ರಾಜಋಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ
ಮೈಸೂರು,ಜೂ.3: ಮೈಸೂರು ಸಂಸ್ತಾನದ ಅಭಿವೃದ್ಧಿಯ ಹರಿಕಾರ, ರಾಜಋಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 131ನೇ ಜಯಂತಿಯನ್ನು ಜೂ. 4 ರಂದು ಆಚರಿಸಲಾಗುತ್ತದೆ ಎಂದು ಅರಸು ಮಂಡಳಿಯ ಅಧ್ಯಕ್ಷ ಹೆಚ್.ಡಿ.ನಂಜರಾಜೇ ಅರಸ್ ತಿಳಿಸಿದ್ದಾರೆ.
ಅರಸು ಮಂಡಳಿಯು ಪ್ರತೀ ವರ್ಷವೂ ಜೂ.4ರಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನವನ್ನು ಆಚರಿಸುವ ಮೂಲಕ ಅವರಿಗೆ ಗೌರವ ಸಲ್ಲಿಸುತ್ತಾ ಬಂದಿದೆ. ಅದರಂತೆ ಈ ಬಾರಿಯೂ ಜೂನ್ 4 ರಂದು ಜಯಂತಿ ಆಚರಿಸಲು ನಿರ್ಧರಿಸಿದೆ.
ಜೂ.4ರಂದು ಬೆಳಗ್ಗೆ ನಗರದ ತ್ಯಾಗರಾಜ ರಸ್ತೆಯಲ್ಲಿರುವ ಅರಸು ಮಂಡಳಿ ಸಂಘದ ಕಚೇರಿಯಿಂದ ಅಲಂಕೃತ ನಾಲ್ವಡಿ ಕೃಷ್ಣರಾಜ ಒಡೆಯರ್ ಭಾವಚಿತ್ರ ಹೊತ್ತ ವಾಹನದೊಂದಿಗೆ ಕೆ.ಆರ್. ವೃತ್ತದ ವರೆಗೆ ಮೆರವಣಿಗೆಯಲ್ಲಿ ತೆರಳಿ, ಅಲ್ಲಿನ ಒಡೆಯರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿಗೌರವ ನಮನ ಸಲ್ಲಿಸಲಿದೆ ಎಂದು ಹೇಳಿದರು.

ನಂತರ ಅರಸು ಸಮುದಾಯದ ಭವನದಲ್ಲಿ ಸ್ಮರಣಾ ಕಾರ್ಯಕ್ರಮ ಏರ್ಪಡಿಸಿದ್ದು, ಈ ಕಾರ್ಯಕ್ರಮವನ್ನು ಸಂಸದ ಪ್ರತಾತ್ ಸಿಂಹ ಜ್ಯೋತಿ ಬೆಳಗಿಸಿ ಉದ್ಘಾಟಿಸಲಿದ್ದಾರೆ, ಮುಖ್ಯ ಅತಿಥಿಗಳಾಗಿ ಮೇಯರ್ ಆರ್. ಲಿಂಗಪ್ಪ ಹಾಗೂ ಪಾಲಿಕೆಯ ಕೆಲ ಸದಸ್ಯರುಗಳು ಭಾಗವಹಿಸಲಿದ್ದಾರೆ ಎಂದರು.
ರಾಮರಾಜ್ಯ ನನಸು ಮಾಡಿದ ನಾಲ್ವಡಿ: ಗಾಂಧೀಜಿ ಕಂಡ ಕನಸನನು ನನಸುಮಾಡಿದ ಮಹಾನ್ ಪುರುಷ ನಾಲ್ವಡಿ ಕೃಷ್ಣರಾಜ ಒಡೆಯರ್ ಆಗಿದ್ದು, ಇವರು ಸರ್ವಜನಾಂಗವನ್ನು ಒಂದೇ ಸೂರಿನಲ್ಲಿ ಬದುಕುವಂತೆ ಮಾಡಿ ಸರ್ವರಿಗೂ ಸಮಾನತೆ ಸಾರಿ, ದಲಿತರಿಗೆ ಮೀಸಲಾತಿ ಕಲ್ಪಿಸುವುದು ಸೇರಿದಂತೆ ಎಲ್ಲರಿಗೂ ಎಲ್ಲಾ ವರ್ಗದ ಜನರಿಗೂ ವಿದ್ಯಾಭ್ಯಾಸ ಹಾಗೂ ಉದ್ಯೋಗವನ್ನು ಕಲ್ಪಿಸಿಕೊಟ್ಟರು.
ಅಲ್ಲದೇ ಕೈಗಾರಿಕೆ, ಕಲಾಚಾರ, ನೀರಾವರಿ, ಸೇರಿದಂತೆ ಇನ್ನೂ ಹಲವಾರು ಅಭಿವೃದ್ಧಿಕಾರ್ಯಗಳಿಗೆ ಹೆಚ್ಚು ಒತ್ತುಕೊಟ್ಟು ವಿಶ್ವದ ಭೂಪಟದಲ್ಲಿಯೇ ಮೈಸೂರು ಸಂಸ್ಥಾನವನ್ನು ಮೇರು ಸ್ಥಾನಕ್ಕೇರಿಸಿದ ಕೀರ್ತಿ ನಾಲ್ವಡಿ ಕೃಷ್ಣರಾಜ ಒಡೆಯರ್ ಗೆ ಸಲ್ಲುತ್ತದೆ ಎಂದು ವಾಸ್ತವಾಂಶವನ್ನು ವಿವರಿಸಿದರು.
ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನದ ಅಂಗವಾಗಿ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡಬೇಕು, ಜೂನ್. 4 ರಂದು ಸರ್ಕಾರಿ ರಜಾದಿನ ಘೋಷಣೆ ಮಾಡಬೇಕು, ಡಿ. ದೇವರಾಜ ಅರಸ್ ಪ್ರತಿಮೆಯನ್ನು ಮೈಸೂರಲ್ಲಿ ಸ್ಥಾಪಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications