ಮೈಸೂರಿನಲ್ಲಿ ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಪರ- ವಿರುದ್ಧ ಪ್ರತಿಭಟನೆ
ಮೈಸೂರು, ಡಿಸೆಂಬರ್ 28: ಅದು ಸಾಂಸ್ಕೃತಿಕ ಮೈಸೂರಿನ ಹಿರಿಮೆ, ಆಕರ್ಷಣೆ ಹೆಚ್ಚಿಸಿದ ತಾಣ. ನಾಟಕ, ನೃತ್ಯ, ಸಂಗೀತ ಹೀಗೆ ಒಂದಿಲ್ಲೊಂದು ರಂಗಭೂಮಿ ಚಟುವಟಿಕೆಗಳಿಂದ ಎಲ್ಲರನ್ನು ತನ್ನತ್ತ ಸೆಳೆಯುತ್ತಿದ್ದ ಮೈಸೂರಿನ ಪ್ರತಿಷ್ಠಿತ ರೆಪರ್ಟರಿ ರಂಗಾಯಣ ಇದೀಗ, ತನ್ನ ರಂಪಾಟದಿಂದ ಸದ್ದು ಮಾಡುತ್ತಿದ್ದು, ರಂಗಾಯಣ ನಿರ್ದೇಶಕರ ವಿರುದ್ಧ ನಡೆಯುತ್ತಿರುವ ಹೋರಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪರನ್ನು ವಜಾಗೊಳಿಸುವಂತೆ ಆಗ್ರಹಿಸಿ ಮೈಸೂರಿನ ರಂಗಕರ್ಮಿಗಳು, ಸಂಘಟನೆಗಳ ಸದಸ್ಯರು ನಡೆಸುತ್ತಿರುವ ಹೋರಾಟ ಮತ್ತೊಂದು ಹಂತಕ್ಕೇರಿದೆ. ಒಂದೆಡೆ ಅಡ್ಡಂಡ ಕಾರ್ಯಪ್ಪ ವಿರುದ್ಧ ಪ್ರತಿಭಟನೆ ನಡೆದರೆ, ಇನ್ನೊಂದೆಡೆ ರಂಗಾಯಣದ ನಿರ್ದೇಶಕರ ಪರವಾದ ಪ್ರತಿಭಟನೆ ಸಹ ನಡೆದಿದೆ. ಆ ಮೂಲಕ ರಂಗಾಯಣದ ನಿರ್ದೇಶಕರ ವಿರುದ್ಧ ಪರ- ವಿರೋಧದ ಹೋರಾಟ ನಡೆಯುತ್ತಿರುವುದು, ಈ ಸಮಸ್ಯೆಯನ್ನು ಇನ್ನಷ್ಟು ಬಿಗಡಾಯಿಸುವಂತೆ ಮಾಡಿದೆ.
ಕಾರ್ಯಪ್ಪ ವಜಾಕ್ಕೆ ಆಗ್ರಹ
ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ವಿರುದ್ಧ ಪ್ರತಿಭಟನೆ ಮುಂದುವರಿದಿದ್ದು, ಮಂಗಳವಾರ ನಡೆಸಿದ ರಂಗಾಯಣ ಉಳಿಸಿ ಹೋರಾಟ ಸಮಿತಿ ಸದಸ್ಯರು ಪ್ರತಿಭಟನಾ ಜಾಥಾ ನಡೆಸಿದರು. ಮಾಜಿ ಮೇಯರ್ ಪುರುಷೋತ್ತಮ್ ನೇತೃತ್ವದಲ್ಲಿ ನಗರದ ಕುಕ್ಕರಹಳ್ಳಿ ಕೆರೆ ಜಂಕ್ಷನ್ ಬಳಿಯಿಂದ ರಂಗಾಯಣದವರೆಗೆ ಪ್ರತಿಭಟನಾ ಜಾಥಾ ನಡೆಸಿದ ಪ್ರತಿಭಟನಾಕಾರರು, ಅಡ್ಡಂಡ ಕಾರ್ಯಪ್ಪ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಡ್ಡಂಡ ಕಾರ್ಯಪ್ಪರನ್ನು ರಂಗಾಯಣದಿಂದ ವಜಾಗೊಳಿಸುವಂತೆ ಒತ್ತಾಯ ಮಾಡಿದರು. ಪ್ರತಿಭಟನೆಗೆ ಮಾಜಿ ಶಾಸಕ ಎಂ.ಕೆ. ಸೋಮಶೇಖರ್ ಕೂಡ ಬೆಂಬಲ ನೀಡಿದರು.

ರಂಗಾಯಣಕ್ಕೆ ರಕ್ಷಣೆ ಕೊಡಿ
ಇನ್ನು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪರನ್ನು ಬೆಂಬಲಿಸಿ ಕೊಡವ ಸಮಾಜ ಹಾಗೂ ಮೈಸೂರು ರಕ್ಷಣಾ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಶ್ರೀರಾಮ ಹಾಗೂ ದುರ್ಯೋಧನ ವೇಷಧಾರಿಗಳೊಂದಿಗೆ ಜಮಾಯಿಸಿದ ಪ್ರತಿಭಟನಾಕಾರರು, ರಂಗಾಯಣ ನಿರ್ದೇಶಕರನ್ನು ಸ್ವತಂತ್ರವಾಗಿ ಕೆಲಸ ಮಾಡಲು ಬಿಡಿ ಎಂದು ಘೋಷಣೆ ಕೂಗಿದರಲ್ಲದೆ, ನಾಟಕ ನೋಡಲು ಬಂದವರಿಗೆ ಪ್ರಗತಿಪರರಿಂದ ತೊಂದರೆ ನೀಡಲಾಗುತ್ತಿದೆ ಎಂದು ಆರೋಪಿಸಿದರು.
ಮಾಳವಿಕಾ ಅವಿನಾಶ್ ಹಾಗೂ ಚಕ್ರವರ್ತಿ ಸೂಲಿಬೆಲೆ ಆಹ್ವಾನಕ್ಕೆ ಕೊಡವ ಸಮಾಜ ಸ್ವಾಗತಿಸಲಿದೆ, ರಂಗಾಯಣದ ಬಹುರೂಪಿ ಯಾರ ಸ್ವತ್ತೂ ಅಲ್ಲ. ಆದರೂ ಪ್ರಗತಿಪರರು ವಿನಾಕಾರಣ ತೊಂದರೆ ನೀಡುತ್ತಿದ್ದಾರೆ. ಹೀಗಾಗಿ ರಂಗಾಯಣಕ್ಕೆ ಸೂಕ್ತ ರಕ್ಷಣೆ ನೀಡುವಂತೆ ಒತ್ತಾಯಿಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಹೋಟೆಲ್ ಮಾಲೀಕರ ಬೆಂಬಲ
ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ವಿರುದ್ಧ ನಡೆಯುತ್ತಿರುವ ಹೋರಾಟದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾ ಹೋಟೆಲ್ ಮಾಲೀಕರ ಸಂಘ, ಕಾರ್ಯಪ್ಪರನ್ನು ಬೆಂಬಲಿಸಿತು. ಈ ಬಗ್ಗೆ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಗೆ ಸಾಥ್ ನೀಡುವ ಮೂಲಕ ತಮ್ಮ ಬೆಂಬಲ ವ್ಯಕ್ತಪಡಿಸಿದ ಸಂಘದ ಜಿಲ್ಲಾಧ್ಯಕ್ಷ ಸಿ. ನಾರಾಯಣಗೌಡ, ನಾಟಕ ಪ್ರದರ್ಶನಕ್ಕೆ ಅಡ್ಡಿ ಆಗಬಾರದು. ಹೋರಾಟಗಾರರು ಎಂದು ಹೇಳಿ ಕಾರ್ಯಪ್ಪ ವಿರುದ್ಧ ಹೋರಾಟ ಮಾಡುತ್ತಿರುವುದು ಸರಿಯಲ್ಲ. ರಂಗಾಯಣದಲ್ಲಿ ಕಲಾವಿದರಿಗೆ ಆಗುತ್ತಿದ್ದ ಅನ್ಯಾಯವನ್ನು ಕಾರ್ಯಪ್ಪ ತಡೆಗಟ್ಟಿದ್ದಾರೆ ಎಂದು ಬೆಂಬಲ ಸೂಚಿಸಿದರು.

ಅಡ್ಡಂಡ ಕಾರ್ಯಪ್ಪ ವಿರುದ್ಧ ನಡೆದ ಪರ- ವಿರೋಧದ ಪ್ರತಿಭಟನೆ ಹಿನ್ನೆಲೆಯಲ್ಲಿ ರಂಗಾಯಣದ ಬಳಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications