ಮೈಸೂರಿನಲ್ಲಿ ಮಂಡ್ಯರಮೇಶ್ ರಿಂದ ಬೇಸಿಗೆ ಶಿಬಿರ
15 ನೇ ವರ್ಷದ 'ರಜಾ-ಮಜಾ' ಮಕ್ಕಳ ಬೇಸಿಗೆ ಶಿಬಿರವನ್ನು ಏಪ್ರಿಲ್ 12ರಿಂದ ಮೇ 07ರ ವರೆಗೆ ಸರಸ್ವತಿಪುರಂನಲ್ಲಿರುವ ಜ್ಞಾನೋದಯ ಪದವಿ ಪೂರ್ವಕಾಲೇಜು ಮತ್ತು ವಿಜಯ ವಿಠ್ಠಲ ವಿದ್ಯಾಸಂಸ್ಥೆಯ ಆವರಣದಲ್ಲಿ ಆಯೋಜಿಸಿದೆ.
ಮೈಸೂರು, ಮಾರ್ಚ್ 20: ನಟನರಂಗ ಶಾಲೆಯು ಕಳೆದ ಅನೇಕ ವರ್ಷಗಳಿಂದ ರಂಗಭೂಮಿಯಲ್ಲಿ ನಿರಂತರ ಕ್ರಿಯಾಶೀಲವಾಗಿದ್ದು ರಂಗಭೂಮಿಯ ಅಧ್ಯಯನ, ಪ್ರಾತ್ಯಕ್ಷಿಕೆ, ಪ್ರಯೋಗ, ಪ್ರದರ್ಶನಗಳ ಮೂಲಕ ಶ್ರೇಷ್ಠತೆಯನ್ನು ಸಾಧಿಸುವುದರತ್ತ ಸತತವಾಗಿ ಪ್ರಯತ್ನ ಶೀಲವಾಗಿದೆ. ತನ್ನಚಟುವಟಿಕೆಯ ಭಾಗವಾಗಿ 15ನೇ ವರ್ಷದರಜಾ-ಮಜಾ' ಮಕ್ಕಳ ಬೇಸಿಗೆ ಶಿಬಿರವನ್ನು ಏಪ್ರಿಲ್ 12ರಿಂದ ಮೇ 07ರ ವರೆಗೆ ಸರಸ್ವತಿಪುರಂನಲ್ಲಿರುವ ಜ್ಞಾನೋದಯ ಪದವಿ ಪೂರ್ವಕಾಲೇಜು ಮತ್ತು ವಿಜಯ ವಿಠ್ಠಲ ವಿದ್ಯಾಸಂಸ್ಥೆಯ ಆವರಣದಲ್ಲಿ ಆಯೋಜಿಸಿದೆ.
ಈ ಶಿಬಿರದಲ್ಲಿ ಸತತ 25 ದಿನಗಳ ಕಾಲ ನಾಟಕ ಕಲೆಯನ್ನು ಕೇಂದ್ರವಾಗಿರಿಸಿಕೊಂಡು ಕರ್ನಾಟಕದ ದೇಸಿ ಜಾನಪದ ಕಲಾ ಪ್ರಕಾರಗಳು, ಹಾಡುಗಾರಿಕೆ, ಕರಕುಶಲ ಕಲೆ, ಸಂವಹನ ಕೌಶಲ, ಅಭಿನಯ, ಸಾಧಕರೊಂದಿಗೆ ಸಂವಾದ, ಕಂಪೆನಿ ಮತ್ತು ಆಧುನಿಕ ನಾಟಕಗಳ ಕುರಿತು ಮಕ್ಕಳಿಗೆ ಸಂಪೂರ್ಣ ಮನೋರಂಜನೆಯೊಂದಿಗೆ ವಿಶಿಷ್ಟ ಪ್ರಾತ್ಯಕ್ಷಿಕೆಗಳ ಮೂಲಕ ರಂಗಭೂಮಿಯಲ್ಲಿ ಪ್ರಖ್ಯಾತರಾದ ಸಾಧಕರನೇಕರು ಮಕ್ಕಳನ್ನು ತರಬೇತಿಗೊಳಿಸಲಿದ್ದಾರೆ.[ನಾಮಪತ್ರ ಸಲ್ಲಿಕೆ: ಚಿತ್ರಗಳಲ್ಲಿ ಉಪಚುನಾವಣೆ ರಂಗು]

ಏಪ್ರಿಲ್ 1 ರಂದು ಬೆಳಿಗ್ಗೆ 9.30ರಿಂದ ಸಂಜೆ 06ರ ವರೆಗೆ ರಾಮಕೃಷ್ಣ ನಗರದಲ್ಲಿರುವ ನಟನರಂಗಶಾಲೆಯಲ್ಲಿ 'ರಜಾ ಮಜಾ'ದ ಅರ್ಜಿ ವಿತರಣೆ ಮತ್ತು ಪ್ರವೇಶ ಪ್ರಕ್ರಿಯೆ ನಡೆಯಲಿದ್ದು, ತಡವಾಗಿ ಬಂದವರಿಗೆ ಯಾವುದೇ ಕಾರಣಕ್ಕೂ ಅವಕಾಶವಿರುವುದಿಲ್ಲ. ಕಡ್ಡಾಯವಾಗಿ 8 ವರ್ಷದಿಂದ 14 ವರ್ಷದ ಮಕ್ಕಳಿಗೆ ಮಾತ್ರ ಪ್ರವೇಶವಿದ್ದು, ಏಪ್ರಿಲ್ 1 ರಂದು ಪ್ರವೇಶಾತಿಗೆ ಬರುವಾಗ ಪೋಷಕರು ಮಗುವಿನ ಭಾವಚಿತ್ರದೊಂದಿಗೆ ಜನನ ಪ್ರಮಾಣ ಪತ್ರಅಥವಾ ಮಾರ್ಕ್ಸಕಾರ್ಡ್ ನ ಪ್ರತಿಯನ್ನು ತರತಕ್ಕದ್ದು. ಮೊದಲು ಬಂದವರಿಗೆ ಆದ್ಯತೆ ನೀಡಲಾಗಿದ್ದು, ಸೀಮಿತ ಅವಕಾಶವಿದೆ.[ನಾಮಪತ್ರ ಸಲ್ಲಿಕೆ ವೇಳೆ ಮಾತಿನ ಚಕಮಕಿ-ಲಘುಲಾಠಿ ಪ್ರಹಾರ]
ಹೆಚ್ಚಿನ ವಿವರಗಳಿಗೆ ಮೊ.ಸಂ. 9945555570, 9480468327,9945518452, 9845595505, ಸಂಪರ್ಕಿಸಬಹುದು
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications