ಮೈಸೂರಿನಿಂದ ನೀಲಗಿರಿ ಶ್ರೇಣಿ ತನಕ ರೈಡ್-ಎ-ಸೈಕಲ್ ಟೂರ್
ಮೈಸೂರು, ಡಿಸೆಂಬರ್ 5, 2019: ಭಾರತದ ಅತಿದೊಡ್ಡ ಹಾಗೂ ಅತ್ಯಂತ ಜನಪ್ರಿಯ ಬೈಕ್ ಟೂರ್ ಹಾಗೂ ರೈಡ್ ಎ ಸೈಕಲ್ ಫೌಂಡೇಷನ್(ಆರ್ಎಸಿ-ಎಫ್)ನ ಪ್ರಮುಖ ಕಾರ್ಯಕ್ರಮವಾಗಿರುವ ಟೂರ್ ಆಫ್ ನೀಲಗಿರೀಸ್ (ಟಿಎಫ್ಎನ್) 2019ರ ಆವೃತ್ತಿ ಡಿಸೆಂಬರ್ 8ರಿಂದ 15ರವರೆಗೆ ನಡೆಯಲಿದೆ.
ಟಿಎಫ್ಎನ್ 2019ರ 12ನೇ ಆವೃತ್ತಿಯಲ್ಲಿ 60 ಮಂದಿ ಸೈಕ್ಲಿಸ್ಟ್ ಕರ್ನಾಟಕ, ಕೇರಳ ಮತ್ತು ತಮಿಳುನಾಡಿನ ಅಚ್ಚರಿದಾಯಕ ಕಂದರಗಳು ಸೇರಿದಂತೆ 850ಕ್ಕೂ ಹೆಚ್ಚು ಕಿಲೋಮೀಟರ್ ದೂರವನ್ನು ಕ್ರಮಿಸಲಿದ್ದಾರೆ. ಇದು ಸವಾರರ ಕೆಚ್ಚು, ಬದ್ಧತೆ, ದೈಹಿಕ ಮತ್ತು ಮಾನಸಿಕ ಸ್ಥಿತಿಗೆ ಪರೀಕ್ಷೆ ಎನಿಸಲಿದೆ.
ಮೈಸೂರಿನ ರೆಜೆಂಟಾ ಸೆಂಟ್ರಲ್ ಹೆರಾಲ್ಡ್ ನಿಂದ ಡಿಸೆಂಬರ್ 8ರಂದು ಆರಂಭವಾಗುವ ಸೈಕಲ್ ಸವಾರಿ ಹಾಸನ, ಚಿಕ್ಕಮಗಳೂರು, ಕುಶಾಲನಗರ, ಸುಲ್ತಾನ್ ಬತ್ತೇರಿ, ಉದಕಮಂಡಲಂ (ಊಟಿ)ಗೆ ತೆರಳಿ ಮೈಸೂರಿಗೆ ಡಿಸೆಂಬರ್ 15ರಂದು ಆಗಮಿಸುವುದರೊಂದಿಗೆ ಮುಕ್ತಾಯವಾಗಲಿದೆ. ಐದನೇ ದಿನ ಅಂದರೆ ಸುಲ್ತಾನ್ಬತ್ತೇರಿಯಿಂದ ಊಟಿಗೆ ಸೈಕಲ್ ತುಳಿಯುವ ದಿನ ಸೈಕ್ಲಿಸ್ಟ್ ಕಲ್ಹತ್ತಿ ಘಾಟಿಯನ್ನು ಏರಲಿದ್ದು, ಇದು ವಿಶ್ವದಲ್ಲೇ ಅತ್ಯಂತ ಕಠಿಣವಾದ ಸೈಕ್ಲಿಂಗ್ ಆರೋಹಣವಾಗಿದೆ.

12ನೇ ಆವೃತ್ತಿಯಲ್ಲಿ 2ನೇ ದಿನ ಸೈಕಲ್ ಸವಾರಿ
ಟಿಎಫ್ಎನ್ ನಿರಂತರವಾಗಿ ಜನಪ್ರಿಯತೆ ಹೆಚ್ಚಿಸಿಕೊಳ್ಳುತ್ತಾ ಬಂದಿದ್ದು, ಪ್ರತಿ ಆವೃತ್ತಿ ಕೂಡಾ ಹೊಸ ಸೈಕ್ಲಿಸ್ಟ್ ಗಳಿಗೆ ವಿಶೇಷಣೆ ಎನಿಸಿದೆ. ಅದು ಮಾರ್ಗ, ಗಿರಿ ಕಂದಕ, ಭೌಗೋಳಿಕ ಪ್ರದೇಶ ಮತ್ತಿತರ ಅಂಶಗಳ ವಿಶೇಷಣೆಗಳಿಂದ ಕೂಡಿರುತ್ತದೆ. 12ನೇ ಆವೃತ್ತಿಯಲ್ಲಿ 2ನೇ ದಿನ ಸೈಕಲ್ ಸವಾರಿ ಹಾಸನದಿಂದ ಚಿಕ್ಕಮಗಳೂರಿಗೆ ತೆರಳಲಿದೆ. ಇದು ಸವಾರರಿಗೆ ವಿಶಿಷ್ಟ ಮಲೆನಾಡಿನ ಸೊಬಗಿನ ಅಪೂರ್ವ ಅನುಭವವನ್ನು ಉಣಿಸಲಿದೆ. ಟಿಎಫ್ಎನ್ಗಾಗಿ ಹೊಸ ಮಾರ್ಗವನ್ನು ರೂಪಿಸಲಾಗಿದ್ದು, ಸೈಕ್ಲಿಸ್ಟ್ ಗಳು ಅತ್ಯಪೂರ್ವ ಪ್ರವಾಸಿ ತಾಣಗಳಾದ, ಹೊಯ್ಸಳ ಯುಗದ ಶಿಲ್ಪಕಲೆ ಮತ್ತು ಐತಿಹಾಸಿಕ ಪರಂಪರೆಗೆ ಹೆಸರಾದ ಬೇಲೂರು, ಹಳೇಬೀಡು ಮತ್ತಿತರ ಪ್ರದೇಶಗಳ ಮೂಲಕ ಕ್ರಮಿಸಲಿದ್ದಾರೆ.

ಟೂರ್ ಆಫ್ ನೀಲಗಿರೀಸ್ ಬಗ್ಗೆ
ಟೂರ್ ಆಫ್ ನೀಲಗಿರೀಸ್ ಬಗ್ಗೆ ವಿವರ ನೀಡಿದ ಆರ್ಎಸಿ-ಎಫ್ನ ಸಹ ಸಂಸ್ಥಾಪಕ ದೀಪಕ್ ಮಾಜಿಪಾಟೀಲ್, "ಸೈಕ್ಲಿಂಗ್ ಅತ್ಯಂತ ಆರೋಗ್ಯದಾಯಕ, ಆರಾಮದಾಯಕ ಹಾಗೂ ಜೀವನಶೈಲಿ ಚಟುವಟಿಕೆಯಾಗಿದ್ದು, ಹಲವು ಮಂದಿಯ ಯೋಚನೆಗಳನ್ನು ಸೆಳೆದಿದೆ. ಈ ಸೈಕ್ಲಿಂಗ್ ಆಸಕ್ತರ ಸಮೂಹ ಅಗಾಧವಾಗಿ ಬೆಳೆಯುತ್ತಿದೆ. ಈ ಸೈಕ್ಲಿಂಗ್ನ ರೋಚಕ ಅನುಭವದ ಜತೆ, ನೀಲಗಿರೀಸ್ನ ಜೈವಿಕ ವಲಯವು ಪ್ರಖ್ಯಾತವಾದ ವನ್ಯಧಾಮಗಳನ್ನು ಮತ್ತು ನೀಲಗಿರಿ ಜಿಲ್ಲೆಯ ಅಪೂರ್ವ ಹಳ್ಳಿಗಳ ದರ್ಶನ ಮಾಡಿಸಲಿದೆ. ಒಂದೇ ಕೂಟದಲ್ಲಿ ಈ ಎಲ್ಲ ವಿಶೇಷಣಗಳನ್ನು ಟೂರ್ ಆಫ್ ನೀಲಗಿರೀಸ್ ಒಳಗೊಂಡಿದೆ" ಎಂದು ಹೇಳಿದರು.

ಭಾರತೀಯ ಎಂಟಿಬಿ ಚಾಂಪಿಯನ್ ಭಾಗಿ
ಟಿಎಫ್ಎನ್, ಹವ್ಯಾಸಿ ಸವಾರರಿಗೆ ಭಾರತದ ಅತ್ಯಂತ ಪ್ರತಿಷ್ಠಿತ ಕೂಟವಾಗಿ ಮಾರ್ಪಟ್ಟಿರುವುದು ಮಾತ್ರವಲ್ಲದೇ, ಸೈಕ್ಲಿಂಗ್ ಉತ್ಸಾಹಿಗಳಿಗೆ ಸೈಕ್ಲಿಂಗ್ ಆಹ್ಲಾದದ ಜತೆಗೆ ಸಾಹಸದ ಅಂಶಗಳನ್ನೂ ಒಳಗೊಂಡಿದೆ. ಆರ್ಎಸಿ-ಎಫ್ ಪೋಷಿತ ಪ್ರತಿಭೆಗಳಾದ ಕಿರಣ್ ಕುಮಾರ್ ರಾಜು ಅವರು ಪ್ರಸ್ತುತ ಭಾರತೀಯ ಎಂಟಿಬಿ ಚಾಂಪಿಯನ್ ಆಗಿದ್ದು, ಅವರು ಕೂಡಾ ಟಿಎಫ್ಎನ್ 2019ರಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ದತ್ತಿ ಕಾರ್ಯಕ್ಕಾಗಿ ಸವಾರಿ ಮಾಡಲಿದ್ದಾರೆ
ಟಿಎಫ್ಎನ್ನ ಇನ್ನೊಂದು ಪ್ರಮುಖ ಆಯಾಮವೆಂದರೆ, ಸವಾರರು ತಮ್ಮ ಸೈಕಲ್ ತುಳಿಯುವ ಸಂಖ್ಯೆಗೆ ಅನುಗುಣವಾಗಿ ಸಮಾಜಕ್ಕೆ ಕೊಡುಗೆ ನೀಡಲಿದ್ದು, ಟಿಎಫ್ಎನ್ನಲ್ಲಿ ದತ್ತಿ ಕಾರ್ಯಕ್ಕಾಗಿ ಸವಾರಿ ಮಾಡಲಿದ್ದಾರೆ. ಈ ವರ್ಷ ಚಾರಿಟಿ ಸವಾರರು, ಕೆನ್ನೆತ್ ಆ್ಯಂಡರ್ಸನ್, ನೇಚರ್ ಸೊಸೈಟಿ ಮತ್ತು ಸೀತಾ ಬತೇಜಾ ಸ್ಪೆಷಾಲಿಟಿ ಹಾಸ್ಪಿಟಲ್ ಮತ್ತಿತರ ಸಂಘ ಸಂಸ್ಥೆಗಳಿಗೆ ಸೇರಿದವರಾಗಿದ್ದು, ತಮ್ಮ ಆಯಾ ಸಾಮಾಜಿಕ ಕಾರಣಕ್ಕಾಗಿ ನೆರವು ನೀಡಲಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications