ಕೊರೊನಾ ಆತಂಕದ ನಡುವೆ ಮಹಾಬಲೇಶ್ವರಸ್ವಾಮಿ ರಥೋತ್ಸವ: ಭಕ್ತರಿಗೆ ನಿರ್ಬಂಧ

ಮೈಸೂರು, ಏಪ್ರಿಲ್ 3: ಮಹಾಮಾರಿ ಕೊರೊನಾ ಆತಂಕದ‌ ಕರಿನೆರಳಿನ ನಡುವೆ ಚಾಮುಂಡಿ ಬೆಟ್ಟದ ಮಹಾಬಲೇಶ್ವರಸ್ವಾಮಿ ರಥೋತ್ಸವ ಶ್ರದ್ಧಾ ಭಕ್ತಿಯಿಂದ ನೆರವೇರಿತು.

ಮೈಸೂರು ‌ಜಿಲ್ಲೆಯಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಥೋತ್ಸವಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕಡಿಮೆ ಸಂಖ್ಯೆ ಭಕ್ತಾಧಿಗಳ ಸಮ್ಮುಖದಲ್ಲಿ ಮಹಾಬಲೇಶ್ವರಸ್ವಾಮಿ ರಥೋತ್ಸವ ಸರಳ ಹಾಗೂ ಸಾಂಪ್ರದಾಯಿಕವಾಗಿ ನಡೆಯಿತು.

ಕೋವಿಡ್-19 ಭೀತಿ ಹಿನ್ನಲೆ ಸರಳವಾಗಿ ನಡೆ ರಥೋತ್ಸವಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿದ್ದ ಹಿನ್ನೆಲೆಯಲ್ಲಿ ದೇವಾಲಯ ಒಳ ಆವರಣದಲ್ಲಿ ಎಲ್ಲಾ ಧಾರ್ಮಿಕ ಕಾರ್ಯಗಳು ನಡೆಯಿತು. ದೇವಸ್ಥಾನ ಅರ್ಚಕರು, ಸಿಬ್ಬಂದಿ ಸಮ್ಮುಖದಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಪೂಜಾ ಕೈಂಕರ್ಯಗಳು ನಡೆದವು.

Mysuru: Public Entry Restricted To Mahabaleshwar Rathotsava At Chamundi Hills

ಮಹಾಬಲೇಶ್ವರಸ್ವಾಮಿ ರಥೋತ್ಸವದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ತೆರಳಲು ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ ವಿಧಿಸಿದ್ದ ಪರಿಣಾಮ ಬೆಟ್ಟಕ್ಕೆ ತೆರಳುವ 5 ಕಡೆಗಳಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.

Mysuru: Public Entry Restricted To Mahabaleshwar Rathotsava At Chamundi Hills

ಮಾಸ್ಕ್, ಸಾಮಾಜಿಕ ಅಂತರ ಮಾಯ

ಕೊರೊನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಜಿಲ್ಲಾಡಳಿತ ಮಹಾಬಲೇಶ್ವರಸ್ವಾಮಿ ರಥೋತ್ಸವಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಿತ್ತು.‌ ಈ ನಡುವೆ ಬೆಟ್ಟಕ್ಕೆ ಕಡಿಮೆ ಸಂಖ್ಯೆಯಲ್ಲಿ ಭಕ್ತಾಧಿಗಳು ತೆರಳಿದ್ದರೂ ಮಾಸ್ಕ್ ‌ಧರಿಸದೆ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ಅಡ್ಡಾಡುತ್ತಿದ್ದದು ಕಂಡುಬಂದಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+