ಮೈಸೂರು ಪಾಲಿಕೆ ಮೈತ್ರಿ; ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದವರು ಅಮಾನತು
ಮೈಸೂರು, ಮಾರ್ಚ್ 06: ಮೈಸೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿನ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ಮೈತ್ರಿ ಭಾರೀ ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ಕಾಂಗ್ರೆಸ್ ಪಕ್ಷದಲ್ಲಿ ಹಲವು ಬೆಳವಣಿಗೆಗಳು ನಡೆಯುತ್ತಿವೆ.
ಮೇಯರ್ ಚುನಾವಣೆ ಮೈತ್ರಿ ವಿಚಾರದಿಂದಾಗಿ ಮೈಸೂರು ಕಾಂಗ್ರೆಸ್ ಪಾಳಯ ಛಿದ್ರ ಛಿದ್ರವಾಗಲಿದೆಯೇ? ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಪಾಲಿಕೆ ಮೈತ್ರಿ ಗೊಂದಲದ ವಿಚಾರ ಹೈಕಮಾಂಡ್ ಅಂಗಳ ತಲುಪಿದೆ. ಇದರ ಬೆನ್ನಲ್ಲಿಯೇ ವಿವಿಧ ಮುಖಂಡರ ತಲೆದಂಡಗಳು ಆರಂಭವಾಗಿವೆ.
ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರಿನ ತನ್ವೀರ್ ಸೇಠ್ ನಿವಾಸದ ಮುಂದೆ ಪ್ರತಿಭಟನೆ ನಡೆದಿತ್ತು. ಸಿದ್ದರಾಮಯ್ಯ ವಿರುದ್ಧ ಘೋಷಣೆಗಳನ್ನು ಕೂಗಲಾಗಿತ್ತು.

ಘೋಷಣೆ ಕೂಗಿದ ಮುಖಂಡರ ವಿರುದ್ಧ ಪಕ್ಷದ ಹೈಕಮಾಂಡ್ ಶಿಸ್ತು ಕ್ರಮವನ್ನು ಕೈಗೊಂಡಿದ್ದು, ಕಾಂಗ್ರೆಸ್ ಸದಸ್ಯತ್ವದಿಂದ ಅಮಾನತುಗೊಳಿಸಿದೆ. ಪ್ರಮುಖವಾಗಿ ನರಸಿಂಹರಾಜ ಕ್ಷೇತ್ರದಲ್ಲಿ 6 ಮಂದಿಯನ್ನು ಅಮಾನತು ಮಾಡಲಾಗಿದೆ.
ಬ್ಲಾಕ್ ಕಾಂಗ್ರೆಸ್ ಸದಸ್ಯರು ಸಹ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದ್ದರು. ಈ ಹಿನ್ನೆಲೆಯಲ್ಲಿ 6 ಮಂದಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಮುಂದಿನ ಆದೇಶದ ತನಕ ಅಮಾನತು ಮಾಡಲಾಗಿದೆ. ಮೈಸೂರು ನಗರಾಧ್ಯಕ್ಷ ಆರ್. ಮೂರ್ತಿ ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ.
ಅಮಾನತುಗೊಂಡ 6 ಜನರು ಸಹ ಶಾಸಕ ತನ್ವೀರ್ ಸೇಠ್ ಆಪ್ತ ವಲಯದಲ್ಲಿ ಗುರುತಿಸಿಕೊಂಡವರು. ಎಲ್ಲರೂ ತನ್ವೀರ್ ಸೇಠ್ ಮನೆ ಮುಂದೆ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಸಿದ್ದರಾಮಯ್ಯ ವಿರುದ್ಧ ಧಿಕ್ಕಾರವನ್ನು ಕೂಗಿದ್ದರು.
ಪಾಲಿಕೆ ಚುನಾವಣೆಯಲ್ಲಿ ಮೈತ್ರಿ ಮಾತುಕತೆ ಜವಾಬ್ದಾರಿಯನ್ನು ಶಾಸಕ ತನ್ವೀರ್ ಸೇಠ್ ತೆಗೆದುಕೊಂಡಿದ್ದರು. ಆದರೆ, ಸಿದ್ದರಾಮಯ್ಯ ಸೂಚನೆ ಮೀರಿ ಮೈತ್ರಿ ನಡೆದಿದೆ ಎಂದು ತನ್ವೀರ್ ಸೇಠ್ ವಿರುದ್ಧ ವಿವಿಧ ನಾಯಕರು ಆಕ್ರೋಶಗೊಂಡಿದ್ದರು. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿತ್ತು.
-
ದಾವಣಗೆರೆ ಬೈಎಲೆಕ್ಷನ್ ಬೆನ್ನಲ್ಲೇ ಭಿನ್ನಮತ ಸ್ಫೋಟ: KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ -
Cabinet Reshuffle: ಶಾಸಕರ ದೆಹಲಿಗೆ ಭೇಟಿ ತಪ್ಪಿಲ್ಲ, ಸಂಪುಟ ಪುನರ್ರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಿದ್ದರಾಮಯ್ಯ -
ಮೂರು ವರ್ಷ ಮುಗಿದಿದೆ, ಸಚಿವ ಸಂಪುಟ ಬದಲಿಸಿ: ಹೈಕಮಾಂಡ್ಗೆ ಮನವಿ ಸಲ್ಲಿಸಲು ಟಿ.ಬಿ.ಜಯಚಂದ್ರ ಸಜ್ಜು -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಬೆಂಗಳೂರಿನಲ್ಲಿ ಇಂದು ಶ್ರೀ ಎಂ ಅವರ "ಉಪನಿಷತ್ತುಗಳು ಮತ್ತು ಜೆ.ಕೃಷ್ಣಮೂರ್ತಿ" ಹೊಸ ಕೃತಿ ಬಿಡುಗಡೆ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ











Click it and Unblock the Notifications