Elephant Arjuna: ಮೈಸೂರಿನಲ್ಲಿ ದಸರಾ ಆನೆ 'ಅರ್ಜುನ' ಸ್ಮಾರಕ, ವಿಶೇಷತೆಗಳು
ಮೈಸೂರು, ಜನವರಿ 16: ಮೈಸೂರು ದಸರಾ ಎಂದಾಕ್ಷಣ ನೆನಪಿಗೆ ಬರುವುದು ದಸರಾ ಆನೆ 'ಅರ್ಜುನ'. 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ 2023ರಲ್ಲಿ ಕಾಡಾನೆ ಹಿಡಿಯುವ ಕಾರ್ಯಾಚರಣೆ ವೇಳೆ ಮೃತಪಟ್ಟಿತ್ತು. ಅರ್ಜುನ ಆನೆ ಸ್ಮಾರಕ ನಿರ್ಮಾಣ ಮಾಡಬೇಕು ಎಂಬ ಬೇಡಿಕೆ ಇದೆ. ಈಗ ಮೈಸೂರಿನಲ್ಲಿಯೇ ದಸರಾ ಆನೆ ಅರ್ಜುನನ ಸ್ಮಾರಕ ನಿರ್ಮಾಣವಾಗಲಿದೆ, ಅರ ವಿಶೇಷತೆಗಳು ಹೀಗಿವೆ.
'ಅರ್ಜುನ' ಆನೆ ಸ್ಮಾರಕ ನಿರ್ಮಾಣದ ಕುರಿತು ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ ಮಾಡಿ ಪ್ರಸ್ತಾವನೆ ಸಲ್ಲಿಕೆ ಮಾಡಿದ್ದಾರೆ. ಈ ಕುರಿತು ಪೋಸ್ಟ್ ಹಾಕಿರುವ ಅವರು, ಮೈಸೂರಿನ ಪರಂಪರೆಯ ಸಂರಕ್ಷಣೆ ದಸರಾ ಆನೆ ಅರ್ಜುನ ಹೆಸರಿನ ಸ್ಮಾರಕ ಮತ್ತು ಯೋಗ ವಸ್ತುಸಂಗ್ರಹಾಲಯಕ್ಕಾಗಿ ಸಲ್ಲಿಸಿರುವ ಪ್ರಸ್ತಾವನೆಗಳ ವಿವರ ನೀಡಿದ್ದಾರೆ.

ಮೈಸೂರಿನ ಶ್ರೀಮಂತ ಪರಂಪರೆಯನ್ನು ಗೌರವಿಸುವ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಎರಡು ಪ್ರಮುಖ ಯೋಜನೆಗಳನ್ನು ಕಾರ್ಯಗತಗೊಳಿಸಲು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಯೋಜನೆಗಳ ಕುರಿತು ವಿವರಗಳ ಸಮೇತ ಪ್ರಸ್ತಾವನೆಯನ್ನು ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.
ದಸರಾ ಆನೆ ಅರ್ಜುನ ಸ್ಮಾರಕ: ಬನ್ನಿಮಂಟಪದ ಎಲ್ಐಸಿ ವೃತ್ತದ ಬಳಿ ಪ್ರಸ್ತಾಪಿಸಲಾದ ದಸರಾ ಆನೆ ಅರ್ಜುನ ಸ್ಮಾರಕವು 2012 ರಿಂದ 2019 ರವರೆಗೆ ಚಿನ್ನದ ಅಂಬಾರಿಯನ್ನು ಹೊತ್ತು ಮೈಸೂರು ದಸರಾ ಮೆರವಣಿಗೆಯನ್ನು ಮುನ್ನಡೆಸಿದ ದಸರಾ ಆನೆ 'ಅರ್ಜುನ'ಗೆ ಗೌರವ ಸಲ್ಲಿಸುವ ಪ್ರಸ್ತಾವನೆಯಾಗಿದೆ.
ಈ ಸ್ಮಾರಕವು 'ಅರ್ಜುನ'ನ ಭವ್ಯ ಪ್ರತಿಮೆ. ಮೈಸೂರಿನ ದಸರಾ ಆನೆಗಳೊಂದಿಗಿನ ಬಾಂಧವ್ಯವನ್ನು ವಿವರಿಸುವ ಐತಿಹಾಸಿಕ ಫಲಕಗಳು. ಸೌರ ಬೆಳಕು, ಮಳೆನೀರು ಕೊಯ್ಲು ಮತ್ತು ಭೂದೃಶ್ಯ ಉದ್ಯಾನಗಳಂತಹ ಪರಿಸರ ಸ್ನೇಹಿ ವೈಶಿಷ್ಟ್ಯಗಳನ್ನು ಒಳಗೊಂಡಿರುತ್ತದೆ.
ಈ ಯೋಜನೆಯು ಮೈಸೂರು ಮತ್ತು ಅದರ ಪ್ರಸಿದ್ಧ ದಸರಾ ಆನೆಗಳ ನಡುವಿನ ಭಾವನಾತ್ಮಕ ಸಂಪರ್ಕವನ್ನು ಗೌರವಿಸುವ ಪ್ರಮುಖ ಪ್ರವಾಸಿ ಸ್ಥಳವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ.
ದಸರಾ ಆನೆ ಅರ್ಜುನ ಮೃತಪಟ್ಟಿದ್ದು ಹಾಸನ ಜಿಲ್ಲೆಯಲ್ಲಿ. ಆನೆ ಸಾವನ್ನಪ್ಪಿದ ಜಾಗದಲ್ಲಿಯೂ ಈಗಾಗಲೇ ಸ್ಮಾರಕ ನಿರ್ಮಾಣ ಮಾಡಲಾಗುತ್ತಿದೆ. ಈ ಯೋಜನೆಗೆ ಶಂಕುಸ್ಥಾಪನೆ ಮಾಡಲಾಗಿದೆ. ಮೈಸೂರಿನಲ್ಲಿಯೂ ಅರ್ಜುನ ಆನೆ ಸ್ಮಾರಕ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಲಾಗಿತ್ತು.
ದಸರಾ ಆನೆ ಅರ್ಜುನ ಸಾವು: 2023ರ ಡಿಸೆಂಬರ್ನಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಾಳೆಕೆರೆ ಅರಣ್ಯ ಪ್ರದೇಶದಲ್ಲಿ ಕಾಡಾನೆಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆ, ರೇಡಿಯೋ ಕಾಲರ್ ಅಳವಡಿಕೆ ವೇಳೆ ದುರಂತ ನಡೆಯಿತು. ಕಾಡಾನೆ ದಾಳಿಯಲ್ಲಿ ದಸರಾ ಆನೆ 'ಅರ್ಜುನ' ಆನೆ ಮೃತಪಟ್ಟಿತು.
ಅರ್ಜುನನ ನೇತೃತ್ವದಲ್ಲಿ 4 ಆನೆಗಳ ಸಹಾಯದಿಂದ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಚರಣೆ ಆರಂಭಿಸಿದ್ದರು. ಪುಂಡಾನೆಗೆ ಅರಿವಳಿಕೆ ಚುಚ್ಚು ಮದ್ದು ನೀಡುವಾಗ ಅದು ಅರ್ಜುನನ ಮೇಲೆ ದಾಳಿ ಮಾಡಿತ್ತು. ಆಗ ಉಳಿದ ಆನೆಗಳು ಹಿಮ್ಮೆಟ್ಟಿದವು. ಒಂಟಿ ಸಲಗದ ಜೊತೆ ಕಾಳಗಕ್ಕಿಳಿದ ಅರ್ಜುನ ಅರಣ್ಯ ಇಲಾಖೆ ಅಧಿಕಾರಿಗಳ ಜೀವ ಉಳಿಸಿತು.
ಕಾಳಗದಲ್ಲಿ ಅರ್ಜುನ ಆನೆ ಸಾವನ್ನಪ್ಪಿತ್ತು. ಅರ್ಜುನ ಆನೆ ಮೈಸೂರು ದಸರಾದಲ್ಲಿ 8 ಬಾರಿ ಚಿನ್ನದ ಅಂಬಾರಿಯನ್ನು ಹೊತ್ತಿತ್ತು. ಆದ್ದರಿಂದ ಈಗ ಸ್ಮಾರಕ ನಿರ್ಮಾಣ ಮಾಡಲಾಗುತ್ತಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications