ಹುಣಸೂರಲ್ಲಿ ಶುದ್ಧ ಕುಡಿಯವ ನೀರಿನ ಘಟಕ ತೆರೆದಿದ್ದರೂ ಬಳಕೆಯಾಗುತ್ತಿಲ್ಲ, ಏನಿದು ಅವಸ್ಥೆ?
ಮೈಸೂರು, ಅಕ್ಟೋಬರ್.26: ಹುಣಸೂರು ಪಟ್ಟಣದ ಮೂಲಕವೇ ಲಕ್ಷ್ಮಣತೀರ್ಥ ನದಿ ಹರಿದು ಹೋಗುತ್ತಿದ್ದರೂ ಕುಡಿಯಲು ಶುದ್ಧ ನೀರನ್ನು ಒದಗಿಸುವಲ್ಲಿ ಇಲ್ಲಿನ ಜನಪ್ರತಿನಿಧಿಗಳು ಗಮನಹರಿಸದಿರುವುದು ಎದ್ದು ಕಾಣುತ್ತಿದ್ದು ಪರಿಣಾಮ ಸಾರ್ವಜನಿಕರು ಶುದ್ಧ ನೀರಿಗಾಗಿ ಪರದಾಡುವಂತಾಗಿದೆ.
ಪಟ್ಟಣದ ಮಧ್ಯೆ ಲಕ್ಷ್ಮಣತೀರ್ಥ ನದಿ ಹರಿಯುತ್ತಿದ್ದರೂ ಅದನ್ನು ಸಮರ್ಪಕ ಬಳಕೆ ಮಾಡಿಕೊಳ್ಳುವಲ್ಲಿ ವಿಫಲರಾಗಿರುವುದು ಎದ್ದು ಕಾಣುತ್ತಿದೆ. ಜತೆಗೆ ಪಟ್ಟಣದ ತ್ಯಾಜ್ಯವೆಲ್ಲವೂ ನೇರವಾಗಿ ಈ ನದಿಗೆ ಸೇರುತ್ತಿದ್ದು ಪರಿಣಾಮ ನದಿ ಕಲುಷಿತಗೊಂಡು ಸಾಂಕ್ರಾಮಿಕ ರೋಗ ಹರಡುವ ಕೇಂದ್ರವಾಗಿ ಗೋಚರಿಸುತ್ತಿದೆ.
ಮಳೆಗಾಲದಲ್ಲಿ ಸ್ವಚ್ಛವಾಗುವ ನದಿ ಬೇಸಿಗೆ ಬರುತ್ತಿದ್ದಂತೆಯೇ ಜೊಂಡು ಹುಲ್ಲು, ಇತರೆ ಜಲಸಸ್ಯಗಳು ಬೆಳೆದು ನೀರು ಹರಿಯದೆ ನಿಂತು ಗಬ್ಬು ನಾರುತ್ತಿದೆ. ಈ ನದಿಯನ್ನು ಸ್ವಚ್ಛಗೊಳಿಸುವ ಮತ್ತು ತ್ಯಾಜ್ಯ ನೀರು ನದಿಗೆ ಹರಿಯುವುದನ್ನು ತಡೆಯುವ ಕೆಲಸವನ್ನ ಇದುವರೆಗೆ ಯಾರೂ ಮಾಡಿಲ್ಲ ಎಂಬುದೇ ಬೇಸರದ ಸಂಗತಿಯಾಗಿದೆ.
ಮಾಜಿ ಶಾಸಕ ಹೆಚ್.ಪಿ.ಮಂಜುನಾಥ್ರ ಬೇಜವಬ್ದಾರಿ ಹಾಗೂ ಹಾಲಿ ಶಾಸಕ ಎಚ್.ವಿಶ್ವನಾಥ್ರ ನಿರ್ಲಕ್ಷ್ಯದಿಂದ ಪಟ್ಟಣದ ಜನತೆಗೆ ಕುಡಿಯುವ ನೀರು ಸಿಗುತ್ತಿಲ್ಲ ಎಂದು ಜನ ದೂರುತ್ತಿದ್ದಾರೆ. ಜತೆಗೆ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯ 60 ಲಕ್ಷ ರೂ. ಹಣ ನೀರು ಪಾಲಾಗಿರುವ ಬಗ್ಗೆಯೂ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬಳಕೆಯಾಗುತ್ತಿಲ್ಲ ನೀರು
ಕೈಗೆ ಎಟುಕುವಂತೆ ನದಿಯಿದ್ದರೂ ಅದನ್ನು ಬಳಸಿಕೊಳ್ಳುವಂತಿಲ್ಲ. ಹೀಗಾಗಿ ಜನ ಕೊಳವೆಬಾವಿ ಇನ್ನಿತರ ನೀರನ್ನು ಬಳಸಿಕೊಳ್ಳಬೇಕಾಗಿದೆ. ಶುದ್ಧ ಕುಡಿಯವ ನೀರಿನ ಘಟಕ ತೆರೆದಿದ್ದರೂ ಅದು ಬಳಕೆಯಾಗುತ್ತಿಲ್ಲ. ಕಾಯಿನ್ ಹಾಕಿ ನೀರುಪಡೆಯುವ ಯೋಗ ಇಲ್ಲಿನವರಿಗಿಲ್ಲದಂತಾಗಿದೆ.

ನಾಮಕಾವಸ್ಥೆಗೆ ಚಾಲನೆ
ಕಳೆದೊಂದು ವರ್ಷದ ಹಿಂದೆ ಶಾಸಕ ಹೆಚ್.ಪಿ.ಮಂಜುನಾಥ್ ಅವರ ಅವಧಿಯಲ್ಲಿ ಪಂಚಾಯತ್ ರಾಜ್ ಇಲಾಖೆ ವತಿಯಿಂದ ನಗರಸಭೆ ವ್ಯಾಪ್ತಿಯಲ್ಲಿ ಸುಮಾರು 60 ಲಕ್ಷ ರೂ. ವೆಚ್ಚದಲ್ಲಿ ನಗರದ ಎಚ್.ಡಿ.ಕೋಟೆ ಸರ್ಕಲ್, ಮಾರುತಿ ಪೆಟ್ರೋಲ್ ಬಂಕ್ ಬಳಿ, ಚಿಕ್ಕ ಹುಣಸೂರು ಬಳಿ, ಸದಾಶಿವನಕೊಪ್ಪಲು ಬಳಿ, ಕಲ್ಕುಣಿಕೆ ಸರ್ಕಲ್ ಹಾಗೂ ರಂಗನಾಥ ಬಡಾವಣೆ ಸೇರಿದಂತೆ ಆರು ಕಡೆಗಳಲ್ಲಿ ಶುದ್ಧ ಕುಡಿಯುವ ನೀರು ಘಟಕಗಳನ್ನು ಸ್ಥಾಪಿಸಲಾಯಿತಾದರೂ ಚಾಲನೆ ಸಿಗದೆ ನೆನೆಗುದಿಗೆ ಬಿದ್ದಿತ್ತು.
ಈ ವಿಚಾರವಾಗಿ ಆನೇಕ ಸಂಘಟನೆಗಳು ಅಂದಿನ ಶಾಸಕರ ವಿರುದ್ಧ ಹಾಗೂ ತಾಲೂಕು ಹಾಗೂ ನಗರಸಭೆ ಆಡಳಿತ ವಿರುದ್ಧ ಪ್ರತಿಭಟನೆಗಳನ್ನು ಹಮ್ಮಿಕೊಂಡ ಪರಿಣಾಮ ನಾಮಕಾವಸ್ಥೆಗೆ ಚಾಲನೆ ನೀಡಿದರು.

ರೋಗ ಹರಡುವ ಭಯ
ಆದರೆ ನಂತರದ ದಿನಗಳಲ್ಲಿ ಈ ಶುದ್ಧ ನೀರಿನ ಘಟಕ ದುರಸ್ತಿಗೀಡಾಗಿದ್ದು, ಅದನ್ನು ದುರಸ್ತಿಗೊಳಿಸುವ ಕೆಲಸವನ್ನು ಯಾರೂ ಮಾಡದ ಕಾರಣದಿಂದಾಗಿ ಸದ್ಯ ಶುದ್ಧಕಡಿಯುವ ನೀರು ಜನಕ್ಕೆ ದೊರಕದಂತಾಗಿದೆ. ರಾಜ್ಯದಲ್ಲಿ ಈಗಾಗಲೇ ಹಲವು ಕಡೆಗಳಲ್ಲಿ ಸ್ಥಾಪಿಸಿರುವ ಕುಡಿನೀರು ಘಟಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ.
ಆದರೆ ಇಲ್ಲಿರುವ ನೀರಿನ ಘಟಕಗಳನ್ನು ದುರಸ್ತಿ ಮಾಡಲು ಸಂಬಂಧಿಸಿದವರು ಮುಂದಾಗದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ಲಕ್ಷ್ಮಣತೀರ್ಥ ನದಿ ಸಂಪೂರ್ಣ ಕಲುಷಿತಗೊಂಡಿರುವ ಕಾರಣ ಸಾಂಕ್ರಾಮಿಕ ರೋಗ ಹರಡುವ ಭಯವೂ ಇದೆ.

ಭಾರೀ ಸಮಸ್ಯೆ
ಬಹಳ ಗ್ರಾಮಗಳ ಜನ ಅನಿವಾರ್ಯವಾಗಿ ಈ ನದಿ ನೀರನ್ನು ಬಳಸುತ್ತಿದ್ದು, ಅವರು ಕೂಡ ರೋಗಕ್ಕೀಡಾಗುವ ಭಯದಿಂದ ದಿನ ಕಳೆಯುವಂತಾಗಿದೆ. ನದಿ ಸ್ವಚ್ಛಗೊಳಿಸುವ ಕಾರ್ಯವನ್ನು ಸಂಘಟನೆಗಳಾಗಲೀ, ಸರ್ಕಾರವಾಗಲಿ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಭಾರೀ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ ಎನ್ನುವುದರಲ್ಲಿ ಎರಡು ಮಾತಿಲ್ಲ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications