ಮೈಸೂರು: ತೆರಿಗೆ ಹಣ ಅಧಿಕಾರಿಗಳ ವೈಯಕ್ತಿಕ ಬ್ಯಾಂಕ್ ಖಾತೆಗೆ; ಪಂಚಾಯಿತಿ ಅಧಿಕಾರಿಗಳ ಕರ್ಮಕಾಂಡ
ಮೈಸೂರಿನ ಶ್ರೀರಾಂಪುರ ಪಟ್ಟಣ ಪಂಚಾಯಿತಿಯಲ್ಲಿ ನಾಲ್ಕಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ಸಿಬ್ಬಂದಿ ಸಾರ್ವಜನಿಕರ ತೆರಿಗೆ ಹಣವನ್ನು ವೈಯಕ್ತಿಕ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಪಂಚಾಯಿತಿಯ ಡೇಟಾ ಎಂಟ್ರಿ ಆಪರೇಟರ್ ನಮ್ರತಾ ಅವರು ತೆರಿಗೆ ಹಣವನ್ನು ಅನಧಿಕೃತವಾಗಿ ಸಂಗ್ರಹಿಸಿರುವುದು ಶ್ರೀರಾಂಪುರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸುರೇಶ್ ಅವರು ನೀಡಿದ ವರದಿಯಲ್ಲಿ ದಾಖಲಾಗಿದೆ. 2020ರಲ್ಲಿ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಿದ ನಂತರ ನಡೆದ ಪ್ರಕರಣ ಇದಾಗಿದೆ.

ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಬನ್ನೂರು ಕಂದಾಯ ಅಧಿಕಾರಿ ಬಸವರಾಜು ಮತ್ತು ಶ್ರೀರಾಂಪುರ ಪಟ್ಟಣ ಪಂಚಾಯಿತಿ ಪ್ರಥಮ ದರ್ಜೆ ಸಹಾಯಕ ರಘುನಂದನ್ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿದೆ. ಪರಿಶೀಲನೆ ವೇಳೆ ಪ್ರಕರಣದಲ್ಲಿ ಸುಮಾರು 1.25 ಲಕ್ಷ ರೂ.ಗಳನ್ನು ಈ ರೀತಿ ಸಂಗ್ರಹಿಸಿರುವುದು ಬೆಳಕಿಗೆ ಬಂದಿದೆ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶ (ಡಿಯುಡಿಎಲ್)ದ ಯೋಜನಾ ನಿರ್ದೇಶಕಿ ಬಿ.ಶುಭಾ ತಿಳಿಸಿದರು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಬಿ.ಶುಭಾ ಅವರು 15 ದಿನಗಳ ಹಿಂದೆ ನಡೆಸಿದ ವಾಡಿಕೆ ತಪಾಸಣೆಯಲ್ಲಿ ಅಕ್ರಮ ಬೆಳಕಿಗೆ ಬಂದಿದೆ. ಖಾತಾ ನೀಡಿಕೆ, ವರ್ಗಾವಣೆ ಹಾಗೂ ಇನ್ನಿತರ ಮೂಲಗಳಿಂದ ಸಂದಾಯವಾದ ಹಣವನ್ನು ನೌಕರರ ಖಾತೆಗೆ ವರ್ಗಾಯಿಸಲಾಗಿದೆ. ಡಿಯುಡಿಸಿ ಯೋಜನಾ ನಿರ್ದೇಶಕರು ನಗದು ಲೆಡ್ಜರ್ಗಳು ಮತ್ತು ರಸೀದಿ ಅನ್ನು ಪರಿಶೀಲಿಸಿ ಬ್ಯಾಂಕ್ನಲ್ಲಿ ಠೇವಣಿ ವಾಡಿದ ಹಣಕ್ಕೆ ತಾಳೆ ಮಾಡಿ ವರದಿ ಸಲ್ಲಿಸುವಂತೆ ಪಂಚಾಯಿತಿ ಮುಖ್ಯಾಧಿಕಾರಿ ಸುರೇಶ್ ಅವರಿಗೆ ಸೂಚಿಸಿದ್ದಾರೆ.
ನೋಟಿಸ್ ಜಾರಿ
ಘಟನೆಗೆ ಪರೋಕ್ಷವಾಗಿ ಕಾರಣಕರ್ತರಾಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಿಲ್ ಕಲೆಕ್ಟರ್ ಕುಮಾರಸ್ವಾಮಿ, ಕಂದಾಯ ಅಧಿಕಾರಿಗಳಾದ ಉದಯ್ ಭಾಸ್ಕರ್, ಶಕೀಲ್ ಅಹಮ್ಮದ್ ಹಾಗೂ ಪರಿಶೀಲಿಸಬೇಕಾದ ಜವಾಬ್ದಾರಿ ನಿರ್ವಹಣೆ ಮಾಡದ ಕಾರಣಕ್ಕೆ ಈ ಹಿಂದಿನ ಮುಖ್ಯಾಧಿಕಾರಿ ಶ್ರೀಧರ್ ಅವರಿಗೂ ಮುಂದಿನ ಏಳು ದಿನದೊಳಗೆ ಕಾರಣ ನೀಡುವಂತೆ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಯೋಜನಾ ನಿರ್ದೇಶಕಿ ಬಿ.ಶುಭಾ ತಿಳಿಸಿದ್ದಾರೆ.
ಶ್ರೀರಾಂಪುರ ಪಟ್ಟಣ ಪಂಚಾಯಿತಿಯ ತೆರಿಗೆ ಹಣದ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ವಿರುದ್ಧ ಎ್ಐಆರ್ ದಾಖಲಿಸಲು ಹಾಗೂ ಪರೋಕ್ಷವಾಗಿ ಕಾರಣರಾದ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಡಿಸಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.
-
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications