ಮೈಸೂರಿನಲ್ಲಿ ಮಂಡ್ಯರಮೇಶ್ ರಿಂದ ಬೇಸಿಗೆ ಶಿಬಿರ
15 ನೇ ವರ್ಷದ 'ರಜಾ-ಮಜಾ' ಮಕ್ಕಳ ಬೇಸಿಗೆ ಶಿಬಿರವನ್ನು ಏಪ್ರಿಲ್ 12ರಿಂದ ಮೇ 07ರ ವರೆಗೆ ಸರಸ್ವತಿಪುರಂನಲ್ಲಿರುವ ಜ್ಞಾನೋದಯ ಪದವಿ ಪೂರ್ವಕಾಲೇಜು ಮತ್ತು ವಿಜಯ ವಿಠ್ಠಲ ವಿದ್ಯಾಸಂಸ್ಥೆಯ ಆವರಣದಲ್ಲಿ ಆಯೋಜಿಸಿದೆ.
ಮೈಸೂರು, ಮಾರ್ಚ್ 20: ನಟನರಂಗ ಶಾಲೆಯು ಕಳೆದ ಅನೇಕ ವರ್ಷಗಳಿಂದ ರಂಗಭೂಮಿಯಲ್ಲಿ ನಿರಂತರ ಕ್ರಿಯಾಶೀಲವಾಗಿದ್ದು ರಂಗಭೂಮಿಯ ಅಧ್ಯಯನ, ಪ್ರಾತ್ಯಕ್ಷಿಕೆ, ಪ್ರಯೋಗ, ಪ್ರದರ್ಶನಗಳ ಮೂಲಕ ಶ್ರೇಷ್ಠತೆಯನ್ನು ಸಾಧಿಸುವುದರತ್ತ ಸತತವಾಗಿ ಪ್ರಯತ್ನ ಶೀಲವಾಗಿದೆ. ತನ್ನಚಟುವಟಿಕೆಯ ಭಾಗವಾಗಿ 15ನೇ ವರ್ಷದರಜಾ-ಮಜಾ' ಮಕ್ಕಳ ಬೇಸಿಗೆ ಶಿಬಿರವನ್ನು ಏಪ್ರಿಲ್ 12ರಿಂದ ಮೇ 07ರ ವರೆಗೆ ಸರಸ್ವತಿಪುರಂನಲ್ಲಿರುವ ಜ್ಞಾನೋದಯ ಪದವಿ ಪೂರ್ವಕಾಲೇಜು ಮತ್ತು ವಿಜಯ ವಿಠ್ಠಲ ವಿದ್ಯಾಸಂಸ್ಥೆಯ ಆವರಣದಲ್ಲಿ ಆಯೋಜಿಸಿದೆ.
ಈ ಶಿಬಿರದಲ್ಲಿ ಸತತ 25 ದಿನಗಳ ಕಾಲ ನಾಟಕ ಕಲೆಯನ್ನು ಕೇಂದ್ರವಾಗಿರಿಸಿಕೊಂಡು ಕರ್ನಾಟಕದ ದೇಸಿ ಜಾನಪದ ಕಲಾ ಪ್ರಕಾರಗಳು, ಹಾಡುಗಾರಿಕೆ, ಕರಕುಶಲ ಕಲೆ, ಸಂವಹನ ಕೌಶಲ, ಅಭಿನಯ, ಸಾಧಕರೊಂದಿಗೆ ಸಂವಾದ, ಕಂಪೆನಿ ಮತ್ತು ಆಧುನಿಕ ನಾಟಕಗಳ ಕುರಿತು ಮಕ್ಕಳಿಗೆ ಸಂಪೂರ್ಣ ಮನೋರಂಜನೆಯೊಂದಿಗೆ ವಿಶಿಷ್ಟ ಪ್ರಾತ್ಯಕ್ಷಿಕೆಗಳ ಮೂಲಕ ರಂಗಭೂಮಿಯಲ್ಲಿ ಪ್ರಖ್ಯಾತರಾದ ಸಾಧಕರನೇಕರು ಮಕ್ಕಳನ್ನು ತರಬೇತಿಗೊಳಿಸಲಿದ್ದಾರೆ.[ನಾಮಪತ್ರ ಸಲ್ಲಿಕೆ: ಚಿತ್ರಗಳಲ್ಲಿ ಉಪಚುನಾವಣೆ ರಂಗು]

ಏಪ್ರಿಲ್ 1 ರಂದು ಬೆಳಿಗ್ಗೆ 9.30ರಿಂದ ಸಂಜೆ 06ರ ವರೆಗೆ ರಾಮಕೃಷ್ಣ ನಗರದಲ್ಲಿರುವ ನಟನರಂಗಶಾಲೆಯಲ್ಲಿ 'ರಜಾ ಮಜಾ'ದ ಅರ್ಜಿ ವಿತರಣೆ ಮತ್ತು ಪ್ರವೇಶ ಪ್ರಕ್ರಿಯೆ ನಡೆಯಲಿದ್ದು, ತಡವಾಗಿ ಬಂದವರಿಗೆ ಯಾವುದೇ ಕಾರಣಕ್ಕೂ ಅವಕಾಶವಿರುವುದಿಲ್ಲ. ಕಡ್ಡಾಯವಾಗಿ 8 ವರ್ಷದಿಂದ 14 ವರ್ಷದ ಮಕ್ಕಳಿಗೆ ಮಾತ್ರ ಪ್ರವೇಶವಿದ್ದು, ಏಪ್ರಿಲ್ 1 ರಂದು ಪ್ರವೇಶಾತಿಗೆ ಬರುವಾಗ ಪೋಷಕರು ಮಗುವಿನ ಭಾವಚಿತ್ರದೊಂದಿಗೆ ಜನನ ಪ್ರಮಾಣ ಪತ್ರಅಥವಾ ಮಾರ್ಕ್ಸಕಾರ್ಡ್ ನ ಪ್ರತಿಯನ್ನು ತರತಕ್ಕದ್ದು. ಮೊದಲು ಬಂದವರಿಗೆ ಆದ್ಯತೆ ನೀಡಲಾಗಿದ್ದು, ಸೀಮಿತ ಅವಕಾಶವಿದೆ.[ನಾಮಪತ್ರ ಸಲ್ಲಿಕೆ ವೇಳೆ ಮಾತಿನ ಚಕಮಕಿ-ಲಘುಲಾಠಿ ಪ್ರಹಾರ]
ಹೆಚ್ಚಿನ ವಿವರಗಳಿಗೆ ಮೊ.ಸಂ. 9945555570, 9480468327,9945518452, 9845595505, ಸಂಪರ್ಕಿಸಬಹುದು
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications