Ram Mandir; ಮೈಸೂರಲ್ಲಿ ಬೆಳಗಿದ 111 ಅಡಿ ಉದ್ದದ ಅಗರಬತ್ತಿ
ಮೈಸೂರು, ಜನವರಿ 22: ಉತ್ತರ ಪ್ರದೇಶದ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಶ್ರೀ ರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಆರಂಭಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಪೂಜಾ ವಿಧಿವಿಧಾನವನ್ನು ನೆರವೇರಿಸುತ್ತಿದ್ದಾರೆ.
ಅತ್ತ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತಿದ್ದರೆ ಇತ್ತ ಮೈಸೂರಿನಲ್ಲಿ 111 ಅಡಿ ಉದ್ದದ ಅಗರಬತ್ತಿ ಬೆಳಗಿಸುವ ಕಾರ್ಯಕ್ರಮ ನಡೆಯಿತು. ಶ್ರೀ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಈ ಅಗರತ್ತಿ ತಯಾರಿಸಲಾಗಿದೆ.

ಸೈಕಲ್ ಪ್ಯೂರ್ ಅಗರಬತ್ತಿ ಕಂಪನಿ ವತಿಯಿಂದ ಸಿದ್ದಪಡಿಸಿರುವ 111 ಅಡಿ ಉದ್ದದ ಅಗರಬತ್ತಿ ಬೆಳಗಿಸುವ ಕಾರ್ಯಕ್ರಮ ನಗರದ ಕೋಟೆ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ನಡೆಯಿತು. ಮೈಸೂರು ಸಂಸದ ಪ್ರತಾಪ್ ಸಿಂಹ ಸೇರಿದಂತೆ ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಶಿಲ್ಪಿ ಅರುಣ್ ಯೋಗಿರಾಜ್ ತಾಯಿ ಸರಸ್ವತಿ ಅವರು 111 ಅಡಿ ಉದ್ದದ ಅಗರಬತ್ತಿಯನ್ನು ಬೆಳಗಿಸಿದರು. ಶಾಸಕ ಟಿ. ಎಸ್. ಶ್ರೀವತ್ಸ ಸೇರಿದಂತೆ ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
2 ತಾಸು ಇಡಲು ಅವಕಾಶ; ಮೈಸೂರಿನ ಕೋಟೆ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಪರಂಪರಾ ಹೆಸರಿನಲ್ಲಿ 111 ಅಡಿ ಉದ್ದದ ಅಗರಬತ್ತಿಯನ್ನು ಬೆಳಗಿಸಲಾಗಿದೆ. ಇದನ್ನು 24 ದಿನಗಳ ಕಾಲ ಇಡಲು ಆಯೋಜಕರು ಅನುಮತಿ ಕೇಳಿದ್ದರು. ಆದರೆ ಪೊಲೀಸರು 2 ತಾಸು ಇಡಲು ಮಾತ್ರ ಅವಕಾಶ ನೀಡಿದ್ದಾರೆ.
ಈ ಅಗರಬತ್ತಿಯನ್ನು ಇದ್ದಿಲು, ಜಿಗಟು ಬಿದಿರು, ಶ್ರೀಗಂಧದ ಪುಡಿ, ಜೇನುತುಪ್ಪ, ಸಾಂಬ್ರಾಣಿ, ಬೆಲ್ಲ ಮುಂತಾದ ವಸ್ತುಗಳನ್ನು ಬಳಕೆ ಮಾಡಿಕೊಂಡು ತಯಾರು ಮಾಡಲಾಗಿದೆ. ಬ್ರಹ್ಮ, ವಿಷ್ಣು, ಮಹೇಶ್ವರ ಹೆಸರಿನಲ್ಲಿ18 ನುರಿತ ಕುಶಲ ಕರ್ಮಿಗಳು 23 ದಿನಗಳ ಕಾಲ ಕೆಲಸ ಮಾಡಿ ಈ ಅಗರಬತ್ತಿ ತಯಾರು ಮಾಡಿದ್ದಾರೆ.
ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಗೊಂಡಿರುವ ಮೂರ್ತಿಯನ್ನು ಕೆತ್ತನೆ ಮಾಡಿರುವುದು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್. ಈ ಮೂರ್ತಿಯ ಶಿಲೆಯು ಚಾಮುಂಡೇಶ್ವರಿ ಕ್ಷೇತ್ರದ ಹಾರೋಹಳ್ಳಿಯ ಪವಿತ್ರ ಸ್ಥಳದಲ್ಲಿ ಸಿಕ್ಕಿತ್ತು. ಇಲ್ಲಿ ಸಹ ಸೋಮವಾರ ವಿಶೇಷ ಪೂಜೆ ನಡೆಯಿತು.
-
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ












Click it and Unblock the Notifications