ವಿಡಿಯೋ ಮಾಡಲು ಹೇಳಿ ನೀರಿಗೆ ಧುಮುಕಿದ ಪೂಜಾರಿ ಕಣ್ಮರೆ
ಮೈಸೂರು, ಆಗಸ್ಟ್ 12 : ಪ್ರವಾಹದಲ್ಲಿ ಈಜುವ ಸಾಹಸಕ್ಕೆ ಮುಂದಾದ ವ್ಯಕ್ತಿಯೊಬ್ಬ ನಾಪತ್ತೆಯಾಗಿರುವ ಘಟನೆ ಮೈಸೂರಿನ ನಂಜನಗೂಡಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಕಾವೇರಿಯಲ್ಲಿ ಮುಳುಗಿ ಮೂವರು ಜಲಸಮಾಧಿ
ನಂಜನಗೂಡು ಮಕ್ಕಾಜಿ ಕಲ್ಯಾಣ ಮಂಟಪ ಸಮೀಪದ ನಿವಾಸಿ ವೆಂಕಟೇಶ್ (55) ನದಿಗಿಳಿದು ನಾಪತ್ತೆಯಾಗಿರುವ ವ್ಯಕ್ತಿ. ಪಟ್ಟಣದ ಲಿಂಗ ಭಟ್ಟರ ಗುಡಿಯ ಪೂಜಾರಿಯಾಗಿದ್ದ ಇವರು ನಾಲ್ಕೈದು ಮಂದಿ ಸ್ನೇಹಿತರೊಂದಿಗೆ ಹೊಸ ರೈಲ್ವೆ ಸೇತುವೆ ಬಳಿ ಹೋಗಿ ಉಕ್ಕಿ ಹರಿಯುತ್ತಿರುವ ನದಿಯಲ್ಲಿ ಈಜುವುದಾಗಿ ಸವಾಲೆಸೆದಿದ್ದಾರೆ. ಅಲ್ಲದೇ ತಾನು ಈಜುವುದನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡುವಂತೆ ಸ್ನೇಹಿತರಿಗೆ ತಿಳಿಸಿ ನದಿಗೆ ಧುಮುಕಿದ್ದಾರೆ.

ರಭಸವಾಗಿ ಹರಿಯುತ್ತಿದ್ದ ನದಿಯಲ್ಲಿ ಲೀಲಾಜಾಲವಾಗಿ ಈಜುತ್ತಿದ್ದ ವೆಂಕಟೇಶ್ ಕೆಲ ಹೊತ್ತಿನ ಬಳಿಕ ಮುಳುಗಿದ್ದಾರೆ. ಮತ್ತೆ ಮೇಲೆದ್ದು ಸ್ವಲ್ಪ ದೂರ ಈಜಿದ ಬಳಿಕ ನಂತರ ನಾಪತ್ತೆಯಾಗಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮದಲ್ಲಿ ಬಿತ್ತರವಾದ ಬಳಿಕ ವೆಂಕಟೇಶ್ ಮನೆಯವರಿಗೆ ಅವರು ನಾಪತ್ತೆಯಾಗಿರುವುದು ತಿಳಿದುಬಂದಿದೆ. ಭಾನುವಾರ ವೆಂಕಟೇಶ್ ಅವರ ಮಾವ ಸುಬ್ರಹ್ಮಣ್ಯ ಅವರು ನಂಜನಗೂಡು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.
ಮೂರು ದಿನಗಳ ಹಿಂದೆ ವೆಂಕಟೇಶ್ ನಾಪತ್ತೆ ಆಗಿದ್ದು, ಅವರು ಈಜಲೆಂದು ನದಿಗೆ ಧುಮುಕಿದಾಗ ವಿಡಿಯೋ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ವೆಂಕಟೇಶ್ ಕೊಚ್ಚಿ ಹೋಗಿರಬಹುದೆಂದು ಶಂಕಿಸಲಾಗಿದ್ದು ಪೊಲೀಸರ ತನಿಖೆಯಿಂದ ಸ್ಪಷ್ಟವಾಗಬೇಕಾಗಿದೆ. ಈ ಹಿಂದೆಯೂ ವೆಂಕಟೇಶ್ ತುಂಬಿ ಹರಿಯುವ ನದಿಯಲ್ಲಿ ಧುಮುಕಿದ್ದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications