ಮೈಸೂರಿನಲ್ಲಿ ರಾಯರ ಆರಾಧನೆ, ಭಕ್ತರಿಗೆ ತುಳಸಿ ಸಸಿ ವಿತರಣೆ
ಮೈಸೂರು, ಆಗಸ್ಟ್ 9 : ನಗರದಲ್ಲಿ ರಾಯರ 346ನೇ ಆರಾಧನೆ ಮಹೋತ್ಸವವನ್ನು ವಿಜೃಂಭಣೆ ಹಾಗೂ ಶ್ರದ್ಧಾ-ಭಕ್ತಿಯಿಂದ ಆಚರಿಸಲಾಗುತ್ತಿದೆ.
ರಾಘವೇಂದ್ರ ಸ್ವಾಮಿಗಳು ಸಶರೀರರಾಗಿ ವೃಂದಾವನಸ್ಥರಾಗಿ 346 ವರ್ಷಗಳು ಕಳೆದಿವೆ. ಆ ಸ್ಮರಣೆ ಪ್ರಯುಕ್ತ ಬುಧವಾರ ಮಧ್ಯಾರಾಧನೆ ನಡೆಯಿತು. ಅರ್ಚಕರು ರಾಯರ ವೃಂದಾವನಕ್ಕೆ ವಿಶೇಷ ಅಭಿಷೇಕ ಮಾಡಿದರು. ತುಪ್ಪ, ಹಾಲು, ಜೇನುತುಪ್ಪ, ಮೊಸರು, ಸಕ್ಕರೆ ಹಾಗೂ ಒಣ ಹಣ್ಣುಗಳಿಂದ ಅಭಿಷೇಕ ಮಾಡಲಾಯಿತು.

ಮಧ್ಯಾರಾಧನೆ ಅಂಗವಾಗಿ ಸುಪ್ರಭಾತ, ತುಳಸಿ ಅರ್ಚನೆ, ಕನಕಾಭಿಷೇಕ, ನೈವೇದ್ಯ, ಮಹಾಮಂಗಳಾರತಿ ಜತೆಗೆ ರಾಯರ ವೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಇದೇ ವೇಳೆ ಭಕ್ತರಿಗೆ ತೀರ್ಥ ಪ್ರಸಾದ ಕೂಡ ನೀಡಲಾಯಿತು. ಗುರುರಾಜರಿಗೆ ಪಾದಪೂಜೆ ಕೂಡ ನಡೆಲಾಯಿತು.
4 ಸಾವಿರಕ್ಕೂ ಅಧಿಕ ಮಂದಿಗೆ ಪ್ರತಿ ವರುಷವೂ ಪ್ರಸಾದವನ್ನು ನೀಡುವುದು ಇಲ್ಲಿನ ವಿಶೇಷ. ಸಂಜೆ ಸ್ವಸ್ತಿ ವಾಚನ, ಮಹಾಮಂಗಳಾರತಿ, ಸಾಮೂಹಿಕ ಪ್ರಾರ್ಥನೆ ಕೂಡ ನಿಗದಿಯಾಗಿದೆ.

ಭಜನೆ, ಕೀರ್ತನೆ, ದಾಸರಪದಗಳ ಹಾಡುಗಾರಿಕೆ ಹೀಗೆ ವಿವಿಧ ಬಗೆಯಿಂದ ರಾಯರ ಸೇವೆಯನ್ನು ಭಕ್ತರು ಮಾಡಿದರು. ಇನ್ನು ಮಂದಿರದ ಪ್ರಾಂಗಣದ ಸುತ್ತ ಪಲ್ಲಕ್ಕಿ ಉತ್ಸವ ನಡೆಯಿತು.
ಇನ್ನು ಆರಾಧನೆ ಅಂಗವಾಗಿ ಭಕ್ತಾದಿಗಳಿಗೆ ತುಳಸಿ ಸಸಿಗಳನ್ನು ವಿತರಿಸಲಾಯಿತು. ಡೆಂಗ್ಯೂ ನಿಯಂತ್ರಣಕ್ಕೆ ತುಳಸಿಯ ಎಲೆಗಳು ಮದ್ದಾಗಿರುವ ಕುರಿತು ಅರಿವು ಸಂಸ್ಥೆಯ ಸದಸ್ಯರು ಜನಜಾಗೃತಿ ಮೂಡಿಸಿದರು. ರಾಘವೇಂದ್ರಸ್ವಾಮಿಯ ಮಠವನ್ನು ಹೂವಿನಿಂದ ಸಿಂಗರಿಸಲಾಗಿತ್ತು.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications