ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಮ್ಯಾನ್ ವರ್ಸಸ್ ವೈಲ್ಡ್' ಚಿತ್ರೀಕರಣ ಮುಗಿಸಿ ರಜನಿ ವಾಪಸ್

|
Google Oneindia Kannada News

ಮೈಸೂರು, ಜನವರಿ 28 : ಸೂಪರ್ ಸ್ಟಾರ್ ರಜನಿಕಾಂತ್ 'ಮ್ಯಾನ್ ವರ್ಸಸ್ ವೈಲ್ಡ್' ಕಾರ್ಯಕ್ರಮದ ಚಿತ್ರೀಕರಣ ಮುಕ್ತಾಯಗೊಳಿಸಿದರು. ಬಂಡೀಪುರದಲ್ಲಿ ಬೇರ್ ಗ್ರಿಲ್ಸ್ ಜೊತೆಗೆ ಚಿತ್ರೀಕರಣ ಮುಗಿಸಿ ಚೆನ್ನೈಗೆ ಮರಳಿದರು.

ಮಂಗಳವಾರ ಬೇರ್ ಗ್ರಿಲ್ಸ್ ಜೊತೆಗಿನ 'ಮ್ಯಾನ್ ವರ್ಸಸ್ ವೈಲ್ಡ್' ಕಾರ್ಯಕ್ರಮದ ಚಿತ್ರೀಕರಣಕ್ಕೆ ರಜನಿಕಾಂತ್ ಬಂಡೀಪುರಕ್ಕೆ ಆಗಮಿಸಿದ್ದರು. ಚಿತ್ರೀಕರಣವನ್ನು ಪೂರ್ಣಗೊಳಿಸಿ ಸಂಜೆ 8 ಗಂಟೆಯ ವಿಮಾನದಲ್ಲಿ ಅವರು ಚೆನ್ನೈಗೆ ವಾಪಸ್ ಆದರು.

 ಬಂಡೀಪುರ ರಾತ್ರಿ ಸಂಚಾರ ನಿಷೇಧ ತೆರವಿಗೆ ಮತ್ತೆ ಕೇರಳ ಮನವಿ ಬಂಡೀಪುರ ರಾತ್ರಿ ಸಂಚಾರ ನಿಷೇಧ ತೆರವಿಗೆ ಮತ್ತೆ ಕೇರಳ ಮನವಿ

ಚಿತ್ರೀಕರಣದ ವೇಳೆ ರಜನಿಕಾಂತ್ ಗಾಯಗೊಂಡಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಚೆನ್ನೈ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ರಜನಿಕಾಂತ್, "ಚಿತ್ರೀಕರಣ ಮುಕ್ತಾಯಗೊಂಡಿದೆ. ಕೆಲವು ತರಚು ಗಾಯಗಳಾಗಿವೆ. ನಾನು ಸುರಕ್ಷಿತವಾಗಿದ್ದೇನೆ" ಎಂದು ಸ್ಪಷ್ಟನೆ ನೀಡಿದರು.

ಬಂಡೀಪುರ ಅರಣ್ಯದ ಕಾಡ್ಗಿಚ್ಚಿನ ಮೇಲೆ 'ಡ್ರೋನ್' ಕಣ್ಣು! ಬಂಡೀಪುರ ಅರಣ್ಯದ ಕಾಡ್ಗಿಚ್ಚಿನ ಮೇಲೆ 'ಡ್ರೋನ್' ಕಣ್ಣು!

Rajinikanth

ಇಂಗ್ಲೆಡ್ ಮೂಲದ ಸಾಕ್ಷ್ಯಚಿತ್ರ ತಯಾರಕ ಬೇರ್ ಗ್ರಿಲ್ಸ್ ಹಿಂದೆ ಪ್ರಧಾನಿ ನರೇಂದ್ರ ಮೋದಿ ಜೊತೆಗೆ 'ಮ್ಯಾನ್ ವರ್ಸಸ್ ವೈಲ್ಡ್' ಕಾರ್ಯಕ್ರಮ ಮಾಡಿದ್ದರು. ಈಗ ರಜನಿಕಾಂತ್ ಜೊತೆ ಕಾರ್ಯಕ್ರಮ ಮಾಡಿದ್ದು, ಅದನ್ನು ಬಂಡೀಪುರದಲ್ಲಿ ಚಿತ್ರೀಕರಿಸಲಾಗಿದೆ.

 ಬಂಡೀಪುರ ರಾಷ್ಟ್ರೀಯ ಹೆದ್ದಾರಿಗೆ ಪರ್ಯಾಯ ಐದು ಮಾರ್ಗ ಬಂಡೀಪುರ ರಾಷ್ಟ್ರೀಯ ಹೆದ್ದಾರಿಗೆ ಪರ್ಯಾಯ ಐದು ಮಾರ್ಗ

ಕಾಡು ಪ್ರಾಣಿಗಳಿಗೆ ಯಾವುದೇ ತೊಂದರೆ ಮಾಡಬಾರದು. ಹೆಚ್ಚು ಶಬ್ದ ಮಾಡಬಾರದು ಎಂಬ ಷರತ್ತಿನ ಅನ್ವಯ ಮಂಗಳವಾರ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿತ್ತು. ಗುರುವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

English summary
Actor Rajinikanth finished shooting of an episode of Man vs Wild with British adventurer Bear Grylls. At Chennai airport he said that I have finished the shooting. I have not received any wounds but just scratches I am alright.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X