ಮಳೆಯ ರುದ್ರನರ್ತನಕ್ಕೆ ನಲುಗಿದ ಮೈಸೂರು, ನಾಲ್ವರಿಗೆ ಗಾಯ
ಮೈಸೂರು, ಸೆಪ್ಟೆಂಬರ್ 27: ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಮಹೋತ್ಸವ ನಡೆಯುತ್ತಿದ್ದು, ಕಳೆದೆರಡು ದಿನಗಳಿಂದ ರಾತ್ರಿ ಮೈಸೂರಿನಲ್ಲಿ ಭಾರೀ ಮಳೆ ಸುರಿಯುತ್ತಿದೆ. ಮಂಗಳವಾರ ಸುರಿದ ಮಳೆಗೆ ಹಲವೆಡೆ ಭಾರೀ ಅವಾಂತರ ಸೃಷ್ಟಿಯಾಗಿದ್ದು ಅನಾಹುತಗಳು ನಡೆದಿವೆ. ಅಲೀಂ ನಗರದಲ್ಲಿ ಕಾಂಪೌಂಡ್ ಕುಸಿದು ನಾಲ್ವರಿಗೆ ಗಾಯಗಳಾಗಿವೆ.
ನಗರದ ಹಲವೆಡೆ ಮರಗಳು ಮುರಿದು ಬಿದ್ದಿದ್ದು ವಾಹನ ಸವಾರರು ತೊಂದರೆ ಅನುಭವಿಸುವಂತಾಯಿತು. ಎಡಬಿಡದೆ ಸುರಿಯುತ್ತಿರೋ ಭಾರೀ ಮಳೆಯಿಂದ ಅಲೀಂ ನಗರದಲ್ಲಿ ಕಾಂಪೌಂಡ್ ಕುಸಿದು ನಾಲ್ವರಿಗೆ ಗಾಯಗಳಾಗಿವೆ. ಭಾರೀ ಮಳೆಗೆ ಸ್ಲಂ ಬೋರ್ಡ್ ಒಂದನೇ ಬ್ಲಾಕ್ ನಲ್ಲಿ ಮನೆಗಳು ಬಿರುಕು ಬಿಟ್ಟಿವೆ. ನಿವಾಸಿಗಳು ಕಟ್ಟಡ ಕುಸಿಯುವ ಆತಂಕದಲ್ಲಿದ್ದಾರೆ.
ಇದೇ ರೀತಿ ಮೈಸೂರಿನ ಗುಂಡೂರಾವ್ ನಗರ, ಪಡುವಾರಹಳ್ಳಿ, ಗೌಸಿಯಾನಗರ ಹಲವು ಬಡಾವಣೆಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಹಾನಿಯುಂಟಾಗಿದೆ. ಹೂಟಗಳ್ಳಿಯ ಸೈಲೆಂಟ್ ಶೋರ್ ರೆಸಾರ್ಟ್ ಪಕ್ಕದ ಕೆರೆ ಒಡೆದು ಭಾರೀ ಹಾನಿ ಸಂಭವಿಸಿದೆ. ಮಳೆರಾಯನ ಆರ್ಭಟಕ್ಕೆ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.

ಹಲವು ನಗರಗಳು ಜಲಾವೃತ
ಹೂಟಗಳ್ಳಿಯಲ್ಲಿ ಗೋಣಿ ಕೆರೆ ಒಡೆದು ಮನೆಗೆ ನೀರು ನುಗ್ಗಿದೆ. ವರುಣನ ಆರ್ಭಟಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಮೈಸೂರಿನ ಕನಕಗಿರಿ, ಗುಂಡೂರಾವ್ ನಗರ ಕೆರೆಯಂತಾಗಿದೆ.

ತಗ್ಗು ಪ್ರದೇಶ ಜಲಾವೃತ
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಮೆಟ್ಟಿಲಿನಲ್ಲಿ ಜಲಪಾತದ ರೀತಿಯಲ್ಲಿ ನೀರು ಧುಮ್ಮಿಕ್ಕಿ ಹರಿಯುತ್ತಿರುವುದು ಕಂಡು ಬಂತು. ಮಳೆಯ ರುದ್ರ ನರ್ತನಕ್ಕೆ ಮೈಸೂರಿನ ಬಹುತೇಕ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.

ರಸ್ತೆಗಳಲ್ಲೆಲ್ಲಾ ನೀರು
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಜೆ.ಸಿ ನಗರ ಬಹುತೇಕ ಜಲಾವೃತಗೊಂಡಿದ್ದು, ಜೆ.ಸಿ ನಗರದ ರಸ್ತೆಗಳಲ್ಲಿ ನೀರು ಉಕ್ಕಿ ಉಕ್ಕಿ ಹರಿಯುತ್ತಿದೆ.

ರಸ್ತೆ ಮೇಲೆಲ್ಲಾ ಚರಂಡಿ ನೀರು
ರಾತ್ರಿಯೆಲ್ಲ ಸುರಿದ ಮಳೆಯ ನೀರು ರಸ್ತೆಯ ಮೇಲೆ ಹರಿದು ಹೋಗಿದ್ದು ಚರಂಡಿಯಲ್ಲಿದ್ದ ತ್ಯಾಜ್ಯ, ರಸ್ತೆ ಬದಿಯಲ್ಲಿದ್ದ ಮರಳು, ಕಲ್ಲು ಎಲ್ಲವೂ ರಸ್ತೆಗೆ ಬಂದಿದೆ. ಕೆಲವೆಡೆ ಚರಂಡಿ ನೀರು ರಸ್ತೆ ಮೇಲೆ ಹರಿದಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications