ಸಂಘ ಪರಿವಾರದ ಬಿಜೆಪಿ ಸರ್ಕಾರ ಗುಜರಿಗೆ ಹಾಕಿ: ದೇವನೂರು ಮಹದೇವ
ಮೈಸೂರು, ಏಪ್ರಿಲ್ 25: ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ ಕಿಡಿಕಾಡಿರುವ ಖ್ಯಾತ ಸಾಹಿತಿ ದೇವನೂರು ಮಹದೇವ ಅವರು ಸಂಘ ಪರಿವಾರದ ಈ ಸರ್ಕಾರವನ್ನು ಗುಜರಿಗೆ ಹಾಕಬೇಕು. ಮುಂದಿನ ಚುನಾವಣೆಯಲ್ಲಿ ಯಾವ ಪಕ್ಷ ಗೆಲ್ಲುತ್ತದೆ ಎನ್ನುವುದು ಮುಖ್ಯವಲ್ಲ. ಮೊದಲು ಈ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಹೇಳಿದರು.
ಎದ್ದೇಳು ಕರ್ನಾಟಕ ಸಂಘದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾಹಿತಿ ದೇವನೂರ ಮಹಾದೇವ, ಮತದಾರರು ಹೆಚ್ಚು ಜಾಗೃತರಾಗಿದ್ದಾರೆ. ಇದುವರೆಗೆ ಇಷ್ಟು ಜಾಗೃತರಾಗಿರಲಿಲ್ಲ. ಡಬಲ್ ಎಂಜಿನ್ ಸರ್ಕಾರ ಅಂತಾ ಕೇಳಿ ಕೇಳಿ ಕಿವಿ ತೂತು ಆಗಿದೆ. ಡಬಲ್ ಎಂಜಿನ್ ಸರ್ಕಾರ ಅಂತಾ ಹೇಳಿ ಅಭಿವೃದ್ಧಿಯ ಬುಡ ಅಲ್ಲಾಡಿಸುತ್ತಿದ್ದಾರೆ ಎಂದು ಗುಡುಗಿದರು.

ಬಿಜೆಪಿ ಬಾಯಿ ಬಿಟ್ರೆ ಕಾಂಗ್ರೆಸ್ ಏನ್ ಮಾಡಿತು ಎಂದು ಕೇಳುತ್ತಾರೆ. ಆದರೆ ಸಾರ್ವಜನಿಕ ಆಸ್ತಿಗಳನ್ನು ಕಾಂಗ್ರೆಸ್ ರಕ್ಷಣೆ ಮಾಡಿದೆ. ಡಬಲ್ ಎಂಜಿನ್ನ ಒಂದು ಎಂಜಿನ್ನಲ್ಲಿ ಧರ್ಮದ ದ್ವೇಷ, ಇನ್ನೊಂದು ಎಂಜಿನ್ನಲ್ಲಿ 40% ಕಮಿಷನ್ ಸೌಂಡ್ ಮಾಡ್ತಿದೆ ಅಷ್ಟೆ. ಹೀಗಾಗಿ ಬಿಜೆಪಿ ಸರ್ಕಾರವನ್ನು ಗುಜರಿಗೆ ಹಾಕಬೇಕಿದೆ ಎಂದು ಹೇಳಿದರು.
ವರುಣಾದಲ್ಲಿ ಪ್ರಚಾರದ ವೇಳೆ ಸಂಸದ ಪ್ರತಾಪ್ ಸಿಂಹ ಅವರನ್ನು ಜನ ತರಾಟೆಗೆ ತೆಗೆದುಕೊಂಡ ಬಗ್ಗೆ ಮಾತನಾಡಿ, ಪ್ರತಾಪ್ ಸಿಂಹಗೆ ಮೊನ್ನೆ ವರುಣಾದಲ್ಲಿ ಜನ ಬೆವರಿಳಿಸಿದರು. ಹಿಗ್ಗಾಮುಗ್ಗಾ ಜಾಡಿಸಿದರು. ಭಾರತ್ ಜೋಡೊ ಯಾತ್ರೆಯ ಬಳಿಕ ಕಾಂಗ್ರೆಸ್ ಚೇತರಿಕೆ ಕಾಣುತ್ತಿದೆ. ಕಾಂಗ್ರೆಸ್ ಬಲವಾಗಿ ಇಲ್ಲದ ಕಡೆ ಜೆಡಿಎಸ್ನ್ನು ಗೆಲ್ಲಿಸೋಣ. ಬಿಜೆಪಿಯನ್ನು ಸೋಲಿಸೋಣ ಎಂದರು.

ಹಿರಿಯ ಸಾಹಿತಿ ರಹಮತ್ ತರೀಕೆರೆ ಮಾತನಾಡಿ, ಕರ್ನಾಟಕ ಕಳೆದ ನಾಲ್ಕು ವರ್ಷಗಳಿಂದ ಮತೀಯ ರಾಷ್ಟೀಯವಾದಿ ಪಕ್ಷಗಳಿಂದ ಭಗ್ನವಾಗಿದೆ. ಕನ್ನಡಿಗರು ಕಷ್ಟಪಟ್ಟು ಕಟ್ಟಿದ ಬ್ಯಾಂಕ್ಗಳು ಲೂಟಿಯಾಗಿವೆ. ಅಮುಲ್ ವಿಚಾರದಲ್ಲಿಯೂ ಹಿಂದಿ ಹೇರಿಕೆ ಶುರುವಾಗಿದೆ. ತಮಿಳುನಾಡು ಈ ವಿಚಾರದಲ್ಲಿ ಪ್ರತಿಭಟನೆ ಮಾಡುತ್ತದೆ. ಆದರೆ ಕರ್ನಾಟಕದಲ್ಲಿ ಇದರ ವಿರುದ್ಧ ಸಿಡಿದೇಳಬೇಕು ಎಂದು ಹೇಳಿದರು.
ರೈತ ಹೋರಾಟಗಾರ ವೀರಸಂಗಯ್ಯ ಮಾತನಾಡಿ, ರೈತ ವಿರೋಧಿ ಪಕ್ಷ ಬಿಜೆಪಿ. ಹೀಗಾಗು ಈ ಬಾರಿ ಬಿಜೆಪಿ ಸರ್ಕಾರವನ್ನು ಸೋಲಿಸಬೇಕು ಎಂದು ಕರೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ನಾಯಕ ಯೋಗೇಂದ್ರ ಯಾದವ್ ಭಾಗವಹಿಸಿದ್ದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?











Click it and Unblock the Notifications