ಮೈಸೂರಿನಲ್ಲಿ ಪ್ರೊ.ಕೆಎಸ್ ಭಗವಾನ್ ವಿರುದ್ಧ ಎಫ್ ಐಆರ್ ದಾಖಲು
ಮೈಸೂರು, ಜನವರಿ 1: ಪ್ರಗತಿಪರ ಚಿಂತಕ ಪ್ರೊ .ಕೆ.ಎಸ್. ಭಗವಾನ್ ಅವರ ವಿರುದ್ಧ ಪೊಲಿಸರು 295(ಎ) ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ರಾಮ ಮಂದಿರ ಏಕೆ ಬೇಕು?' ಪುಸ್ತಕಗಳನ್ನು ವಶಕ್ಕೆ ಪಡೆದು ತನಿಖೆಯನ್ನು ತೀವ್ರಗೊಳಿಸಿದ್ದಾರೆ.
ಪ್ರೊ.ಭಗವಾನ್ ಅವರು ಈ ಹಿಂದೆಯೇ ರಾಮ ಮಂದಿರ ಏಕೆ ಬೇಕು?' ಎಂಬ ಪುಸ್ತಕವನ್ನು ಬರೆದಿದ್ದರು. ಇದೀಗ ಅದು ಎರಡನೇ ಮುದ್ರಣ ಕಂಡಿದೆ. ಈ ಪುಸ್ತಕದಲ್ಲಿ ವಾಲ್ಮೀಕಿ ಅವರು ಕಂಡಂತೆ ಶ್ರೀರಾಮನು ದೇವರಲ್ಲ, ಆತ ಮಾಂಸ ಭಕ್ಷಣೆ ಮಾಡುತ್ತಿದ್ದ, ಮದ್ಯ ಸೇವಿಸುತ್ತಿದ್ದ. ಸ್ತ್ರೀಯರ ನೃತ್ಯವನ್ನು ವೀಕ್ಷಿಸುತ್ತಿದ್ದ ಎಂಬ ಸಾಲುಗಳನ್ನು ಬರೆದಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು.
ಈ ಹಿನ್ನೆಲೆಯಲ್ಲಿ ಮೂರು ದಿನಗಳ ಹಿಂದೆ ಹಿಂದೂಪರ ಸಂಘಟನೆಗಳು ಪ್ರೊ. ಕೆ.ಎಸ್. ಭಗವಾನ್ ಅವರ ನಿವಾಸದ ಮುಂಭಾಗ ಪ್ರತಿಭಟನೆ ನಡೆಸಿದ್ದರು.

ಕುವೆಂಪುನಗರ, ನಜರ್ ಬಾದ್, ವಿದ್ಯಾರಣ್ಯಪುರಂ ಸೇರಿದಂತೆ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಭಗವಾನ್ ಅವರ ವಿರುದ್ಧ ದೂರು ದಾಖಲಿಸಿದ್ದರು. ಅದರಂತೆ ಕುವೆಂಪುನಗರ ಪೊಲೀಸ್ ಠಾಣೆ ಯಲ್ಲಿ ಕೂಡ ದೂರು ದಾಖಲಾಗಿದ್ದು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ 295(ಎ) ಸೆಕ್ಷನ್ ಅಡಿ ಎಫ್ಐಆರ್ ದಾಖಲಿಸಿರುವ ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.
ಇದೇ ವೇಳೆ ವಿವಾದಿತ ಪುಸ್ತಕದ ಪ್ರತಿಗಳನ್ನೂ ಕೂಡ ವಶಕ್ಕೆ ಪಡೆದಿರುವ ಪೊಲೀಸರು, ಅದರಲ್ಲಿನ ವಿವಾದಿತ ಅಂಶಗಳ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಜನರ ಧಾರ್ಮಿಕ ಭಾವನೆಗಳೂ ಹಾಗೂ ನಂಬಿಕೆಗಳಿಗೆ ಧಕ್ಕೆ ತರುವುದೂ ಕೂಡ ಕ್ರಿಮಿನಲ್ ಮೊಕದ್ದಮೆ ವ್ಯಾಪ್ತಿಗೆ ಬರುತ್ತದೆ. ನ್ಯಾಯಾಲಯದಲ್ಲಿ ಪ್ರಕರಣ ಸಾಬೀತಾದಲ್ಲಿ ಕನಿಷ್ಠ 3 ವರ್ಷ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಹೆಸರು ಹೇಳಲಿಚ್ಛಿಸದ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನದಲ್ಲಿ ಜನರಲ್ಲಿ ಮೂಢನಂಬಿಕೆ ಹಾಗೂ ಮೌಢ್ಯಗಳನ್ನು ಬಿತ್ತಬಾರದು ಎಂದು ಸ್ಪಷ್ಟವಾಗಿ ಬರೆಯಲಾಗಿದೆ. ಆದರೆ, ಕೆಲ ಪಟ್ಟಭದ್ರರು, ಜನರ ಭಾವನೆಗಳನ್ನು ಸ್ವಾರ್ಥಕ್ಕಾಗಿ ಬಳಸಿಕೊಳ್ಳುವ ಮೂಲಕ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ನಾನು ಮಾಡಿದ್ದೇನೆ. ಇದರಲ್ಲಿ ನನಗೆ ಯಾವುದೇ ಭಯವಿಲ್ಲ ಎಂದು ಭಗವಾನ್ ತಿಳಿಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications