ಪಟ್ಟದ ಕತ್ತಿಯಿಟ್ಟು ಅರಮನೆಯಲ್ಲಿ ಖಾಸಗಿ ದರ್ಬಾರ್ ಆರಂಭ
ಮೈಸೂರು, ಸೆ. 25 : ಮೈಸೂರು ದಸರಾ ಗುರುವಾರ ಬೆಳಗ್ಗೆ ಉದ್ಘಾಟನೆಗೊಂಡ ನಂತರ ಅರಮನೆಯಲ್ಲಿ ನಡೆಯುವ ಖಾಸಗಿ ದರ್ಬಾರ್ಗೂ ಚಾಲನೆ ಸಿಕ್ಕಿದೆ. ದೊರೆ ಇಲ್ಲದ ದಸರಾ ದರ್ಬಾರ್ಗೆ ಈ ಬಾರಿ ಪಟ್ಟದ ಕತ್ತಿ ನೇತೃತ್ವ ವಹಿಸಿದ್ದು,ಸಿಂಹಾಸನದ ಮೇಲೆ ಪಟ್ಟದ ಕತ್ತಿಯನ್ನು ಇಟ್ಟು, ಪೂಜಿಸಿ ಖಾಸಗಿ ದರ್ಬಾರ್ ಆರಂಭಿಸಲಾಯಿತು.
ಮೈಸೂರು ಸುತ್ತಮುತ್ತಲಿನ ದೇವಾಲಯಗಳಿಂದ ಅರ್ಚರು ಪ್ರಸಾದವನ್ನು ಹಿಡಿದು ಅರಮನೆಗೆ ಆಗಮಿಸಿದ ನಂತರ ಖಾಸಗಿ ದರ್ಬಾರ್ಗೆ ಚಾಲನೆ ಸಿಕ್ಕಿತು. ಸಿಂಹಾಸನಕ್ಕೆ ಮೊದಲು ಪೂಜೆ ಸಲ್ಲಿಸಿದ ಅರ್ಚರು ಅದಕ್ಕೆ ಪ್ರಸಾದವನ್ನು ಸಮರ್ಪಿಸಿದರು. ನಂತರ ಸಿಂಹಾಸನದ ಮೇಲೆ ಪಟ್ಟದ ಕತ್ತಿಯಿಟ್ಟು ಒಂಭತ್ತು ದಿನಗಳ ದರ್ಬಾರ್ಅನ್ನು ಆರಂಭಿಸಲಾಯಿತು. [ಮೈಸೂರು ದಸರಾಕ್ಕೆ ಚಾಮುಂಡಿ ಬೆಟ್ಟದಲ್ಲಿ ಚಾಲನೆ]

ರಾಣಿ ಪ್ರಮೋದಾ ದೇವಿ ಅವರ ಮಾರ್ಗದರ್ಶನದಲ್ಲಿ ಆರಂಭವಾದ ಖಾಸಗಿ ದರ್ಬಾರ್ ಆಚರಣೆಗಳಲ್ಲಿ ದಿ.ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸಹೋದರಿ ಗಾಯತ್ರಿ ದೇವಿ ಪುತ್ರ ಕಾಂತರಾಜ ಅರಸ್ ಪಾಲ್ಗೊಂಡಿದ್ದರು. ಶ್ರೀಕಂಠದತ್ತ ಒಡೆಯರ್ ನಿಧನದ ನಂತರ ಉತ್ತರಾಧಿಕಾರಿ ನೇಮಕವಾಗದ ಕಾರಣ, ಪಟ್ಟದ ಕತ್ತಿ ಇಟ್ಟು ಈ ಬಾರಿ ಖಾಸಗಿ ದರ್ಬಾರ್ ನಡೆಸಲಾಗುತ್ತಿದೆ. [ಮೈಸೂರು ದಸರಾ ಚಿತ್ರಗಳನ್ನು ನೋಡಿ]
1971, 1972, 1973, 1974ರಲ್ಲಿ ರಾಜರಿದ್ದರೂ ಪಟ್ಟದ ಕತ್ತಿ ಇಟ್ಟು ದರ್ಬಾರ್ ನಡೆಸಲಾಗಿತ್ತು. ಈ ಬಾರಿ ರಾಜನಿಲ್ಲದ ಕಾರಣ ಪಟ್ಟದ ಕತ್ತಿಯನ್ನಿಟ್ಟು ಖಾಸಗಿ ದರ್ಬಾರ್ ನಡೆಸಲಾಗುತ್ತಿದೆ ಎಂದು ಇತಿಹಾಸ ತಜ್ಞ ಪ್ರೊ.ಪಿ.ವಿ. ನಂಜರಾಜ ಅರಸ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
-
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications