿಸಿಲ್ಲ ಎಂದರು.[ರಾಮದಾಸ್ ಅವರೇ ನನ್ನ ಗಂಡ ಎಂದ ಪ್ರೇಮಕುಮಾರಿ!]

ಜುಗಲ್'ಬಂದಿಗೆ ಸಿದ್ಧ!
ರಾಮ್ ದಾಸ್ ತಮ್ಮ ವಿರುದ್ಧ ಸಿಐಡಿ ಹಾಗೂ ಇತರೆ ಕ್ರಿಮಿನಲ್ ಆರೋಪಗಳನ್ನು ಸೃಷ್ಟಿಸಿದ್ದಾರೆ. ಬ್ಲಾಕ್ಮೇಲ್ ಮಾಡುತ್ತಿದ್ದೇನೆ ಎಂದು ಆರೋಪಿಸಿದ್ದಾರೆ. ಅವರು ಸಾರ್ವಜನಿಕವಾಗಿ ನನ್ನೆಲ್ಲಾ ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದರು. ಈ ಹಿನ್ನೆಲೆ ಜುಗಲ್ ಬಂದಗೂ ತಯಾರಿರುವುದಾಗಿ ತಿಳಿಸಿದರು.
ಪ್ರಾಯಶ್ಚಿತ್ತದ ಮನಸ್ಸಿದ್ದರೆ ರಾಮದಾಸ್ ಅವರು ತಮ್ಮ ತಪ್ಪನ್ನು ತಿದ್ದಿಕೊಳ್ಳುತ್ತಿದ್ದರು. ನಿರ್ದೋಷಿಯಾದ ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಿ ವ್ಯವಸ್ಥಿತವಾಗಿ ತುಳಿಯುಲು ಪ್ರಯತ್ನಿಸುತ್ತಿರಲಿಲ್ಲ ಎಂದರು.
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications