ಮೈಸೂರು: ಕಾಲಾ ಚಿತ್ರ ಪ್ರದರ್ಶನಕ್ಕೆ ತಡೆಯೊಡ್ಡಿ ಪ್ರತಿಭಟನೆ
ಮೈಸೂರು, ಜೂನ್ 7 : ತಮಿಳು ಚಲನಚಿತ್ರ 'ಕಾಲಾ' ಪ್ರದರ್ಶನಕ್ಕೆ ಕರ್ನಾಟಕದಲ್ಲಿ ಅವಕಾಶ ಮಾಡಿಕೊಡಬಾರದು ಎಂದು ಆಗ್ರಹಿಸಿ ಮೈಸೂರು ಕನ್ನಡ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕಾಡಾ ಕಚೇರಿ ಎದುರು ಸೇರಿದ ಪ್ರತಿಭಟನಾಕಾರರು ನಟ ರಜನಿಕಾಂತ್ ಅವರು ಕಾವೇರಿ ನದಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದು ಖಂಡನೀಯ. ಕಾವೇರಿ ಸಮಸ್ಯೆಯನ್ನು ಎರಡು ರಾಜ್ಯಗಳು ಸೌಹಾರ್ದದಿಂದ ಬಗೆಹರಿಸಿಕೊಳ್ಳಬೇಕು.
ಬೆಂಗಳೂರಿನ ಚಿತ್ರಮಂದಿರಗಳಲ್ಲಿ 'ಕಾಲಾ'ಗೆ ಸಿಕ್ಕಿಲ್ಲ ಬಿಡುಗಡೆ ಭಾಗ್ಯ
ಅದನ್ನು ಬಿಟ್ಟು ಭಾವನಾತ್ಮಕವಾಗಿ ವಿವಾದ ಸೃಷ್ಟಿಸುತ್ತಿರುವ ರಜನಿಕಾಂತ್ ಕನ್ನಡಿಗರ ಪಾಲಿಗೆ ಖಳನಾಯಕ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ವೇದಿಕೆಯ ಅಧ್ಯಕ್ಷ ಬಾಲಕೃಷ್ಣ ಮಾತನಾಡಿ, ಕಾವೇರಿ ನದಿ ನೀರು ಹಂಚಿಕೆ ವಿವಾದ ನ್ಯಾಯಾಲಯದಲ್ಲಿದೆ. ಅಲ್ಲದೆ, ಸುಪ್ರೀಂ ಕೋರ್ಟ್ 'ಸ್ಕೀಂ' ರೂಪಿಸುವಂತೆ ಸೂಚಿಸಿದೆ. ಹೀಗಿರುವಾಗ ನ್ಯಾಯಾಲಯವನ್ನು ಗೌರವಿಸಬೇಕು. ಅದನ್ನು ಬಿಟ್ಟು ಸಿನಿಮಾ ನಿರ್ಮಿಸಿ ಕನ್ನಡಿಗರ ಮನಸ್ಸು ನೋಯಿಸಬಾರದು ಎಂದು ಖಂಡಿಸಿದರು.

ರಜನಿಕಾಂತ್ ಅವರು ರಾಜಕೀಯಕ್ಕಾಗಿ ಕಾವೇರಿ ವಿಚಾರವನ್ನು ಬಳಸಿಕೊಳ್ಳುತ್ತಿದ್ದಾರೆ. ಅವರು ಎರಡು ರಾಜ್ಯಗಳ ಸಂಬಂಧ ಹಾಳು ಮಾಡುತ್ತಿದ್ದಾರೆ. ಇದೇ ರೀತಿಯ ಟೀಕೆ ಮುಂದುವರಿದರೆ ರಜನಿಕಾಂತ್ ಅಭಿನಯದ ಯಾವುದೇ ಚಿತ್ರಗಳು ಮೈಸೂರಿನಲ್ಲಿ ಪ್ರದರ್ಶನಕ್ಕೆ ಅವಕಾಶ ನೀಡದಂತೆ ಮಾಡಲಾಗುವುದು ಎಂದು ಎಚ್ಚರಿಸಿದರು.
-
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ












Click it and Unblock the Notifications