ಮಳೆರಾಯನ ಓಲೈಕೆಗೆ ಎಚ್ಡಿ ಕೋಟೆಯಲ್ಲಿ ಕಪ್ಪೆ ಮೆರವಣಿಗೆ
ಮೈಸೂರು, ಏಪ್ರಿಲ್ 18 : ಬೇಸಿಗೆಯ ಬಿಸಿಲು ತಲೆಸುಡುತ್ತಿದ್ದರೆ, ಗಿಡಮರಗಳು ಒಣಗುತ್ತಿವೆ. ಭೂಮಿ ಕಾದು ಕಬ್ಬಿಣವಾಗುತ್ತಿದೆ. ಬೆಳೆ ಬೆಳೆಯುವುದಿರಲಿ ಕುಡಿಯುವ ನೀರಿಗೂ ಪರದಾಡುವ ಸ್ಥಿತಿ ಇದೀಗ ನಿರ್ಮಾಣವಾಗಿದೆ. ಹೋಮಹವನ ಮಾಡಿದಾಗಲೂ ವರುಣದೇವ ಬಗ್ಗದಿದ್ದಾಗ ಜನರಿಗೆ ಉಳಿದದ್ದು ಒಂದೇ ದಾರಿ, ಕಪ್ಪೆ ಮೆರವಣಿಗೆ!
ಇದೇನಪ್ಪಾ ಕಪ್ಪೆ ಮೆರವಣಿಗೆ ಎಂದು ಅಚ್ಚರಿಪಡಬೇಡಿ. ಜಿಲ್ಲೆಯ ಕೆಲವೆಡೆ ಮಳೆಯಾಗಿದ್ದರೆ ಮತ್ತೆ ಕೆಲವೆಡೆ ಒಂದೇ ಒಂದು ಹನಿಯೂ ಜಿನುಗಿಲ್ಲ. ಬೆವರಿನಿಂದ ಅಂಗಿ ಒದ್ದೆಯಾಗುತ್ತಿದೆಯೇ ಹೊರತು ಇಳೆ ತಣಿಯುತ್ತಿಲ್ಲ. ಮಳೆ ಬಾರದೆ ಇರುವ ಕಾರಣ ಮಳೆಗಾಗಿ ವಿವಿಧ ಆಚರಣೆಗಳನ್ನು ಜನ ಮಾಡುತ್ತಿದ್ದು ಅದರಲ್ಲಿ ಇದೂ ಒಂದಾಗಿದೆ.
ಮಳೆಗಾಲ ಹತ್ತಿರ ಬಂದಂತೆಲ್ಲ ಚರಂಡಿಯಲ್ಲಿ ಕುಳಿತ ಕಪ್ಪೆಗಳು ಒಡರ್ ಒಡರ್ ಎಂದು ಸದ್ದು ಮಾಡುವುದು ಸಾಮಾನ್ಯ ಸಂಗತಿ. ಈ ಕಾರಣದಿಂದಲೋ ಏನೋ ಹಳ್ಳಿಗಳಲ್ಲಿ ಕಪ್ಪೆಗಳ ಮೆರವಣಿಗೆ ಮಾಡಿ ಮಳೆರಾಯನನ್ನು ಒಲಿಸಿಕೊಳ್ಳುವ ನಂಬಿಕೆ ಜಾರಿಯಲ್ಲಿದೆ. ಇದನ್ನು ಮೂಢನಂಬಿಕೆ ಅಂದರೂ ಮಳೆಗಾಗಿ ಜನರು ಎಷ್ಟು ಪರಿತಪಿಸುತ್ತಿದ್ದಾರೆ ಎಂಬುದಕ್ಕೆ ಇದೊಂದು ಉದಾಹರಣೆ. [ಮುನಿಸಿಕೊಂಡಿರುವ ವರುಣ ಮಹಾಶಯನಿಗಾಗಿ ಕತ್ತೆಗಳ ಮದುವೆ]

ಹಿಂದಿನ ಕಾಲದಲ್ಲಿ ಮಳೆ ಬಾರದಿದ್ದಾಗ ಏನೇನೆಲ್ಲ ಸಂಪ್ರದಾಯವನ್ನು ಮಾಡುತ್ತಿದ್ದರೋ ಅದನ್ನು ಈಗ ಮಾಡಲು ಆರಂಭಿಸಿದ್ದಾರೆ. ತಾತಮುತ್ತಾಂದಿರ ಕಾಲದಲ್ಲಿ ನಡೆಯುತ್ತಿದ್ದ ಆಚರಣೆಯನ್ನು ಮೌಢ್ಯ ಎಂದು ಟೀಕಿಸುತ್ತಲೇ ಬಂದಿದ್ದರೂ ಇದೀಗ ಕೆಲವೆಡೆ ಆವತ್ತಿನ ಸಂಪ್ರದಾಯವನ್ನು ಮತ್ತೆ ಆಚರಣೆ ಮಾಡುವ ಮೂಲಕ ಮಳೆಗಾಗಿ ಪ್ರಾರ್ಥಿಸುತ್ತಿರುವುದು ಕಂಡು ಬರುತ್ತಿದೆ.
ಕೆಲ ದಿನಗಳ ಹಿಂದೆಯಷ್ಟೆ ಶ್ರೀರಂಗಪಟ್ಟಣದ ಅರಕೆರೆಯಲ್ಲಿ ಕತ್ತೆಗೆ ಮದುವೆ ಮಾಡಲಾಗಿತ್ತು. ಇದೀಗ ಎಚ್.ಡಿ.ಕೋಟೆ ತಾಲೂಕಿನ ಸರಗೂರು ಸಮೀಪವಿರುವ ಎನ್ ಬೇಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಕ್ಕಹಳ್ಳಿ ಕಾಲೋನಿ ಗ್ರಾಮದಲ್ಲಿ ಮಳೆಗಾಗಿ ಮಕ್ಕಳು ಒನಕೆಯಲ್ಲಿ ಕಪ್ಪೆಯನ್ನು ಕಟ್ಟಿ ಊರಿನ ತುಂಬಾ ಮೆರವಣಿಗೆ ಮಾಡಿದ್ದಾರೆ. [ಕತ್ತಿ ಲಗ್ನಾ ಮಾಡಿದ್ರ... ಮಳಿ ಹೆಂಗ ಬರತದ?]
ಪ್ರತಿ ಮನೆಗಳಿಗೆ ತೆರಳಿ ಕಪ್ಪೆಗೆ ನೀರು ಹಾಕಿಸಿ ತಾವು ನೀರು ಹಾಕಿಸಿಕೊಂಡು ಹುಯ್ಯೋ ಹುಯ್ಯೋ ಮಳೆರಾಯ ಎಂದು ಕರೆಯುತ್ತಾ ಜನರಿಂದ ಕಪ್ಪೆಗೆ ಪೂಜೆ ಮಾಡಿಸಿಕೊಂಡು, ಮನೆಮನೆಯಿಂದ ಸಂಗ್ರಹಿಸಿದ ಆಹಾರ ಪದಾರ್ಥದಿಂದ ಅಡುಗೆ ಮಾಡಿ ಸಹಭೋಜನ ನಡೆಸಲಾಯಿತು. ಕಪ್ಪೆ ಮೆರವಣಿಗೆಯಿಂದ ಮಳೆ ಬರುತ್ತಾ ಎಂಬುದನ್ನು ಮಾತ್ರ ಕಾದು ನೋಡಬೇಕಿದೆ.
-
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು












Click it and Unblock the Notifications