ಮೈಸೂರಲ್ಲಿ ಮಂಗಳಮುಖಿಯರ ಶೌಚಾಲಯ, ದೇಶದಲ್ಲೇ ಪ್ರಥಮ?
ಮೈಸೂರು, ನವೆಂಬರ್ 23 : ಪ್ರತ್ಯೇಕ ಶೌಚಾಲಯವಿಲ್ಲದೆ ಕಿರಿಕಿರಿ, ಮುಜುಗರ ಅನುಭವಿಸುತ್ತಿದ್ದ ಮಂಗಳಮುಖಿಯರಿಗೆ ಮೈಸೂರಿನಲ್ಲಿ ಪರಿಹಾರ ಸಿಕ್ಕಿದೆ. ಅವರಿಗಾಗಿಯೇ ಪ್ರತ್ಯೇಕವಾದ ಮತ್ತು ಸುಸಜ್ಜಿತವಾದ ಶೌಚಾಲಯವನ್ನು ಮೈಸೂರಿನಲ್ಲಿ ಆರಂಭಿಸಲಾಗಿದೆ. ಇದು ಕರ್ನಾಟಕದಲ್ಲಿ ಮಾತ್ರವಲ್ಲ ದೇಶದಲ್ಲಿಯೇ ಪ್ರಥಮ!
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಮಂಗಳಮುಖಿಯರ ಸಂಖ್ಯೆ ಹೆಚ್ಚಾಗುತ್ತಿದೆ. ಎಲ್ಲೆಂದರಲ್ಲಿ ಅಡ್ಡಾಡುವ ಇವರು ಶೌಚದ ವಿಚಾರಕ್ಕೆ ಬಂದಾಗ ಮಾತ್ರ ಯಾತನೆ ಅನುಭವಿಸುವಂತಾಗಿತ್ತು. ನಗರದಲ್ಲಿ ಹಲವು ಶೌಚಾಲಯಗಳಿದ್ದರೂ ಅತ್ತ ಪುರುಷರ, ಇತ್ತ ಮಹಿಳೆಯರ ಶೌಚಾಲಯಕ್ಕೆ ಹೋಗಲಾಗದೆ ತಳಮಳ, ನೋವು ಅನುಭವಿಸುತ್ತಿದ್ದರು.
ಮಹಿಳೆಯರ ಶೌಚಾಲಯಕ್ಕೆ ಹೋದರೆ ಮುಜುಗರಗೊಳ್ಳುತ್ತಿದ್ದ ಮಹಿಳೆಯರು ಬೈದು ಹೊರಗೆ ಅಟ್ಟುತ್ತಿದ್ದರು. ಗಂಡಸರ ಶೌಚಾಲಯದೊಳಗೆ ಹೋದರೆ ಮಂಗಳಮುಖಿಯರೇ ಮಾನಸಿಕ ಹಿಂಸೆ ಅನುಭವಿಸಬೇಕಾಗಿತ್ತು. ಶೌಚಾಲಯದ ನಿರ್ವಹಣೆ ಹೊತ್ತವರು ತೃತೀಯ ಲಿಂಗಿಗಳು ಶೌಚಾಲಯದತ್ತ ಸುಳಿಯದಂತೆ ನೋಡಿಕೊಳ್ಳುತ್ತಿದ್ದರು. ಇದೆಲ್ಲದರ ತೊಂದರೆಯಿಂದಾಗಿ ಮಂಗಳಮುಖಿಯರು ನಿರ್ಜನ ಪ್ರದೇಶ ಹುಡುಕಿಕೊಂಡು ಹೋಗಿ ಅಲ್ಲಿ ದೇಹಬಾಧೆಯನ್ನು ನೀಗಿಸಿಕೊಳ್ಳುತ್ತಿದ್ದರು. ['ನಾವು ಮನುಷ್ಯರು, ನಮ್ಮನ್ನು ಘನತೆಯಿಂದ ಬದುಕಲು ಬಿಡಿ']

ಇಡೀ ದೇಶದಾದ್ಯಂತ ಸ್ವಚ್ಛತಾ ಆಂದೋಲನ ಹಮ್ಮಿಕೊಂಡು ಜನರಿಗೆ ಶೌಚಾಲಯದ ಅರಿವು ಮೂಡಿಸುತ್ತಿದ್ದರೆ, ಇತ್ತ ತೃತೀಯ ಲಿಂಗಿಗಳಿಗೆ ಎಲ್ಲೂ ಪ್ರತ್ಯೇಕ ಶೌಚಾಲಯದ ವ್ಯವಸ್ಥೆ ಇಲ್ಲದಿರುವ ಬಗ್ಗೆ ಮತ್ತು ಆ ವಿಚಾರದಲ್ಲಿ ಅನುಭವಿಸುತ್ತಿರುವ ತೊಂದರೆ ಬಗ್ಗೆ ಮಂಗಳಮುಖಿಯರು ಜಿಪಂ ಸಭೆಯಲ್ಲಿ ಪ್ರಸ್ತಾಪಿಸಿದ್ದರು. ಶೌಚಾಲಯದ ವ್ಯವಸ್ಥೆಯನ್ನು ಮಾಡಿಕೊಡುವಂತೆ ಜಿಪಂ ಅಧ್ಯಕ್ಷರಿಗೆ ಮನವಿ ಸಲ್ಲಿಸಿದ್ದರು.
ಇದಕ್ಕೆ ಸ್ಪಂದಿಸಿದ ಜಿಪಂ ಅಧ್ಯಕ್ಷೆ ಪುಷ್ಪಾ ಅಮರ್ನಾಥ್ ಅವರು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಸಾರ್ವಜನಿಕ ಸ್ಥಳವಾದ ಬಸ್ ಮತ್ತು ರೈಲ್ವೆ ನಿಲ್ದಾಣದಲ್ಲಿ ಶೌಚಾಲಯ ನಿರ್ಮಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ ಮೈಸೂರು ನಗರ ಬಸ್ ನಿಲ್ದಾಣದಲ್ಲಿ ಶೌಚಾಲಯ ನಿರ್ಮಿಸುವ ಕಾರ್ಯಕ್ಕೆ ಮುಂದಾದ ಕೆಎಸ್ಆರ್ಟಿಸಿ ಅಧಿಕಾರಿಗಳು ಅದನ್ನು ಪೂರ್ಣಗೊಳಿಸಿ ಮಂಗಳಮುಖಿಯರ ಉಪಯೋಗಕ್ಕೆ ನೀಡಿದ್ದಾರೆ.
ಈ ಸೌಲಭ್ಯದಿಂದ ಮಂಗಳಮುಖಿಯರು (ಲೈಂಗಿಕ ಅಲ್ಪಸಂಖ್ಯಾತರು) ಖುಷಿಯಾಗಿದ್ದಾರೆ. ಗ್ರಾಮಾಂತರ ಬಸ್ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣದಲ್ಲಿಯೂ ನಿರ್ಮಿಸಿದರೆ ಇನ್ನಷ್ಟು ಅನುಕೂಲವಾಗುತ್ತದೆ ಎಂಬ ಅನಿಸಿಕೆಯನ್ನು ವ್ಯಕ್ತಪಡಿಸಿದ್ದಾರೆ. [ಪಬ್ಲಿಕ್ ಟಾಯ್ಲೆಟ್ ನಿರ್ಮಾಣದಲ್ಲಿ ಕರ್ನಾಟಕ ನಂ.5]
ಈಗಾಗಲೇ ಮೈಸೂರಿನಲ್ಲಿ ಸುಮಾರು 3 ಸಾವಿರ ಮಂಗಳಮುಖಿಯರಿದ್ದು ಅವರ ಪೈಕಿ 1250 ಮಂದಿ ಮೈಸೂರು ನಗರದಲ್ಲೇ ವಾಸ ಮಾಡುತ್ತಿದ್ದಾರೆ. ಹೀಗಾಗಿ ಅವರಿಗೆ ಪ್ರತ್ಯೇಕ ಶೌಚಾಲಯ ನಿರ್ಮಿಸಿರುವುದು ಪ್ರಶಂಸನೀಯ. ಅದು ಏನೇ ಇರಲಿ ಇದುವರೆಗೆ ಮಂಗಳಮುಖಿಯರಿಗೆ ಪ್ರತ್ಯೇಕ ಶೌಚಾಲಯವಿಲ್ಲ ಎಂಬ ಕೊರಗು ಮೈಸೂರಿನಲ್ಲಿ ನೀಗಿದಂತಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications