ಇನ್ಮುಂದೆ ಆಸ್ತಿ ತೆರಿಗೆ ಪಾವತಿಸಲು ಪಾಲಿಕೆ ಕಚೇರಿಗೆ ಹೋಗಬೇಕಿಲ್ಲ
ಮೈಸೂರು, ಮಾರ್ಚ್ 03: ಆಸ್ತಿ ತೆರಿಗೆ ಪಾವತಿಸಲು ಇನ್ಮುಂದೆ ಪಾಲಿಕೆ ಕಚೇರಿಗೆ ಹೋಗಬೇಕಾಗಿಲ್ಲ. ಮನೆಯಲ್ಲೇ ಕುಳಿತು ತೆರಿಗೆ ಪಾವತಿಸಬಹುದು. ಆಸ್ತಿ ತೆರಿಗೆಯನ್ನು ಇನ್ಮುಂದೆ ಆನ್ ಲೈನ್ ನಲ್ಲೂ ಪಾವತಿಸಬಹುದು.
ಏಪ್ರಿಲ್ 1 ರಿಂದ ನಿಮ್ಮ ಆಸ್ತಿ ತೆರಿಗೆಯನ್ನು ಆನ್ ಲೈನ್ ಮೂಲಕವೇ ಪಾವತಿಸಬಹುದು. ಆನ್ ಲೈನ್ ಮೂಲಕ ಆಸ್ತಿ ತೆರಿಗೆ ಪಾವತಿಸಲು ಮೈಸೂರು ಮಹಾನಗರ ಪಾಲಿಕೆ ಅವಕಾಶ ಕಲ್ಪಿಸಿದ್ದು, ನೂತನ ಆರ್ಥಿಕ ವರ್ಷದಿಂದ ಆನ್ ಲೈನ್ ಸೌಲಭ್ಯ ಲಭ್ಯವಾಗಲಿದೆ.
ಏಪ್ರಿಲ್ 1 ರಿಂದಲೇ ಆನ್ ಲೈನ್ ಮೂಲಕ ಆಸ್ತಿ ತೆರಿಗೆ ಸಂಗ್ರಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪಾಲಿಕೆ ಆಯುಕ್ತ ಗುರುದತ್ ಹೆಗಡೆ ಮಾಹಿತಿ ನೀಡಿದರು. ಪಾಲಿಕೆಯಲ್ಲಿರುವ ಅವರ ಕಛೇರಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ""ಆನ್ ಲೈನ್ ನಲ್ಲಿ ನಲವತ್ತಕ್ಕೂ ಹೆಚ್ಚು ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಏಪ್ರಿಲ್ ಒಂದರಿಂದ ಆನ್ ಲೈನ್ ಮೂಲಕ ಪಾವತಿಸಲು ಅವಕಾಶ ಮಾಡಿಕೊಡಲಾಗುವುದು'' ಎಂದರು.

ವಿವಿಧ ಆ್ಯಪ್ ಗಳ ಮೂಲಕ ತೆರಿಗೆ ಪಾವತಿಸಬಹುದಾಗಿದೆ. ಇದರಿಂದ ಪಾರದರ್ಶಕತೆ ಕಾಯ್ದುಕೊಳ್ಳಲಾಗುತ್ತಿದ್ದು, ಅವರ ಆಸ್ತಿ ತೆರಿಗೆ ಬಗ್ಗೆ ಮಾಹಿತಿ ದೊರೆಯಲಿದೆ. ಜೊತೆಗೆ ಜನರು ಕೌಂಟರ್ ನಲ್ಲಿ ನಿಂತು ತೆರಿಗೆ ಪಾವತಿ ಮಾಡುವುದು ತಪ್ಪುತ್ತದೆ. ಇದರಿಂದ ಪಾಲಿಕೆ ಕೂಡ ಹೆಚ್ಚು ತೆರಿಗೆ ಸಂಗ್ರಹಿಸಲು ನೆರವಾಗುತ್ತದೆ. ಜನರಿಗೂ ಹಾಗೂ ಪಾಲಿಕೆಗೂ ಇದರಿಂದ ಅನುಕೂಲ ಆಗಲಿದೆ ಎಂದರು.
ಬೇಸಿಗೆಯಲ್ಲಿ ನೀರಿನ ಸಮಸ್ಯೆ ನೀಗಿಸಲು ಪಾಲಿಕೆ ಸಜ್ಜಾಗಿದೆ ಎಂದು ಪಾಲಿಕೆಯ ಆಯುಕ್ತ ಗುರುದತ್ ಹೆಗಡೆ ತಿಳಿಸಿದರು. ಮೈಸೂರು ನಗರದಲ್ಲಿ ನಾಲ್ಕು ಭಾಗಗಳಾಗಿ ವಿಂಗಡಿಸಿ ಕ್ರಮ ಕೈಗೊಳ್ಳಲಾಗುವುದು, ನೀರಿನ ಸಮಸ್ಯೆ ಬಂದ ತಕ್ಷಣವೇ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುವುದು. ವಾಟರ್ ಮನ್ ಹಾಗೂ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಎನ್.ಆರ್ ಕ್ಷೇತ್ರದಲ್ಲಿ ನೀರಿನ ಸಮಸ್ಯೆ ಉದ್ಬವವಾಗುವ ಸಾಧ್ಯತೆ ಇದೆ ಎಂದು ಗುರುತಿಸಲಾಗಿದೆ. ಮೇಗಳಾಪುರದ ವಾಟರ್ ಸಫ್ಲೈ ಯೋಜನೆ ಪೂರ್ಣಗೊಂಡರೆ ಎನ್.ಆರ್ ಕ್ಷೇತ್ರದ ನೀರಿನ ಸಮಸ್ಯೆ ಬಗೆಹರಿಯಲಿದೆ. ಮೇಗಳಾಪುರದ ಯೋಜನೆಯ ಪ್ರಗತಿ ಬಗ್ಗೆ ಪ್ರತಿದಿನ ಮಾಹಿತಿ ಪಡೆಯುತ್ತಿದ್ದೇವೆ.
ಮಾರ್ಚ್ ಅಂತ್ಯದ ವೇಳೆಗೆ ಕಾಮಗಾರಿ ಪೂರ್ಣವಾಗುವುದಾಗಿ ವಾಟರ್ ಬೋರ್ಡ್ ಅಧಿಕಾರಿಗಳು ತಿಳಿಸಿದ್ದಾರೆ. ನೀರು ಪೋಲಾಗುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಅನಧಿಕೃತ ಕನೆಕ್ಷನ್ ಗಳನ್ನು ಅಧಿಕೃತಗೊಳಿಸಲು ಸೂಚನೆ ನೀಡಲಾಗಿದೆ. ನೀರು ಸೋರಿಕೆ ತಡೆಗಟ್ಟಲು ಎಲ್ಲಾ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಪಾಲಿಕೆ ಆಯುಕ್ತ ಗುರುದತ್ ಹೆಗಡೆ ತಿಳಿಸಿದರು.
-
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ












Click it and Unblock the Notifications