ಮೋದಿ ರೀತಿ ದಿನಕ್ಕೆ 18 ಗಂಟೆ ಕೆಲಸ ಮಾಡಿ, ಭೈರಪ್ಪ ಕಿವಿಮಾತು
ಬೆಂಗಳೂರು, ಸೆ. 17: ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಾಹಿತಿ ಎಸ್.ಎಲ್. ಭೈರಪ್ಪ ಅವರು ಹಾಡಿ ಹೊಗಳಿದ್ದಾರೆ. ಮೈಸೂರಿನಲ್ಲಿ ಬಿಜೆಪಿ ಶಾಸಕ ರಾಮದಾಸ್ ಅವರು ಆಯೋಜಿಸಿದ್ದ ಪ್ರಧಾನಿ ಮೋದಿ ಅವರ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದಾರೆ.
ಪ್ರಧಾನಿ ಮೋದಿ ಅಂತಹ ನಾಯಕ ಇದುವರೆಗೂ ಯಾರೂ ಹುಟ್ಟಿಲ್ಲ. ಮುಂದೆ 2024, 2029 ಕ್ಕೂ ಅವರೇ ಪ್ರಧಾನಿಯಾಗಬೇಕು. ದಿ. ಮಾಜಿ ಪ್ರಧಾನಿ ವಾಜಪೇಯಿ ಅವರು ಮಾಡದಂತಹ ಕೆಲಸ ಕಾರ್ಯಗಳನ್ನು ಈಗ ಪ್ರಧಾನಿ ಮೋದಿ ಮಾಡುತ್ತಿದ್ದಾರೆ. ಸ್ವಂತ ಬಲದ ಮೇಲೆ 2014, 2019ರಲ್ಲಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಗುಜರಾತ್ನಲ್ಲಿ ಕಣ್ಣು ನಾಚುವಂತಹ ಅಭಿವೃದ್ಧಿ ಕೆಲಸ ಮಾಡಿದ್ದಾರೆ ಮೋದಿ ಹುಟ್ಟುಹಬ್ಬ ಸಮಾರಂಭದಲ್ಲಿ ಎಸ್.ಎಲ್. ಭೈರಪ್ಪ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ 6 ವರ್ಷಗಳ ಆಡಳಿತ ತೃಪ್ತಿ ತಂದಿದೆ. ವಿಶ್ವವನ್ನೇ ತಲ್ಲಣಗೊಳಿಸಿದ ಕೊರೊನಾ ನಿಭಾಯಿಸುವಲ್ಲಿ ಪ್ರಧಾನಿ ಮೋದಿ ಯಶಸ್ವಿಯಾಗಿದ್ದಾರೆ. ದೇಶ ನಡೆಸಲು ಮೋದಿ ಅವರಿಗಿಂತ ಬುದ್ದಿವಂತರು ಯಾರಿದ್ದಾರೆ? ರಾಜ್ಯದ ಪಾಲಿನ ಜಿ.ಎಸ್.ಟಿ. ಹಣವನ್ನು ಬೇರೆ ಬೇರೆ ರೂಪದಲ್ಲಿ ಕೊಟ್ಟಿದ್ದಾರೆ. ಜಿ.ಎಸ್.ಟಿ. ಕೊಟ್ಟಿಲ್ಲ ಅಂತ ಯಾಕೆ ದೂಷಿಸಬೇಕು? ಅದಕ್ಕೆಲ್ಲಾ ತಲೆ ಕೆಡಿಸಿಕೊಳ್ಳಬಾರದು ಎಂದು ಸಾಹಿತಿ ಎಸ್.ಎಲ್.ಭೈರಪ್ಪ ಹೇಳಿಕೆ ಕೊಟ್ಟಿದ್ದಾರೆ.

ಡ್ರಗ್ಸ್ ಸೇವನೆಯಿಂದ ಯುವಕರು ದಾರಿ ತಪ್ಪುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಅವರು, ಮೋದಿ ಅವರನ್ನು ಮಾದರಿಯಾಗಿ ಆಗಿ ಇಟ್ಟುಕೊಂಡು ಯುವಕರು ದಿನದಲ್ಲಿ 18 ಗಂಟೆ ಕೆಲಸ ಮಾಡಬೇಕು. ಮಾದಕವಸ್ತುಗಳಿಂದ ಯುವಕರು ಹಾಳಾಗುವುದಕ್ಕೂ ಪ್ರಧಾನಿ ಮೋದಿ ಅವರಿಗೂ ಯಾವುದೇ ಸಂಬಂಧವಿಲ್ಲ. ಮೋದಿ ಅವರು ಏನೇ ಮಾಡಿದರೂ ವಿರೋಧ ಪಕ್ಷದವರು ಟೀಕೆ ಮಾಡುತ್ತಾರೆ. ಮೊನ್ನೆ ರಾಹುಲ್ ಗಾಂಧಿ ಚೀನಾ ಗಡಿ ವಿಚಾರದಲ್ಲಿಯೂ ಟೀಕೆ ಮಾಡಿದ್ದಾರೆ ಎಂದು ಮೈಸೂರಿನಲ್ಲಿ ಸಾಹಿತಿ ಎಸ್.ಎಲ್. ಭೈರಪ್ಪ ಹೇಳಿಕೆ ಕೊಟ್ಟಿದ್ದಾರೆ.
-
ಅಪ್ಪನ ಸಕ್ಕರೆ ಚಟ ಬಿಡಿಸಲು ಮೋದಿ ಮೊರೆ ಹೋದ ಯುವಕ: ವಿಡಿಯೋ Viral, ಪ್ರಧಾನಿಯಿಂದ ಬಂತು ಅಚ್ಚರಿಯ ರಿಪ್ಲೈ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ?












Click it and Unblock the Notifications