Priyanka Gandhi: ದರ್ಶನ್ ಧ್ರುವನಾರಾಯಣ್ ಮಾತನಾಡಿಸಿದ ಪ್ರಿಯಾಂಕಾ ಗಾಂಧಿ
ಮೈಸೂರು, ಏಪ್ರಿಲ್ 25: ದಿವಂಗತ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್ ಅವರ ಮಗ ದರ್ಶನ್ ಧ್ರುವನಾರಾಯಣ್ ಅವರನ್ನು ಕಾಂಗ್ರೆಸ್ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ವೇದಿಕೆಯಲ್ಲಿ ಮಾತನಾಡಿಸಿದರು.
आपको बार-बार दुर्बल नेता मिले, वो बार-बार मुख्यमंत्री बदलते रहे।
— Rohan Gupta (@rohanrgupta) April 25, 2023
40% कमीशन की सरकार ने आपको लूटा : कांग्रेस महासचिव श्रीमती @priyankagandhi जी pic.twitter.com/E5hBkP9IkY
ನಂಜನಗೂಡು ಮೀಸಲು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ದರ್ಶನ್ ಧ್ರುವನಾರಾಯಣ್ ಅವರನ್ನು ಪ್ರಿಯಾಂಕಾ ಗಾಂಧಿ ಅವರು ಮಾತನಾಡಿಸಿದರು. ಇತ್ತೀಚೆಗೆ ನಿಧನರಾಗಿದ್ದ ಆರ್ ಧ್ರುವನಾರಾಯಣ್ ಅವರ ಅಂತ್ಯಕ್ರಿಯೆಗೆ ಬರಲಾಗದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರು ಸಂತಾಪ ಸೂಚಿಸಿದ್ದರು.

ಮಂಗಳವಾರ ಕಾಂಗ್ರೆಸ್ ಪರ ಪ್ರಚಾರಕ್ಕಾಗಿ ಟಿ ನರಸೀಪುರಕ್ಕೆ ಬಂದಿದ್ದ ಪ್ರಿಯಾಂಕಾ ಗಾಂಧಿ ಅವರು ದರ್ಶನ್ ಧ್ರುವನಾರಾಯಣ್ ಅವರನ್ನು ವೇದಿಕೆಯಲ್ಲಿ ಮಾತನಾಡಿಸಿ ಕ್ಷೇತ್ರದ ಮಾಹಿತಿ ಪಡೆದರು. ಕಳೆದ ಒಂದು ತಿಂಗಳ ಹಿಂದೆಯಷ್ಟೇ ದರ್ಶನ್ ಧ್ರುವನಾರಾಯಣ್ ಅವರು ತಂದೆ ಆರ್ ಧ್ರುವನಾರಾಯಣ್ ಹಾಗೂ ತಾಯಿ ವೀಣಾ ಧ್ರುವನಾರಾಯಣ್ ಇಬ್ಬರನ್ನು ಕಳೆದುಕೊಂಡಿದ್ದರು.
ಆರ್ ಧ್ರುವನಾರಾಯಣ್ ನಿಧನರಾಗಿದ್ದಾಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಡಿಕೆ ಸುರೇಶ್, ವಿ ಶ್ರೀನಿವಾಸ್ ಪ್ರಸಾದ್ ಸೇರಿದಂತೆ ಹಲವಾರು ಗಣ್ಯರು ಭೇಟಿ ನೀಡಿದ್ದರು. ಒಂದೇ ತಿಂಗಳಲ್ಲಿ ಇಬ್ಬರನ್ನು ಕಳೆದುಕೊಂಡಿದ್ದ ದರ್ಶನ್ ಇದೀಗ ಪ್ರಚಾರಕ್ಕೆ ಧುಮಿಕಿದ್ದಾರೆ.
ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಆರ್ ಧ್ರುವನಾರಾಯಣ್ ಅವರು ಟಿಕೆಟ್ ಆಕಾಂಕ್ಷಿಯಾಗದ್ದರು, ಆದರೆ ಅಕಾಲಿಕವಾಗಿ ನಿಧನರಾಗಿದ್ದರು, ಬಳಿಕ ಮೈಸೂರು ಹಾಗೂ ಚಾಮರಾಜನಗರ ಎರಡೂ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಧ್ರುವನಾರಾಯಣ್ ಅವರ ಮಗ ದರ್ಶನ್ಗೆ ಟಿಕೆಟ್ ನೀಡುವಂತೆ ಆಗ್ರಹ ಮಾಡಿದ್ದರು.

ನಂಜನಗೂಡು ವಿಧಾನಸಭಾ ಕ್ಷೇತದ ಟಿಕೆಟ್ಗೆ ಮಾಜಿ ಸಚಿವ ಎಚ್ಸಿ ಮಹಾದೇವಪ್ಪ ಕೂಡ ಆಕಾಂಕ್ಷಿಯಾಗದ್ದರು. ಅವರು ತಾವು ನಂಜನಗೂಡು ಅಲ್ಲದೆ ತಮ್ಮ ಪುತ್ರ ಸುನೀಲ್ ಬೋಸ್ಗೆ ಟಿ ನರಸೀಪುರ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನೀಡಬೇಕೆಂದು ಕೇಳಿದ್ದರು, ಆದರೆ ಕಾಂಗ್ರೆಸ್ ಕಾರ್ಯಕರ್ತರು ನಂಜನಗೂಡಿನಿಂದ ದರ್ಶನ್ಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದ್ದರು.
ಕಾರ್ಯಕರ್ತರ ಒತ್ತಾಸೆಯಂತೆ ದರ್ಶನ್ ಧ್ರುವನಾರಾಯಣ್ ಅವರಿಗೆ ಟಿಕೆಟ್ ನೀಡಲಾಯಿತು. ನಂಜನಗೂಡಿನಿಂದ ಕಣಕ್ಕೆ ಇಳಿದಿರುವ ದರ್ಶನ್ ಧ್ರುವನಾರಾಯಣ್ ಅವರಿಗೆ ಜೆಡಿಎಸ್ ಕೂಡ ಬೆಂಬಲ ಘೋಷಿಸಿದೆ. ಈ ಭಾರಿ ನಂಜನಗೂಡಿನಲ್ಲಿ ಅಡಳಿತ ವಿರೋಧಿ ಅಲೆ ಇರುವುದರಿಂದ ದರ್ಶನ್ ಧ್ರುವನಾರಾಯಣ್ ಅವರು ಗೆಲ್ಲುವುದು ನಿಶ್ಚಿತ ಎನ್ನಲಾಗಿದೆ. ನಂಜನಗೂಡು ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ದರ್ಶನ್ ಧ್ರುವನಾರಾಯನ್ ಅಭ್ಯರ್ಥಿಯಾದರೆ ಬಿಜೆಪಿಯಿಂದ ಚಾಮರಾಜನಗರದ ಬಿಜೆಪಿ ಸಂಸದ ವಿ ಶ್ರೀನಿವಾಸ್ಪ್ರಸಾದ್ ಅವರ ಅಳಿಯ ಹರ್ಷವರ್ಧನ್ ಅವರು ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications