ಪೂಜೆ ಮಾಡುವೆನೆಂದು 21 ಲಕ್ಷ ರೂ ಮೌಲ್ಯದ ಚಿನ್ನದೊಂದಿಗೆ ಪರಾರಿಯಾಗಿದ್ದ ಪೂಜಾರಿ ಬಂಧನ
ಮೈಸೂರು, ನವೆಂಬರ್ 2: ಪೂಜೆ ಮಾಡಿಸುವೆನೆಂದು 21 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿಕೊಂಡು ಪರಾರಿಯಾಗಿದ್ದ ಪೂಜಾರಿಯನ್ನು ಪೊಲೀಸರು ಇಂದು ಬಂಧಿಸಿದ್ದಾರೆ.
ಜಿಲ್ಲೆಯ ಕೆ.ಆರ್. ನಗರ ತಾಲೂಕಿನ ಸಾತಿ ಗ್ರಾಮದ ಚೌಡೇಶ್ವರಿ ದೇವಸ್ಥಾನದ ಪೂಜಾರಿ ಮನು (28) ಬಂಧಿತ ಆರೋಪಿ. ತನ್ನ ಮನೆಯಲ್ಲಿ ಚಿನ್ನಾಭರಣ ಇಟ್ಟು ಪೂಜೆ ಮಾಡಿದರೆ ಒಳ್ಳೆಯದಾಗುತ್ತದೆ ಎಂದು ಕೆಲವರನ್ನು ನಂಬಿಸಿದ್ದ ಮನು, ಅಕ್ಟೋಬರ್ 25ರಂದು ಸಾತಿ ಗ್ರಾಮದ ನಿವಾಸಿಗಳಾದ ಬಸಪ್ಪ, ಶಿವಲಿಂಗಪ್ಪ, ಪುಟ್ಟಪ್ಪ, ಭಾರತಿ, ಶೀಲಾ, ದೀಪಾ ಹಾಗೂ ಸಂತೋಷ್ ಎಂಬುವರಿಂದ ಚಿನ್ನಾಭರಣಗಳನ್ನು ತರಿಸಿಕೊಂಡಿದ್ದ.
ಸುಮಾರು 456 ಗ್ರಾಂ ತೂಕದ ಈ ಚಿನ್ನದ ಒಡವೆಗಳನ್ನು ಇಟ್ಟು, ಪೂಜೆ ಮಾಡಿ, ಈ ಒಡವೆಗಳನ್ನು ಆಯುಧ ಪೂಜೆಯವರೆಗೂ ತೆಗೆಯಬಾರದು ಎಂದು ಹೇಳಿ ತನ್ನ ಮನೆಯ ಬೀರುವಿನಲ್ಲಿ ಇರಿಸಿಕೊಂಡಿದ್ದ.

ಆದರೆ ಅಂದೇ ರಾತ್ರಿ 456 ಗ್ರಾಂನ ಚಿನ್ನಾಭರಣವನ್ನು ಎತ್ತಿಕೊಂಡು ಪರಾರಿಯಾಗಿದ್ದ. ಮಾರನೇ ದಿನ ಚಿನ್ನ ದೋಚಿಕೊಂಡು ಪೂಜಾರಿ ಪರಾರಿಯಾದ ವಿಷಯ ತಿಳಿಯುತ್ತಿದ್ದಂತೆ ಚಿನ್ನವನ್ನು ಕೊಟ್ಟವರು ಈತನ ವಿರುದ್ಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ಬೆನ್ನು ಹತ್ತಿದ್ದ ಪೊಲೀಸರು ಕೆ.ಆರ್ ನಗರ ಬಸ್ ನಿಲ್ದಾಣದಲ್ಲಿ ಪೂಜಾರಿಯನ್ನು ಬಂಧಿಸಿ, ಆತನಿಂದ ಒಡವೆಗಳನ್ನು ವಶಪಡಿಸಿಕೊಂಡಿದ್ದಾರೆ.
ಯಾರನ್ನೋ ನಂಬಿ ಒಡವೆ, ಹಣವನ್ನು ನೀಡಿ ಮೋಸ ಹೋಗುವವರಿಗೆ ಇದೊಂದು ಪಾಠ ಎಂದಿದ್ದಾರೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications