ಮೈಸೂರು ಮೃಗಾಲಯ ನಿರ್ದೇಶಕಿ ವಿರುದ್ಧ ಪ್ರತಿಭಟನೆ
ಮೈಸೂರು, ಜನವರಿ 28 : ಹಕ್ಕಿ ಜ್ವರದ ನೆಪವನ್ನಿಟ್ಟುಕೊಂಡು, ಏಕಪಕ್ಷೀಯವಾಗಿ ನಿರ್ಧಾರವನ್ನು ತೆಗೆದುಕೊಂಡು ಮೈಸೂರಿನ ಚಾಮರಾಜೇಂದ್ರ ಮೃಗಾಲಯವನ್ನು ಬಂದ್ ಮಾಡಿರುವ ಮೃಗಾಲಯದ ನಿರ್ದೇಶಕಿಯವರ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾಪಡೆ ವತಿಯಿಂದ ಪ್ರತಿಭಟನೆ ನಡೆಯಿತು.
ಮೈಸೂರು ಮೃಗಾಲಯದ ಎದುರು ಶನಿವಾರ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಪ್ರವಾಸಿಗರ ಪ್ರಮುಖ ತಾಣವಾದ ಮೃಗಾಲಯಕ್ಕೆ 124 ವರ್ಷಗಳ ಇತಿಹಾಸವಿದ್ದು, ಎಂದೂ ಕೂಡ ಯಾವ ಪರಿಸ್ಥಿತಿಯಲ್ಲೂ ಒಂದು ತಿಂಗಳ ಕಾಲ ಬಂದ್ ಮಾಡಿರಲಿಲ್ಲ. ಇದೇ ಮೊದಲ ಬಾರಿಗೆ ಬಂದ್ ಮಾಡಲಾಗಿದೆ.

ಮೃಗಾಲಯದ ನಿರ್ದೇಶಕಿ ಮತ್ತು ಮೃಗಾಲಯದ ನೌಕರರಲ್ಲಿ ಅಸಮಾಧಾನವಿದೆ. ಇವರ ಮತ್ತು ನೌಕರರ ನಡುವಿನ ಹೊಂದಾಣಿಕೆ ಸಮಸ್ಯೆಯಿಂದಲೇ ಮೃಗಾಲಯದಲ್ಲಿ ಪಕ್ಷಿಗಳ ಸಾವು ಸಂಭವಿಸಿದೆ. ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯವಹಿಸಿದ್ದಾರೆ ಎಂದು ಆರೋಪಿಸಿದರು. ಮೃಗಾಲಯ ಬಂದ್ ಮಾಡಿರುವುದರಿಂದ ಪ್ರವಾಸೋದ್ಯಮಕ್ಕೆ ಹಾಗೂ ರಾಜ್ಯ ಬೊಕ್ಕಸಕ್ಕೆ ಕೋಟ್ಯಾಂತರ ರೂ.ನಷ್ಟವುಂಟಾಗಿದೆ. ಸರ್ಕಾರ ಕೂಡಲೇ ಮೃಗಾಲಯದಲ್ಲಿ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ಪ್ರವಾಸಿಗರಿಗೆ ಮೃಗಾಲಯಕ್ಕೆ ಪ್ರವೇಶ ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿದರು.
ಈ ಸಂದರ್ಭ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ, ನಗರಾಧ್ಯಕ್ಷ ಪ್ರಜೇಶ್ ಪಿ, ಶಾಂತಮೂರ್ತಿ ಆರ್, ರವಿತೇಜ, ಮಿನಿಬಂಗಾರಪ್ಪ, ನಂದಕುಮಾರ್, ಶ್ರೀನಿವಾಸರಾಜಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications