ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಾಕ್ ಪರ ಘೋಷಣೆ; ಎಸ್‌ಡಿಪಿಐ ಕಾರ್ಯಕರ್ತರ ವಿರುದ್ಧ ದೂರು

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಡಿಸೆಂಬರ್ 31; ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ‌ಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಎಸ್‌ಡಿಪಿಐ ಕಾರ್ಯಕರ್ತರ ವಿರುದ್ಧ ದೂರು ದಾಖಲಾಗಿದೆ.

ಬುಧವಾರ ಮೈಸೂರಿನಲ್ಲಿ ರಾಷ್ಟ್ರೀಯ ಹಿಂದೂ ಸಮಿತಿಯವರು ಅಶೋಕಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬುಧುವಾರ ಗ್ರಾಮ ಪಂಚಾಯಿತಿ ಚುನಾವಣೆ ಮತ ಎಣಿಕೆ ಸಂದರ್ಭದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದರು.

ಉಜಿರೆ ಮತಎಣಿಕೆ ಕೇಂದ್ರದಲ್ಲಿ ಪಾಕ್ ಪರ ಘೋಷಣೆಯ ಹಿಂದಿನ ಕಾರಣ ಬಿಚ್ಚಿಟ್ಟ ಪ್ರಮೋದ್ ಮುತಾಲಿಕ್ಉಜಿರೆ ಮತಎಣಿಕೆ ಕೇಂದ್ರದಲ್ಲಿ ಪಾಕ್ ಪರ ಘೋಷಣೆಯ ಹಿಂದಿನ ಕಾರಣ ಬಿಚ್ಚಿಟ್ಟ ಪ್ರಮೋದ್ ಮುತಾಲಿಕ್

ಎಸ್‌ಡಿಪಿಐ ಕಾರ್ಯಕರ್ತರು ಸಂಭ್ರಮಾಚರಣೆ ವೇಳೆ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಕುರಿತು ದೂರ ದಾಖಲು ಮಾಡಲಾಗಿದೆ.

ಉಜಿರೆ; ಮತ ಎಣಿಕೆ ಕೇಂದ್ರದ ಮುಂದೆ ಪಾಕಿಸ್ತಾನ ಪರ ಘೋಷಣೆಉಜಿರೆ; ಮತ ಎಣಿಕೆ ಕೇಂದ್ರದ ಮುಂದೆ ಪಾಕಿಸ್ತಾನ ಪರ ಘೋಷಣೆ

Pro Pakistan Slogan Complaint Against SDPI Members

ಮೈಸೂರಿನಲ್ಲಿ ರಾಷ್ಟ್ರೀಯ ಹಿಂದೂ ಸಮಿತಿಯ ರಾಷ್ಟ್ರಧ್ಯಕ್ಷ ವಿಕಾಸ್ ಶಾಸ್ತ್ರಿ ಅವರ ನೇತೃತ್ವದಲ್ಲಿ ಅಶೋಕಪುರಂ ಠಾಣೆಯಲ್ಲಿ ಎಸ್‌ಡಿಪಿಐ ಕಾರ್ಯಕರ್ತರ ವಿರುದ್ದ ದೂರು ದಾಖಲಿಸಲಾಗಿದೆ.

Infographics:ಜಿಲ್ಲಾವಾರು ಗ್ರಾಮ ಪಂಚಾಯಿತಿ ಫಲಿತಾಂಶ ಅಪ್ಡೇಟ್ಸ್ Infographics:ಜಿಲ್ಲಾವಾರು ಗ್ರಾಮ ಪಂಚಾಯಿತಿ ಫಲಿತಾಂಶ ಅಪ್ಡೇಟ್ಸ್

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯಿತಿ ಚುನಾವಣ ಫಲಿತಾಂಶದ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ಕಾರಣ ಭಾರತ ದೇಶದ ಅಖಂಡತೆಗೆ ತೇಜೊವಧೆ ಮಾಡಲು ಮುಂದಾಗಿದ್ದಾರೆ ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಬುಧವಾರ ಮಧ್ಯಾಹ್ನ ಬೆಳ್ತಂಗಡಿ ತಾಲೂಕಿನ ಉಜಿರೆಯ ಮತ ಎಣಿಕೆ ಕೇಂದ್ರದ ಹೊರಗೆ ಪಾಕಿಸ್ತಾನ ಪರವಾದ ಘೋಷಣೆ ಕೂಗಲಾಗಿದೆ. ಪೊಲೀಸರು ಸಹ ಈ ಸಮಯದಲ್ಲಿ ಅಲ್ಲಿಯೇ ಇದ್ದರು.

ಬಿಜೆಪಿ ಮತ್ತು ಎಸ್‌ಡಿಪಿಐ ಕಾರ್ಯಕರ್ತರು ಮತ ಕೇಂದ್ರದ ಹೊರಗೆ ನೂರಾರು ಸಂಖ್ಯೆಯಲ್ಲಿ ಜಮಾವಣೆಗೊಂಡಿದ್ದರು. ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಲಾಗಿದೆ.

English summary
Complaint field against SDPI members in Mysuru for pro Pakistan slogan at gram panchayat election counting center at Ujire, Belthangady taluk of Dakshina Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X