ಕೊರೊನಾ ವೈರಸ್ 3ನೇ ಅಲೆ ಎದುರಿಸಲು ಜೆಎಸ್ಎಸ್ ಆಸ್ಪತ್ರೆ ಸನ್ನದ್ಧ
ಮೈಸೂರು, ಮೇ 17: ಮೈಸೂರು ಜಿಲ್ಲೆಯಾದ್ಯಂತ ಕೊರೊನಾ ಎರಡನೇ ಅಲೆಯ ಆತಂಕ ನಿವಾರಣೆಯಾಗುವ ಮೊದಲೇ ಮೈಸೂರಿನ ಪ್ರತಿಷ್ಠಿತ ಜೆಎಸ್ಎಸ್ ಆಸ್ಪತ್ರೆಯಲ್ಲಿ 3ನೇ ಅಲೆಯ ಕೊರೊನಾಘಾತ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಮುಂದಿನ ಕೆಲವೇ ದಿನಗಳಲ್ಲಿ ಕೊರೊನಾ ಮೂರನೇ ಅಲೆಯ ಆಘಾತ ಎದುರಾಗುವ ಆತಂಕ ಶುರುವಾಗಿದ್ದು, ಈ ಹಿನ್ನೆಲೆಯಲ್ಲಿ ಜೆಎಸ್ಎಸ್ ಆಸ್ಪತ್ರೆಯಲ್ಲಿ 3ನೇ ಅಲೆಯನ್ನು ಎದುರಿಸಲು ಎಲ್ಲಾ ರೀತಿಯ ವೈದ್ಯಕೀಯ ಸೌಲಭ್ಯ ಹೆಚ್ಚಿಸಲಾಗಿದೆ. ಈ ಸಂಬಂಧ ಸ್ವತಃ ಸುತ್ತೂರು ಶ್ರೀಗಳೇ ಆಸ್ಪತ್ರೆಯ ಆಡಳಿತ ಮಂಡಳಿ ಜತೆಗೆ ಸಭೆ ನಡೆಸಿ, ಅಗತ್ಯ ಸಿದ್ಧತೆಗಳ ಕುರಿತು ಮಾಹಿತಿ ಪಡೆದರು.
ಈ ಕುರಿತಂತೆ ಮಾತನಾಡಿದ ಸುತ್ತೂರು ಶ್ರೀಗಳು, ಈಗಾಗಲೇ ಜೆಎಸ್ಎಸ್ ಆಸ್ಪತ್ರೆಯಿಂದ ಸರ್ಕಾರಕ್ಕೆ 411 ಬೆಡ್ ನೀಡಲಾಗಿದ್ದು, ಸರ್ಕಾರ ಮತ್ತೆ 300 ಬೆಡ್ ಕೇಳಿದೆ. ಆದರೆ ಅದಕ್ಕೆ ಬೇಕಾದ ಆಕ್ಸಿಜನ್ ಇಲ್ಲದ ಕಾರಣ ಬೆಡ್ ನೀಡಿಲ್ಲ. ಆಕ್ಸಿಜನ್ ಬಂದ ತಕ್ಷಣ ಬೆಡ್ ನೀಡುತ್ತೇವೆ ಎಂದು ತಿಳಿಸಿದರು.

ಅಲ್ಲದೇ, 5000 ಕೆ.ಎಲ್ ಯೂನಿಟ್ ಲಿಕ್ವಿಡ್ ಆಕ್ಸಿಜನ್ ಟ್ಯಾಂಕ್ ಖರೀದಿ ಮಾಡುತ್ತಿದ್ದೀವೆ. ನಿಮಿಷಕ್ಕೆ 500ಲೀ ಆಕ್ಸಿಜನ್ ಉತ್ಪಾದಿಸುವ ಜನರೇಟರ್ ಸಹ ಖರೀದಿಗೆ ಸಿದ್ಧತೆ ನಡೆದಿದೆ. ಇಷ್ಟು ಆಕ್ಸಿಜನ್ ಸಿಕ್ಕಿದರೆ ಇನ್ನು 500-600 ಬೆಡ್ ಹೆಚ್ಚಲಿದ್ದು, ಸರ್ಕಾರಕ್ಕೆ ಆಸ್ಪತ್ರೆಯಿಂದ ನೀಡಬಹುದಾದ ಎಲ್ಲ ಸಹಕಾರ ನೀಡುತ್ತೇವೆ ಎಂದರು.

ಮೂರನೇ ಅಲೆ ಬಂದರೆ ಇನ್ನಷ್ಟು ಎಚ್ಚರಿಕೆಯಿಂದ ಇರಬೇಕು ಅಂತ ಈ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಸೌಲಭ್ಯ ಹೆಚ್ಚಿಸಿ ಚಿಕಿತ್ಸೆ ನೀಡಬಹುದು. ಆದರೆ ಶೇ.100 ಆರೋಗ್ಯ ನೀಡಲು ಸಾಧ್ಯವಿಲ್ಲ. ಹೀಗಾಗಿ ಜನರು ತಮ್ಮ ಎಚ್ಚರಿಕೆಯಿಂದ ಇದ್ದು ಕೊರೊನಾದಿಂದ ಪಾರಾಗಿ ಎಂದು ಕಿವಿಮಾತು ಹೇಳಿದರು.

2ನೇ ಡೋಸ್ ಲಸಿಕೆ ಪಡೆದ ಶ್ರೀಗಳು
ಇದಕ್ಕೂ ಮುನ್ನ ಸುತ್ತೂರು ಶ್ರೀಗಳು ಜೆಎಸ್ಎಸ್ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆಯ 2ನೇ ಡೋಸ್ ಲಸಿಕೆ ಪಡೆದರು. ಲಸಿಕೆ ಪಡೆದ ನಂತರ ಆಸ್ಪತ್ರೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸ್ವಾಮೀಜಿ, ಆಸ್ಪತ್ರೆಯ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದರಲ್ಲದೆ, ಕೋವಿಡ್ ಕೇರ್ ಸೆಂಟರ್ ರೋಗಿಗಳಿಗೆ ಸಾಂತ್ವನ ಹೇಳಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications