ವಿಡಿಯೋ ಮಾಡಲು ಹೇಳಿ ನೀರಿಗೆ ಧುಮುಕಿದ ಪೂಜಾರಿ ಕಣ್ಮರೆ
ಮೈಸೂರು, ಆಗಸ್ಟ್ 12 : ಪ್ರವಾಹದಲ್ಲಿ ಈಜುವ ಸಾಹಸಕ್ಕೆ ಮುಂದಾದ ವ್ಯಕ್ತಿಯೊಬ್ಬ ನಾಪತ್ತೆಯಾಗಿರುವ ಘಟನೆ ಮೈಸೂರಿನ ನಂಜನಗೂಡಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಕಾವೇರಿಯಲ್ಲಿ ಮುಳುಗಿ ಮೂವರು ಜಲಸಮಾಧಿ
ನಂಜನಗೂಡು ಮಕ್ಕಾಜಿ ಕಲ್ಯಾಣ ಮಂಟಪ ಸಮೀಪದ ನಿವಾಸಿ ವೆಂಕಟೇಶ್ (55) ನದಿಗಿಳಿದು ನಾಪತ್ತೆಯಾಗಿರುವ ವ್ಯಕ್ತಿ. ಪಟ್ಟಣದ ಲಿಂಗ ಭಟ್ಟರ ಗುಡಿಯ ಪೂಜಾರಿಯಾಗಿದ್ದ ಇವರು ನಾಲ್ಕೈದು ಮಂದಿ ಸ್ನೇಹಿತರೊಂದಿಗೆ ಹೊಸ ರೈಲ್ವೆ ಸೇತುವೆ ಬಳಿ ಹೋಗಿ ಉಕ್ಕಿ ಹರಿಯುತ್ತಿರುವ ನದಿಯಲ್ಲಿ ಈಜುವುದಾಗಿ ಸವಾಲೆಸೆದಿದ್ದಾರೆ. ಅಲ್ಲದೇ ತಾನು ಈಜುವುದನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡುವಂತೆ ಸ್ನೇಹಿತರಿಗೆ ತಿಳಿಸಿ ನದಿಗೆ ಧುಮುಕಿದ್ದಾರೆ.

ರಭಸವಾಗಿ ಹರಿಯುತ್ತಿದ್ದ ನದಿಯಲ್ಲಿ ಲೀಲಾಜಾಲವಾಗಿ ಈಜುತ್ತಿದ್ದ ವೆಂಕಟೇಶ್ ಕೆಲ ಹೊತ್ತಿನ ಬಳಿಕ ಮುಳುಗಿದ್ದಾರೆ. ಮತ್ತೆ ಮೇಲೆದ್ದು ಸ್ವಲ್ಪ ದೂರ ಈಜಿದ ಬಳಿಕ ನಂತರ ನಾಪತ್ತೆಯಾಗಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮದಲ್ಲಿ ಬಿತ್ತರವಾದ ಬಳಿಕ ವೆಂಕಟೇಶ್ ಮನೆಯವರಿಗೆ ಅವರು ನಾಪತ್ತೆಯಾಗಿರುವುದು ತಿಳಿದುಬಂದಿದೆ. ಭಾನುವಾರ ವೆಂಕಟೇಶ್ ಅವರ ಮಾವ ಸುಬ್ರಹ್ಮಣ್ಯ ಅವರು ನಂಜನಗೂಡು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.
ಮೂರು ದಿನಗಳ ಹಿಂದೆ ವೆಂಕಟೇಶ್ ನಾಪತ್ತೆ ಆಗಿದ್ದು, ಅವರು ಈಜಲೆಂದು ನದಿಗೆ ಧುಮುಕಿದಾಗ ವಿಡಿಯೋ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ವೆಂಕಟೇಶ್ ಕೊಚ್ಚಿ ಹೋಗಿರಬಹುದೆಂದು ಶಂಕಿಸಲಾಗಿದ್ದು ಪೊಲೀಸರ ತನಿಖೆಯಿಂದ ಸ್ಪಷ್ಟವಾಗಬೇಕಾಗಿದೆ. ಈ ಹಿಂದೆಯೂ ವೆಂಕಟೇಶ್ ತುಂಬಿ ಹರಿಯುವ ನದಿಯಲ್ಲಿ ಧುಮುಕಿದ್ದರು.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications