ರಾಮದಾಸ್ ಬೆನ್ನು ಬಿಡದ ಪ್ರೇಮಕುಮಾರಿ, ಕಚೇರಿ ಮುಂದೆ ಪ್ರತಿಭಟನೆ
ಮೈಸೂರು, ಜೂನ್ 21: ಪ್ರೇಮಕುಮಾರಿ ಅವರು ಬಿಜೆಪಿ ಶಾಸಕ ರಾಮದಾಸ್ ಅವರ ಬೆನ್ನು ಬಿಡುವಂತೆ ಕಾಣುತ್ತಿಲ್ಲ. ಕೆಲವು ದಿನ ತಣ್ಣಗಾಗಿದ್ದ ಇವರಿಬ್ಬರ ಪ್ರಕರಣದ ಸುದ್ದಿ ಈಗ ಮತ್ತೆ ಗರಿಗೆದರಿದೆ.
ತಾನು ರಾಮದಾಸ್ ಅವರ ಮಡದಿ ಎಂದು ಅವರ ವಿರುದ್ಧ ಕೋರ್ಟ್ ಮೆಟ್ಟಿಲೇರಿರುವ ಪ್ರೇಮಕುಮಾರಿ ಅವರು ಇದ್ದಕ್ಕಿದ್ದಂತೆ ರಾಮದಾಸ್ ಅವರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ನ್ಯಾಯಾಲಯದಲ್ಲಿ ಕೇಸು ನಡೆಯುತ್ತಿದೆ, ಅದು ಇತ್ಯರ್ಥವಾಗಲು ಬಹಳ ಸಮಯ ಬೇಕು ಆದರೆ ಅಲ್ಲಿವರೆಗೆ ಕಾಯಲು ಸಾಧ್ಯವಿಲ್ಲ. ನಾನು ಅವರ ಜೊತೆನೆ ಬದುಕಬೇಕು ಅವರು ನನ್ನ ಗಂಡ. ನಾನೇನು ಕೀಳು ಜಾತಿಯವಳಲ್ಲ. ನಾನು ಕೂಡ ಒಳ್ಳೆಯ ಕುಟುಂಬದಿಂದಲೇ ಬಂದಿರುವುದು. ನಾನು ಸತ್ತರು ರಾಮದಾಸ್ ಬಿಡುವುದಿಲ್ಲ ಎಂದಿದ್ದಾರೆ.

ಅವರ ವಿರುದ್ಧ ಚುನಾವಣೆಗೆ ನಿಂತಿದ್ದ ನಾನು ಅವರು ಹೇಳಿದ್ದಕ್ಕಾಗಿ ಚುನಾವಣೆಯಿಂದ ಹಿಂದೆ ಸರಿದೆ ಆದರೆ ಈಗ ಅವರು ನನ್ನ ಕರೆ ಸ್ವೀಕರಿಸುತ್ತಿಲ್ಲ, ಅವರ ಮನೆ ಒಳಕ್ಕೆ ನನ್ನನ್ನು ಬಿಡುತ್ತಿಲ್ಲ, ಮನೆ ಕೆಲಸದವಳಿಗೆ ಹೋಗಲು ಅನುಮತಿ ಇದೆ ನನಗೆ ಏಕೆ ಇಲ್ಲ ಎಂದು ಅವರು ಪ್ರಶ್ನೆ ಮಾಡಿದರು.
ರಾಮದಾಸ್ ಅವರು ಮನೆಯಲ್ಲೂ ಇಲ್ಲಾ, ಆಫೀಸಿನಲ್ಲೂ ಇಲ್ಲಾ. ತಪ್ಪೇ ಮಾಡಿಲ್ಲ ಎಂದರೆ ಮತ್ಯಾಕೆ ಪಲಾಯನ ಮಾಡ್ತಿದ್ದಾರೆ? ಈವತ್ ಇದೆ ಅವನಿಗೆ ಮಾರಿಹಬ್ಬ..! ಅವನಿಗೆ ಸರಿಯಾಗಿ ಗ್ರಹಚಾರ ಬಿಡಿಸ್ತೀನಿ..! ಯಾವುದೇ ಕಾರಣಕ್ಕೂ ರಾಮದಾಸ್ ಬಿಡಲ್ಲ ಅಂಥ ಪ್ರೇಮ ಕುಮಾರಿಬುಸುಗುಟ್ಟಿದ್ದನ್ನು ಸ್ಥಳದಲ್ಲಿದ್ದ ಪೊಲೀಸರು, ಮಾಧ್ಯಮದವರು ಮೂಕ ಪ್ರೇಕ್ಷಕರಾಗಿ ವೀಕ್ಷಿಸಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications