ಮೈಸೂರು ಅರಮನೆ ಮುಂದೆ ರಂಗೋಲಿಯಲ್ಲಿ ಅರಳಿದ ಅಪ್ಪು, ಪ್ರತಿಕ್ರಿಯೆಗಳು ಹೇಗಿವೆ ಗೊತ್ತಾ?
ಈ ಹಸರು ಚಿಕ್ಕ ಮಗುವಿನಿಂದ ಹಿಡಿದು ಅಜ್ಜಂದಿರವರ ಮನಸ್ಸಲ್ಲಿ ಅಚ್ಚಳಿಯದೇ ಅಚ್ಚಹಸಿರಿನ ಗಿಡ, ಮರದಂತೆ ನೆಲೆಸಿಬಿಟ್ಟಿದ್ದಾರೆ. ಈ ಮೂಲಕ ಅವರು ಅಜರಾಮರಾಗಿಬಿಟ್ಟಿದ್ದಾರೆ. ಆ ಅದ್ಭುತ ಹೆಸರೇ ಅಪ್ಪು (ಪುನೀತ್ ರಾಜ್ಕುಮಾರ್). ಇನ್ನು ಇಂದು (ಮಾರ್ಚ್ 17) ಪುನೀತ್ ರಾಜ್ಕುಮಾರ್ ಅವರ 49ನೇ ವರ್ಷದ ಹುಟ್ಟುಹಬ್ಬವನ್ನು ರಾಜ್ಯದೆಲ್ಲೆಡೆ ಅದ್ಧೂರಿಯಾಗಿ ಆಚರಣೆ ಮಾಡುತ್ತಿದ್ದಾರೆ. ಹಾಗೆಯೇ ಇಲ್ಲೊಬ್ಬ ಅಭಿಮಾನಿಯೊಬ್ಬರು ಅವರ ಚಿತ್ರ ಬಿಡಿಸುವ ಮೂಲಕ ವಿಶೇಷವಾಗಿ ಶುಭಕೋರಿದ್ದಾರೆ.
ಮೈಸೂರು ಅರಮನೆ ಮುಂದೆ ರಂಗೋಲಿಯಲ್ಲಿ ಕರ್ನಾಟಕ ರತ್ನ ಪುನೀತ್ ರಾಜ್ಕುಮಾರ್ ಅವರ ಚಿತ್ರವನ್ನು ಅಭಿಮಾನಿಯೊಬ್ಬರು ಅದ್ಭುತವಾಗಿ ಬಿಡಿಸಿದ್ದು, ಇದರ ಮೇಲೆ ಪಕ್ಷಿಗಳು ಹಾರಾಡುವ ಅದ್ಭುತ ದೃಶ್ಯವಂತೂ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಅಲ್ಲದೆ ಈ ವಿಡಿಯೋಗೆ "ಬೊಂಬೆ ಹೇಳುತೈತೆ ಮತ್ತೆ ಹೇಳುತೈತೆ ನೀನೇ ರಾಜಕುಮಾರ" ಎನ್ನುವ ಹಾಡನ್ನು ಹಾಕಿದ್ದು, ಇದಕ್ಕೆ ಪ್ರತಿಕ್ರಿಯೆಗಳ ಸರಮಾಲೆಯೇ ಹರಿದುಬರುತ್ತಿದೆ.

ಈ ದೃಶ್ಯವನ್ನು ಗಮನಿಸಿದರೆ ರಾಜಕುಮಾರ್ ಸಿನಿಮಾದಲ್ಲಿ ಪುನೀತ್ ಹೆಗಲ ಮೇಲೆ ಪಾರಿವಾಳ ಹಾರಿಬಂದು ಕುಳಿತಂತಿದೆ. ಈ ಬಗ್ಗೆ ಮಾತನಾಡಿದ ಚಿತ್ರ ಬಿಡಿಸಿದ ಕಲೆಗಾರ ಮಾತನಾಡಿದ್ದು, ನನ್ನ ಹೆಸರು ಕೂಡ ಪುನೀತ್ ಅಂತಾ, ಇವತ್ತು ಪುನೀತ್ ರಾಜ್ಕುಮಾರ್ ಅವರ ಹುಟ್ಟುಹಬ್ಬ ಹಿನ್ನೆಲೆ ನಾನು, ನಮ್ಮ ಮನೆಯವರು ಈ ಚಿತ್ರವನ್ನು ಅಪ್ಪು ಅವರಿಗಾಗಿ ಬಿಡಿಸಿದ್ದೇವೆ ಎಂದು ಹೇಳಿದ್ದಾರೆ.
ಪವರ್ ಸ್ಟಾರ್ ದಿವಂಗತ ಪುನೀತ್ ರಾಜ್ ಕುಮಾರ್ ಅವರ ಜನ್ಮದಿನಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶುಭಕೋರಿದ್ದಾರೆ. ಈ ಸಂಬಂಧ ತಮ್ಮ ಫೇಸ್ಬುಕ್ ಖಾತೆಯಲ್ಲಿ ಅಪ್ಪು ಫೋಟೋದ ಜೊತೆಗೆ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಜನ್ಮದಿನದಂದು ಅವರಿಗೆ ವಿನಮ್ರ ನಮನಗಳು. ಒಬ್ಬ ಅದ್ಭುತ ಕಲಾವಿದ, ಸಿನಿಮಾದಲ್ಲಿನ ಅವರ ಕೆಲಸ ಮತ್ತು ಜನರ ಕಲ್ಯಾಣಕ್ಕಾಗಿ ಅವರು ನೀಡಿರುವ ಕೊಡುಗೆ ಇಂದಿಗೂ ಅನೇಕರಿಗೆ ಸ್ಫೂರ್ತಿ ನೀಡುತ್ತದೆ ಎಂದು ಬರೆದುಕೊಂಡಿದ್ದಾರೆ.
ಬರೀ ರಾಹುಲ್ ಗಾಂಧಿ ಅಷ್ಟೇ ಅಲ್ಲದೆ ರಾಜ್ಯ, ದೇಶ ವಿದೇಶಗಳಿಂದಲೂ ಅಪ್ಪು ಹುಟ್ಟುಹಬ್ಬಕ್ಕೆ ವಿಶೇಷವಾಗಿ ಶುಭಕೋರಿದ್ದಾರೆ. ಅಪ್ಪು ಅವರಿಗೆ ರಾಜ್ಯ ಅಷ್ಟೇ ಅಲ್ಲದೆ, ದೇಶ, ವಿದೇಶಗಳಲ್ಲೂ ಬಹುದೊಡ್ಡ ಅಭಿಮಾನಿ ಬಳಗ ಇದೆ. ಇನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಪುಗೆ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಅಭಿಮಾನಿಗಳಿಂದ ಸೆಲೆಬ್ರಿಟಿಗಳವರೆಗೂ ಎಲ್ಲರೂ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಅಪ್ಪು ಫೋಟೋ ಹಾಕಿ ವಿಶೇಷವಾಗಿ ಸಂಭ್ರಮಿಸುತ್ತಿದ್ದಾರೆ. ಇನ್ನೂ ಕೆಲವರು ಅಪ್ಪು ಸಮಾಧಿ ಬಳಿ ಹೋಗಿ ಪೂಜೆ ಸಲ್ಲಿಸಿದ್ದಾರೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications