ಗಾಜನೂರಿನ ಡಾ.ರಾಜ್ ಆಸ್ತಿ ಐವರು ಮಕ್ಕಳ ಪಾಲು?
"ದೊಡ್ಡಮನೆ ಎಂದಿಗೂ ಹರಿದು ಹಂಚಿಕೆಯಾಗಲ್ಲ. ಆಸ್ತಿ ಹಂಚಿಕೆ ವಿಚಾರದಲ್ಲಿ ತಮ್ಮ ತಾಯಿ ನಿರ್ಧಾರ ಕೈಗೊಳ್ಳುತ್ತಾರೆ. ಜನಕ್ಕೆ ತಪ್ಪು ಸಂದೇಶ ಹೋಗಬಾರದು" - ರಾಘವೇಂದ್ರ ರಾಜ್ ಕುಮಾರ್.
ಮೈಸೂರು, ಅಕ್ಟೋಬರ್ 18 : ಚಾಮರಾಜನಗರ-ತಮಿಳುನಾಡು ಗಡಿಭಾಗದ ಗಾಜನೂರಿನಲ್ಲಿರುವ ವರನಟ ಡಾ.ರಾಜ್ಕುಮಾರ್ ಅವರಿಗೆ ಸೇರಿದ ಆಸ್ತಿಯನ್ನು ಐವರು ಮಕ್ಕಳಿಗೆ ಸಮನಾಗಿ ಹಂಚಲಾಗುತ್ತಿದೆ ಎಂಬ ವದಂತಿ ಹರಡಿದ್ದು ಈ ಸಂಬಂಧ ಜನರಲ್ಲಿ ಕುತೂಹಲವನ್ನು ಕೆರಳಿಸಿದೆ.
ತಮಿಳುನಾಡಿನ ತಾಳವಾಡಿ ಬಳಿಯ ಗಾಜನೂರು ಸಮೀಪ ಡಾ.ರಾಜ್ಕುಮಾರ್ರವರಿಗೆ ಸೇರಿದ ಸುಮಾರು 60 ಎಕರೆಯಷ್ಟು ಕೃಷಿ ಭೂಮಿಯಿದೆ. ಇದನ್ನು ಡಾ.ರಾಜ್ಕುಮಾರ್ ಅವರ ಐವರು ಮಕ್ಕಳು ಸಮಪಾಲಾಗಿ ಹಂಚಿಕೊಂಡಿದ್ದು, ಇದಕ್ಕಾಗಿ ಗಾಜನೂರಿನಲ್ಲಿ ಎಲ್ಲರೂ ಕುಟುಂಬ ಸಹಿತ ಬೀಡು ಬಿಟ್ಟಿದ್ದರಲ್ಲದೆ, ಈ ಸಂಬಂಧ ತಾಳವಾಡಿಯಲ್ಲಿರುವ ನೋಂದಣಿ ಕಚೇರಿಗೆ ತೆರಳಿದ್ದರು ಎಂಬ ಮಾಹಿತಿಯನ್ನು ಸ್ಥಳೀಯರು ಹೊರಹಾಕಿದ್ದಾರೆ.
ಪುತ್ರರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಪುನಿತ್ ರಾಜ್ಕುಮಾರ್, ಪುತ್ರಿಯರಾದ ಲಕ್ಷ್ಮೀ, ಪೂರ್ಣಿಮಾ ಅವರು ಗಾಜನೂರಿನಲ್ಲಿದ್ದರು. ಎಲ್ಲರೂ ಸೇರಿ ಮಾತುಕತೆ ನಡೆಸಿ ಪಿತ್ರಾರ್ಜಿತ ಆಸ್ತಿಯನ್ನು ಸಮಪಾಲಾಗಿ ಹಂಚಿಕೊಳ್ಳಲು ಮುಂದಾಗಿ ಅದಕ್ಕೆ ಬೇಕಾದ ಕಾನೂನು ರೀತಿಯ ವ್ಯವಹಾರಗಳನ್ನು ಮಾಡಿದ್ದಾರೆ ಎಂಬುದು ಇದೀಗ ಸುದ್ದಿಯಲ್ಲಿರುವ ವಿಚಾರವಾಗಿದೆ. [ರಾಜ್-ಲೀಲಾವತಿ ಸಂಬಂಧವೇ ಆ ಪುಸ್ತಕದ ಮುಖ್ಯಭಾಗ: ರವಿಬೆಳಗೆರೆ]

ಇನ್ನು ರಾಜ್ ಕುಟುಂಬದ ಸದಸ್ಯರು ಗಾಜನೂರಿಗೆ ಭೇಟಿ ನೀಡಿದ್ದ ಸಂದರ್ಭ ಅವರ ಸೋದರ ಅತ್ತೆ ಮನೆಗೆ ತೆರಳಿ ಅವರನ್ನು ಮಾತನಾಡಿಸಿಕೊಂಡು ಹೋದರು ಎನ್ನಲಾಗಿದೆ.
ಈ ನಡುವೆ ಗಾಜನೂರಿನಿಂದ ಮೈಸೂರು ಮೂಲಕ ಬೆಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ಕಿರಿಯ ಪುತ್ರ ಪುನೀತ್ ರಾಜ್ ಕುಮಾರ್ ಮತ್ತು ಪತ್ನಿ ಅಶ್ವಿನಿ ಸಮೇತ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಶ್ರೀ ಕಂಠೇಶ್ವರನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. [ಈ ಹಳ್ಳಿಯಲ್ಲಿ ಸತ್ತರೆ ಮಣ್ಣು ಮಾಡುವವರೂ ಗತಿಯಿಲ್ಲ!]

ಈ ಸಂದರ್ಭ ಮಾತನಾಡಿದ ಅವರು ದೇವಾಲಯಕ್ಕೆ ಬರುವಂತಹ ಯೋಜನೆ ಇರಲಿಲ್ಲ. ಗಾಜನೂರಿಗೆ ಹೋಗಿ ಬೆಂಗಳೂರಿಗೆ ಹಿಂತಿರುಗುವ ವೇಳೆ ದೇಗುಲಕ್ಕೆ ಭೇಟಿ ನೀಡಿದ್ದಾಗಿ ತಿಳಿಸಿದ್ದಾರೆ. ಒಟ್ಟಾರೆ ರಾಜ್ ಕುಟುಂಬದ ಎಲ್ಲ ಸದಸ್ಯರು ಗಾಜನೂರಿನಲ್ಲಿ ಕಾಣಿಸಿಕೊಂಡಿದ್ದಂತೂ ಸತ್ಯಸ್ಯಸತ್ಯ. [ಅಮಾವಾಸ್ಯೆ ರಾತ್ರಿ ಅಂದುಕೊಂಡದ್ದು ಕಾಡುಗಳ್ಳ ಸಾಧಿಸಿದ್ದು ಹೀಗೆ...]
ಇನ್ನು ಡಾ.ರಾಜ್ಕುಮಾರ್ ಅವರ ಪಿತ್ರಾರ್ಜಿತ ಆಸ್ತಿಯನ್ನು ಕುಟುಂಬದ ಸದಸ್ಯರು ಹಂಚಿಕೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಸುದ್ದಿಗಳು ಮಾಧ್ಯಮಗಳಲ್ಲಿ ಬ್ರೇಕಿಂಗ್ ನ್ಯೂಸ್ ಆಗಿ ಹೊರ ಬರುತ್ತಿದ್ದಂತೆಯೇ ಸ್ಪಷ್ಟನೆ ನೀಡಿದ ರಾಘವೇಂದ್ರ ರಾಜ್ಕುಮಾರ್, "ದೊಡ್ಡಮನೆ ಎಂದಿಗೂ ಹರಿದು ಹಂಚಿಕೆಯಾಗಲ್ಲ. ಆಸ್ತಿ ಹಂಚಿಕೆ ವಿಚಾರದಲ್ಲಿ ತಮ್ಮ ತಾಯಿ ನಿರ್ಧಾರ ಕೈಗೊಳ್ಳುತ್ತಾರೆ. ಜನಕ್ಕೆ ತಪ್ಪು ಸಂದೇಶ ಹೋಗಬಾರದು" ಎಂದು ಹೇಳಿದ್ದಾರೆ. ಆದರೆ ಗಾಜನೂರಿಗೆ ಕುಟುಂಬದ ಸದಸ್ಯರು ತೆರಳಿದ್ದನ್ನು ಒಪ್ಪಿಕೊಂಡಿದ್ದಾರೆ.
ಈ ಕುರಿತಂತೆ ಜನರಲ್ಲಿ ಕುತೂಹಲ ಹಾಗೆಯೇ ಉಳಿದಿದ್ದು, ಮುಂದಿನ ದಿನಗಳಲ್ಲಿ ಇದೆಲ್ಲದಕ್ಕೂ ಉತ್ತರ ಸಿಗಬಹುದೇನೋ? [ರಾಜ್, ಉದಯಶಂಕರ್ ಇಂದೇನಾದರೂ ಇದ್ದಿದ್ದರೆ...]
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications