ಮೈಸೂರು: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ವೃದ್ಧೆ ಬಂಧನ
ಮೈಸೂರು, ನವೆಂಬರ್ 02: ಮನೆಯಲ್ಲೇ ಯುವತಿಯರನ್ನಿಟ್ಟು ವೇಶ್ಯಾವಾಟಿಕೆ ನಡೆಸುತ್ತಿದ್ದ ವೃದ್ಧೆ ಸೇರಿದಂತೆ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಇಬ್ಬರು ಸೇರಿದಂತೆ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನಲ್ಲಿ ವೇಶ್ಯಾವಾಟಿಕೆಯ ಕಬಂಧಬಾಹು ಎಲ್ಲೆಡೆ ವ್ಯಾಪಿಸಿದ್ದು, ಲಾಡ್ಜ್ ಗಳ ಮೇಲೆ ಮೇಲಿಂದ ಮೇಲೆ ಪೊಲೀಸರು ದಾಳಿ ನಡೆಸುತ್ತಿರುವ ಕಾರಣ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಕೆಲವರು ತಮ್ಮ ಮನೆಗಳನ್ನೇ ದಂಧೆಗೆ ಬಳಸಿಕೊಳ್ಳುತ್ತಿರುವುದು ಇತ್ತೀಚೆಗಿನ ದಿನಗಳಲ್ಲಿ ಹೆಚ್ಚಾಗಿದೆ.

ಕೆಲವರು ಮನೆಗಳನ್ನು ಭೋಗ್ಯಕ್ಕೆ ಪಡೆದು ಅಲ್ಲಿ ತಮ್ಮ ದಂಧೆಯನ್ನು ನಡೆಸುತ್ತಿರುವುದು ಗುಟ್ಟಾಗಿಯೇನು ಉಳಿದಿಲ್ಲ. ಮೇಲ್ನೋಟಕ್ಕೆ ಸಭ್ಯರಂತೆ ನಟಿಸುವ ಮಹಿಳೆಯರು ಯುವತಿಯರನ್ನಿಟ್ಟುಕೊಂಡು ಹೊರಗಿನಿಂದ ಗಿರಾಕಿಗಳನ್ನು ಕರೆಯಿಸಿಕೊಂಡು ದಂಧೆ ನಡೆಸುವುದು ಇತ್ತೀಚೆಗೆ ಕಂಡು ಬರುತ್ತಿರುವ ಬೆಳವಣಿಗೆ.
ಈ ನಡುವೆ ನಗರದ ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯ ದಟ್ಟಗಳ್ಳಿ, 5ನೇ ಕ್ರಾಸ್, ಮನೆ ನಂ. 57ರ ನಿವಾಸಿ ವೃದ್ಧ ಮಹಿಳೆ ಪ್ರೇಮಮ್ಮ(81) ತನ್ನ ಮನೆಯಲ್ಲೇ ವೇಶ್ಯಾವಾಟಿಕೆ ನಡೆಸುತ್ತಿದ್ದಳು. ಆಗಾಗ್ಗೆ ಮನೆಗೆ ಅಪರಿಚಿತರು ಬಂದು ಹೋಗುತ್ತಿದ್ದರಿಂದ ಸುತ್ತಮುತ್ತಲಿನವರಿಗೆ ಅನುಮಾನ ಬಂದಿತ್ತು. ಈ ಕುರಿತು ಪೊಲೀಸರಿಗೂ ಮಾಹಿತಿ ಹೋಗಿತ್ತು.
ಹೀಗಾಗಿ ಮೈಸೂರು ನಗರದ ಅಪರಾಧ ವಿಭಾಗದ ಡಿಸಿಪಿ ವಿಕ್ರಂ ವಿ ಅಮಟೆರವರ ಮಾರ್ಗದರ್ಶನದಲ್ಲಿ ಸಿಸಿಬಿ ಎಸಿಪಿ ಸಿ.ಗೋಪಾಲ್ರವರ ನೇತೃತ್ವದಲ್ಲಿ ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಎಂ.ಸಿ.ರಾಜಶೇಖರ್ ಹಾಗೂ ಕುವೆಂಪುನಗರ ಠಾಣಾ ಇನ್ಸ್ ಪೆಕ್ಟರ್ ಆರ್.ವಿಜಯಕುಮಾರ್, ಸಿಸಿಬಿಯ ಸಿಬ್ಬಂದಿ ಜೀವನ್, ಬಿ.ರಾಧೇಶ, ಮಹಿಳಾ ಸಿಬ್ಬಂದಿ ನಾಗುಬಾಯಿ, ಮಂಜುಳ ಮತ್ತು ಕುವೆಂಪುನಗರ ಠಾಣೆಯ ಸಿಬ್ಬಂದಿ ಮನೆಯ ಮೇಲೆ ದಾಳಿ ನಡೆಸಿದೆ.
ಈ ವೇಳೆ ಮನೆಯಲ್ಲಿ ಪ್ರೇಮಮ್ಮ ಎಂಬ ವೃದ್ಧೆ ಇಬ್ಬರು ಯುವತಿಯರನ್ನಿಟ್ಟುಕೊಂಡು ವೇಶ್ಯಾವಾಟಿಕೆಯನ್ನು ನಡೆಸುತ್ತಿದ್ದದ್ದು ಬೆಳಕಿಗೆ ಬಂದಿತಲ್ಲದೆ, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮೈಸೂರು ರಾಜೀವ್ ನಗರದ ಸಮೀವುಲ್ಲಾ ಎಂಬುವರ ಪುತ್ರ ಮಹಮ್ಮದ್ ಸಲ್ಮಾನ್(26), ನಾಡನಹಳ್ಳಿ ನಿವಾಸಿ ದಿ.ನಂಜಪ್ಪ ಅವರ ಪುತ್ರ ಗುರುಮಲ್ಲಪ್ಪ(45) ಸಿಕ್ಕಿ ಬಿದ್ದಿದ್ದಾರೆ. ವೃದ್ಧೆ ಪ್ರೇಮಮ್ಮ ಹಾಗೂ ಮಹಮ್ಮದ್ ಸಲ್ಮಾನ್, ಗುರುಮಲ್ಲಪ್ಪ ಅವರನ್ನು ಬಂಧಿಸಲಾಗಿದ್ದು, ಇವರಿಬ್ಬರನ್ನು ವಶಕ್ಕೆ ಪಡೆದ ಪೊಲೀಸರು ಯುವತಿಯರಿಬ್ಬರನ್ನು ರಕ್ಷಿಸಿದ್ದಾರೆ.
ದಾಳಿಯ ವೇಳೆ 4ಸಾವಿರ ರೂ. ನಗದು ಹಣ, 5 ಮೊಬೈಲ್ ಫೋನ್ಗಳು ಮತ್ತು ಎರಡು ದ್ವಿ ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications