ಮೈಸೂರಲ್ಲಿ ಸ್ಪಾ ನೆಪದಲ್ಲಿ ವೇಶ್ಯಾವಾಟಿಕೆ; ಓರ್ವ ಮಹಿಳೆ ಬಂಧನ
ಮೈಸೂರು, ಮಾರ್ಚ್ 19: ಸ್ಪಾ ನೆಪದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ ಮೈಸೂರು ನಗರದ ಸಿಸಿಬಿ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಹೈ-ವೇ ಸರ್ಕಲ್ ನಲ್ಲಿರುವ ಡ್ರೀಮ್ ಸ್ಪಾ ಮತ್ತು ಬ್ಯೂಟಿ ಜೋನ್ ಎಂಬ ಮಸಾಜ್ ಸೆಂಟರ್ ಮೇಲೆ ಮಾರ್ಚ್ ೧೭ ರಂದು ದಾಳಿ ಮಾಡಿ ಅಲ್ಲಿ ಮಸಾಜ್ ಮಾಡುವ ನೆಪದಲ್ಲಿ ಮಹಿಳೆಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮಹಿಳೆಯನ್ನು ಬಂಧಿಸಿದ್ದಾರೆ.
ಬಂಧಿತ ಮಹಿಳೆಯನ್ನು ಮಂಡ್ಯ ನಿವಾಸಿ ಎಲಿಜಬೆತ್ ರಾಣಿ ಕೋಂ ಲಾರೆನ್ಸ್ (38) ಎಂದು ಗುರುತಿಸಲಾಗಿದ್ದು, ಈಕೆಯನ್ನು ದಸ್ತಗಿರಿ ಮಾಡಿ, ವೇಶ್ಯಾವಾಟಿಕೆಗೆ ತಳ್ಳಲ್ಪಟ್ಟಿದ್ದ ಮೂವರು ಮಹಿಳೆಯರನ್ನು ರಕ್ಷಿಸಿದ್ದಾರೆ.

ವೇಶ್ಯಾವಾಟಿಕೆಗೆ ಗಿರಾಕಿ ಆಗಿ ಬಂದಿದ್ದ ಮಧು ಬಿನ್ ಶೇಷಪ್ಪ, ವಿಜಯನಗರ, ಮೈಸೂರು ಎಂಬಾತನನ್ನು ವಿಚಾರಣೆಗೊಳಪಡಿಸಿದ್ದು, ಇದೇ ವೇಳೆ ವೇಶ್ಯಾವಾಟಿಕೆಯಿಂದ ಸಂಪಾದಿಸಿದ್ದ 6000 ರೂ. ಹಣ, ಮೊಬೈಲ್ ಫೋನ್ ಹಾಗೂ ಇತರೆ ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತೆಯು ಅನ್ ಲೈನ್ ಮೂಲಕ ಗಿರಾಕಿಗಳನ್ನು ಹುಡುಕುತಿದ್ದಳು ಎಂದು ಪೋಲೀಸರು ತಿಳಿಸಿದ್ದಾರೆ. ಈ ಸಂಬಂಧ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಒಂದೆಡೆ ಕೊರೊನಾ ವೈರಸ್ ಭೀತಿ ಎಲ್ಲೆಡೆ ಹರಡುತ್ತಿದ್ದು ಜನ ಮನೆಯಿಂದ ಹೊರಗೆ ಹೋಗಲು ಭಯಪಡುತ್ತಿದ್ದರೂ, ವೇಶ್ಯಾವಾಟಿಕೆ ದಂಧೆಗಳು ಮಾತ್ರ ಯಾವುದೇ ಆತಂಕವಿಲ್ಲದೇ ನಡೆಯುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಈ ನಡುವೆ ಮಸಾಜ್ ಸೆಂಟರ್ ನೆಪದಲ್ಲಿ ಕೆಲವು ಮಹಿಳೆಯರೇ ವೇಶ್ಯಾವಾಟಿಕೆಯನ್ನು ನಡೆಸುತ್ತಿರುವುದು ಇತ್ತೀಚಿಗೆ ಬೆಳಕಿಗೆ ಬರುತ್ತಿರುವ ಪ್ರಕರಣಗಳಿಂದ ಸಾಬೀತಾಗುತ್ತಿದೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications