ರಾಮದಾಸ್ ಬೆನ್ನು ಬಿಡದ ಪ್ರೇಮಕುಮಾರಿ, ಕಚೇರಿ ಮುಂದೆ ಪ್ರತಿಭಟನೆ
ಮೈಸೂರು, ಜೂನ್ 21: ಪ್ರೇಮಕುಮಾರಿ ಅವರು ಬಿಜೆಪಿ ಶಾಸಕ ರಾಮದಾಸ್ ಅವರ ಬೆನ್ನು ಬಿಡುವಂತೆ ಕಾಣುತ್ತಿಲ್ಲ. ಕೆಲವು ದಿನ ತಣ್ಣಗಾಗಿದ್ದ ಇವರಿಬ್ಬರ ಪ್ರಕರಣದ ಸುದ್ದಿ ಈಗ ಮತ್ತೆ ಗರಿಗೆದರಿದೆ.
ತಾನು ರಾಮದಾಸ್ ಅವರ ಮಡದಿ ಎಂದು ಅವರ ವಿರುದ್ಧ ಕೋರ್ಟ್ ಮೆಟ್ಟಿಲೇರಿರುವ ಪ್ರೇಮಕುಮಾರಿ ಅವರು ಇದ್ದಕ್ಕಿದ್ದಂತೆ ರಾಮದಾಸ್ ಅವರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ನ್ಯಾಯಾಲಯದಲ್ಲಿ ಕೇಸು ನಡೆಯುತ್ತಿದೆ, ಅದು ಇತ್ಯರ್ಥವಾಗಲು ಬಹಳ ಸಮಯ ಬೇಕು ಆದರೆ ಅಲ್ಲಿವರೆಗೆ ಕಾಯಲು ಸಾಧ್ಯವಿಲ್ಲ. ನಾನು ಅವರ ಜೊತೆನೆ ಬದುಕಬೇಕು ಅವರು ನನ್ನ ಗಂಡ. ನಾನೇನು ಕೀಳು ಜಾತಿಯವಳಲ್ಲ. ನಾನು ಕೂಡ ಒಳ್ಳೆಯ ಕುಟುಂಬದಿಂದಲೇ ಬಂದಿರುವುದು. ನಾನು ಸತ್ತರು ರಾಮದಾಸ್ ಬಿಡುವುದಿಲ್ಲ ಎಂದಿದ್ದಾರೆ.

ಅವರ ವಿರುದ್ಧ ಚುನಾವಣೆಗೆ ನಿಂತಿದ್ದ ನಾನು ಅವರು ಹೇಳಿದ್ದಕ್ಕಾಗಿ ಚುನಾವಣೆಯಿಂದ ಹಿಂದೆ ಸರಿದೆ ಆದರೆ ಈಗ ಅವರು ನನ್ನ ಕರೆ ಸ್ವೀಕರಿಸುತ್ತಿಲ್ಲ, ಅವರ ಮನೆ ಒಳಕ್ಕೆ ನನ್ನನ್ನು ಬಿಡುತ್ತಿಲ್ಲ, ಮನೆ ಕೆಲಸದವಳಿಗೆ ಹೋಗಲು ಅನುಮತಿ ಇದೆ ನನಗೆ ಏಕೆ ಇಲ್ಲ ಎಂದು ಅವರು ಪ್ರಶ್ನೆ ಮಾಡಿದರು.
ರಾಮದಾಸ್ ಅವರು ಮನೆಯಲ್ಲೂ ಇಲ್ಲಾ, ಆಫೀಸಿನಲ್ಲೂ ಇಲ್ಲಾ. ತಪ್ಪೇ ಮಾಡಿಲ್ಲ ಎಂದರೆ ಮತ್ಯಾಕೆ ಪಲಾಯನ ಮಾಡ್ತಿದ್ದಾರೆ? ಈವತ್ ಇದೆ ಅವನಿಗೆ ಮಾರಿಹಬ್ಬ..! ಅವನಿಗೆ ಸರಿಯಾಗಿ ಗ್ರಹಚಾರ ಬಿಡಿಸ್ತೀನಿ..! ಯಾವುದೇ ಕಾರಣಕ್ಕೂ ರಾಮದಾಸ್ ಬಿಡಲ್ಲ ಅಂಥ ಪ್ರೇಮ ಕುಮಾರಿಬುಸುಗುಟ್ಟಿದ್ದನ್ನು ಸ್ಥಳದಲ್ಲಿದ್ದ ಪೊಲೀಸರು, ಮಾಧ್ಯಮದವರು ಮೂಕ ಪ್ರೇಕ್ಷಕರಾಗಿ ವೀಕ್ಷಿಸಿದರು.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications