Pratap Simha: ಮೈಸೂರು ರಾಮಲಲ್ಲಾ ಕಾರ್ಯಕ್ರಮದಿಂದ ಪ್ರತಾಪ್ ಸಿಂಹನನ್ನು ಓಡಿಸಿದ ದಲಿತರು, ಏಕೆ?
ಮೈಸೂರು, ಜನವರಿ 23: ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನೆಗೊಂಡ ರಾಮಲಲ್ಲಾ ವಿಗ್ರಹ ಕರ್ನಾಟಕದ ಮೈಸೂರಿನ ಗ್ರಾಮವೊಂದರ ದಲಿತರ ಜಮೀನಿನದ್ದು. ಈ ಗ್ರಾಮದಲ್ಲಿ ಶ್ರಿರಾಮೋತ್ಸವ ಪ್ರಯುಕ್ತ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಹೀಗಾಗಿ ಸೋಮವಾರ ಹಾರೋಹಳ್ಳಿ-ಗುಜ್ಜೇಗೌಡನಪುರ ಗ್ರಾಮಕ್ಕೆ ಭೇಟಿ ನೀಡಿದ ಸಂಸದ ಪ್ರತಾಪ ಸಿಂಹನನ್ನು ದಲಿತರು ವಿರೋಧಿಸಿದ್ದಾರೆ. ಕಾರ್ಯಕ್ರಮಕ್ಕೆ ಹಾಜರಾಗದಂತೆ ಗ್ರಾಮಸ್ಥರು ಓಡಿಸಿದ ಘಟನೆ ನಡೆದಿದೆ.
ಹೌದು, ರಾಮಲಲ್ಲಾ ಕೆತ್ತನೆಗಾಗಿ ಕಲ್ಲು ನೀಡಿದ್ದ ಇದೇ ಗ್ರಾಮದಲ್ಲಿ ಸೋಮವಾರ ಶ್ರಿರಾಮೋತ್ಸವ ಪ್ರಯುಕ್ತ ಕಲ್ಲು ತೆಗೆದ ಈ ಗ್ರಾಮದ ಜಮೀನಿನಲ್ಲಿ ಪೂಜೆ ಹಮ್ಮಿಕೊಳ್ಳಲಾಗಿತ್ತು. ಈ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಹಾರೋಹಳ್ಳಿ-ಗುಜ್ಜೇಗೌಡನಪುರಕ್ಕೆ ತೆರಳಿದರು. ಆದರೆ ಸಂಸದರ ಆಗಮನವನ್ನು ಸಹಿಸದ ಗ್ರಾಮದ ದಲಿತ ಸಮುದಾಯದವರು ಆಕ್ರೋಶ ವ್ಯಕ್ತಪಡಿಸಿದರು. ಕೆಲ ಕಾಲ ಹೈಡ್ರಾಮಾವೇ ನಡೆಯಿತು.

ದಲಿತರು ಮುಗಿಬೀಳಲು ಕಾರಣವೇನು?
ಈ ಗ್ರಾಮದಲ್ಲಿ ರಾಮಲಲ್ಲಾ ಕೆತ್ತನೆಗೆಂದು ಕಲ್ಲು ತೆಗೆದ ಸ್ಥಳಕ್ಕೆ ಭೂಮಿಪೂಜೆ ಏರ್ಪಡಿಸಿದ್ದ ದಲಿತ ಸಮುದಾಯದ 'ರಾಮಭಕ್ತರು' ಶಾಸಕ ಜಿ.ಟಿ.ದೇವೇಗೌಡ ಹಾಗೂ ಅಕ್ಕಪಕ್ಕದ ಗ್ರಾಮಗಳ ಹಲವು ಮುಖಂಡರು ಸೇರಿದಂತೆ ಈ ಭಾಗದ ಜೆಡಿಎಸ್ ಮುಖಂಡರನ್ನು ಆಹ್ವಾನಿಸಿದ್ದರು.
ಇದೇ ಕಾರ್ಯಕ್ರಮಕ್ಕೆ ಆಗಮಿಸಲು ಪ್ರತಾಪ್ ಸಿಂಹ ಬಂದಿದ್ದರು. ಆದರೆ ಅವರನ್ನು ಆಹ್ವಾನಿಸಿಲ್ಲ ಎಂದು ಆರೋಪಿಸಿ ಗ್ರಾಮದ ಮುಖಂಡ ಹಾಗೂ ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ಸುರೇಶ್ ಸಂಸದರು ಬರದಂತೆ ತಡೆ ಒಡ್ಡಿದರು. ನೀವೊಬ್ಬರು ದರಲಿ ವಿರೋಧಿ ನಾಯಕ ಎಂದು ಆರೊಪಿಸಿದರು. ನಿಮ್ಮಂತವರಿಗೆ ಈ ಕಾರ್ಯಕ್ರಮದಲ್ಲಿ ಅವಕಾಶ ಇಲ್ಲ ಎಂದು ದೂರಿದರು. ಇವರೊಂದಿಗೆ ದಲಿತ ನಾಯಕರು ಇದೇ ರೀತಿ ಆಗ್ರಹಿಸಿದಾಗ ಕೆಲ ಕಾಲ ಹೈಡ್ರಾಮಾ ನಡೆಯಿತು.
ಸಂಸದರಿಗೆ ರಕ್ಷಣೆ ಕೊಟ್ಟ ಪೊಲೀಸರು
ಈ ವೇಳೆ ಗ್ರಾಮಸ್ಥರು ಸಂಸದರ ವಿರುದ್ಧ ಘೋಷಣೆ ಕೂಗುತ್ತಿದ್ದಂತೆ ಸ್ಥಳದಲ್ಲಿದ್ದ ಪೊಲೀಸರು ಸಂಸದರನ್ನು ಸುತ್ತುವರಿದು ರಕ್ಷಣೆ ನೀಡಿದರು. ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು.

ಹಾರೋಹಳ್ಳಿಯ ಗ್ರಾಮದಲ್ಲಿ ನೀವು ಒಡೆದು ಆಳುವ ನೀತಿ ಅನುಸರಿಸಬೇಡಿ ಎಂದು ಗ್ರಾಮಸ್ಥರು ದೂರಿದರು. ಎಲ್ಲ ರಾಜಕೀಯ ಪಕ್ಷಗಳ ನಾಯಕರು ಇಲ್ಲಿಗೆ ಬರುತ್ತಾರೆ. ಆದರೆ ನೀಮ್ಮ ಭೇಟಿ ಅಗತ್ಯವಿಲ್ಲ. ನೀವು ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದು ನಮಗೆ ಇಷ್ಟವಿಲ್ಲ ಎಂದು ಅವರೆಲ್ಲ ಹೇಳಿದರು.
ದಲಿತ ವಿರೋಧಿ ಆದ ನೀವು ರಾಜಕೀಯ ಕಾರಣದಿಂದ ಇದೀಗ ಗ್ರಾಮಕ್ಕೆ ಆಗಮಿಸಿದ್ದೀರಿ. ನಾವು ದಲಿತರು ಮತ್ತು ಇತರ ಸಮುದಾಯಗಳು ಒಟ್ಟಿಗೆ ಈ ಗ್ರಾಮದಲ್ಲಿ ವಾಸಿಸುತ್ತಿದ್ದು, ಇಲ್ಲಿನ ಶಾಂತಿ ಮತ್ತು ಸಾಮರಸ್ಯವನ್ನು ಕದಡಲು ಬಂದಿದ್ದೀರಿ ಎಂದು ದಲಿತ ನಾಯಕರು ಆರೋಪಿಸಿದರು. ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಸಾ.ರಾ.ಮಹೇಶ್ ಮತ್ತು ದೇವೇಗೌಡ ಸಮಾರಂಭದಲ್ಲಿ ಭಾಗವಹಿಸಿದ್ದರು ಎನ್ನಲಾಗಿದೆ.
ಇದಕ್ಕೆಲ್ಲ ಕಾಂಗ್ರೆಸ್ ಕಾರ್ಯಕರ್ತರು ಹೊಣೆ
ಘಟನೆ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು, ಕೆಲವು ಕಿಡಿಗೇಡಿಗಳು ಗಲಾಟೆ ಸೃಷ್ಟಿಸಿದ್ದಾರೆ. ಅವರು ಕಾಂಗ್ರೆಸ್ ಕಾರ್ಯಕರ್ತರು ಎಂದು ಆರೋಪಿಸಿದರು. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನನ್ನನ್ನು ಸೋಲಿಸಲು ಸಾಧ್ಯವಿಲ್ಲ, ಅದಕ್ಕಾಗಿಯೇ ಅವರು ಇಂತಹ ನಾಟಕ ಮಾಡುತ್ತಿದ್ದಾರೆ ಎಂದು ದೂರಿದರು.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications