ದಸರಾ ದೀಪಾಲಂಕಾರ ತೆರವುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ
ಮೈಸೂರು, ಅಕ್ಟೋಬರ್ 14: ಸಾಂಕೇತಿಕ ದಸರಾ ಆಚರಣೆ ನಡೆಸಿ, ದೀಪಾಲಂಕಾರ ತೆರವುಗೊಳಿಸುವಂತೆ ಆಗ್ರಹಿಸಿ ಇಂದು ಮೈಸೂರು ಜಿಲ್ಲಾ ಸಮಿತಿಯ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಇದೇ ಸಂದರ್ಭ, ದಸರಾ ಆಚರಣೆಗೆ ಮೀಸಲಿಟ್ಟ ಹಣವನ್ನು ಆಟೋ, ಟ್ಯಾಕ್ಸಿ, ಸಣ್ಣಪುಟ್ಟ ವ್ಯಾಪಾರಿಗಳಿಗೆ ಮಾಸಿಕ 7500ರೂ ನೀಡಬೇಕು ಎಂದೂ ಆಗ್ರಹಿಸಲಾಯಿತು. ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಕೆ.ಬಸವರಾಜ್ ಮಾತನಾಡಿ, "ಜಿಲ್ಲೆಯಲ್ಲಿ ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿದ್ದು, ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇಂಥ ಸಂದರ್ಭದಲ್ಲಿ ಜಿಲ್ಲಾಡಳಿತ, ಸೋಂಕು ನಿಯಂತ್ರಿಸುವ ಬದಲು ದಸರಾ ಆಚರಣೆ ಮಾಡಿ ಸೋಂಕನ್ನು ಹೆಚ್ಚಿಸಲು ಹೊರಟಿದೆ. ಸರಳ ದಸರಾ ಆಚರಿಸಲು, ದೀಪಾಲಂಕಾರ ಮಾಡಲು ಹೊರಟಿರುವುದು ಸೂತಕದ ಮನೆಯಲ್ಲಿ ದೀಪಾಲಂಕಾರ ಮಾಡಿದಂತೆ" ಎಂದು ಟೀಕಿಸಿದರು.

ದಸರಾ ಆಚರಿಸುವ ಬದಲು ದಸರಾ ಆಚರಣೆಗೆ ಮೀಸಲಿಟ್ಟಿರುವ ಹಣವನ್ನು ಬಡ ವ್ಯಾಪಾರಿಗಳಿಗೆ ಮೂರು ತಿಂಗಳು ಕಾಲ ನೀಡಬೇಕು. ಪ್ಯಾಂಡಮಿಕ್ ಆಕ್ಟ್ ನೀಡುವ ವಿಶೇಷಾಧಿಕಾರವನ್ನು ಜಿಲ್ಲಾಧಿಕಾರಿಗಳು ಬಳಸಿ ಖಾಸಗಿ ಆಸ್ಪತ್ರೆ, ಕೋವಿಡ್ ಸೆಂಟರ್ಗಳನ್ನು ಸರ್ಕಾರದ ವಶಕ್ಕೆ ಪಡೆದು ಜನರಿಗೆ ಉಚಿತ ಚಿಕಿತ್ಸೆ ನೀಡಬೇಕೆಂದು ಆಗ್ರಹಿಸಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications