ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿಕೆಶಿ ಬಂಧನ; ಮೈಸೂರು- ಬೆಂಗಳೂರು ಮಾರ್ಗದಲ್ಲಿ ಪಯಣಿಸದಿರುವುದೇ ಒಳಿತು

|
Google Oneindia Kannada News

ಮೈಸೂರು, ಸೆಪ್ಟೆಂಬರ್ 4: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ಇಂದು ಬೆಂಗಳೂರು, ಮೈಸೂರು, ರಾಮನಗರ, ತುಮಕೂರು, ಮಂಡ್ಯ ಸೇರಿದಂತೆ ರಾಜ್ಯದ ಹಲವೆಡೆ ಪ್ರತಿಭಟನೆಗೆ ಕರೆ ನೀಡಿದ್ದು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಡಿಕೆಶಿ ಬೆಂಬಲಿಗರು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಡಿಕೆಶಿ ಬಂಧನ; ದ್ವೇಷದ ರಾಜಕಾರಣ ಎಂದು ಬೆಳಗಾವಿಯಲ್ಲಿ ಪ್ರತಿಭಟನೆಡಿಕೆಶಿ ಬಂಧನ; ದ್ವೇಷದ ರಾಜಕಾರಣ ಎಂದು ಬೆಳಗಾವಿಯಲ್ಲಿ ಪ್ರತಿಭಟನೆ

ಕನಕಪುರ, ರಾಮನಗರವೂ ಅಕ್ಷರಶಃ ಬಂದ್ ಆಗಿದೆ. ಬಸ್, ಬೈಕುಗಳಿಗೆ ಬೆಂಕಿ ಹಚ್ಚಿದ್ದು, ಈ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.

Protest is going on at Mysuru region due to D K S arrest

ರಾಮನಗರ, ಬೆಂ.ಗ್ರಾಮಾಂತರ, ಬೆಂಗಳೂರು ನಗರ, ದಕ್ಷಿಣ ವಲಯದ ಮೈಸೂರು, ಮಂಡ್ಯ, ಚಾಮರಾಜನಗರಕ್ಕೆ ಬಿಗಿ ಭದ್ರತೆ ಒದಗಿಸಿದ್ದು, ಇಬ್ಬರು ಐಜಿಪಿಗಳಿಗೆ ಸೂಚನೆ ನೀಡಿ ಡಿಜಿಪಿ ನೀಲಮಣಿ ರಾಜು ಬೆಂಗಳೂರು-ಮೈಸೂರು, ಕನಕಪುರ-ಬೆಂಗಳೂರು ಹೆದ್ದಾರಿಗಳಲ್ಲಿ ಬಂದೋಬಸ್ತ್ ಕೈಗೊಂಡಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಅಭಿಮಾನಿಗಳು ರಸ್ತೆಗಿಳಿದಿದ್ದಾರೆ.

Protest is going on at Mysuru region due to D K S arrest

ದಳವಾಯಿ ಕೋಡಿಹಳ್ಳಿಯಲ್ಲಿ ಗ್ರಾಮಸ್ಥರು ಕನಕಪುರ- ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ರಸ್ತೆ ತಡೆಯಿಂದ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಹಾಗಾಗಿ ಮೈಸೂರು ಕಡೆ ಪ್ರಯಾಣ ಬೆಳೆಸುವವವರು ಕೊಂಚ ಎಚ್ಚರದಿಂದಿದ್ದರೆ ಒಳಿತು.

English summary
Protest is going on at Mysuru region due to D K Shivkumar arrest. Peoples are planning to come mysuru region should change their thought.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X