ಮೈಸೂರು; ರಮ್ಮನಹಳ್ಳಿ ರಾಜ್ಯದ ಮೊದಲ ವೈ-ಫೈ ಗ್ರಾಮ
ಮೈಸೂರು, ಮಾರ್ಚ್ 01; ಬಿಎಸ್ಎನ್ಎಲ್ ಸಾರ್ವಜನಿಕ ವೈ-ಫೈ ನೀತಿಯಡಿ ರಾಜ್ಯದಲ್ಲೇ ಮೊದಲ ಸಾರ್ವಜನಿಕ ದತ್ತಾಂಶ ಕೇಂದ್ರವನ್ನು ರಮ್ಮನಹಳ್ಳಿಯಲ್ಲಿ ಸ್ಥಾಪನೆ ಮಾಡಿದೆ. ಸಾರ್ವಜನಿಕ ವೈ-ಫೈ ಪಡೆದ ರಾಜ್ಯದ ಮೊದಲ ಗ್ರಾಮ ರಮ್ಮನಹಳ್ಳಿಯಾಗಿದೆ.
ಭಾರತ್ ಸಂಚಾರ ನಿಗಮ ನಿಯಮಿತದ ಕರ್ನಾಟಕ ವೃತ್ತದ ಮುಖ್ಯ ಪ್ರಧಾನ ವ್ಯವಸ್ಥಾಪಕ ದೇವೇಶ್ ಕುಮಾರ್ ಮಂಗಳವಾರ ನಡೆಯುವ ಕಾರ್ಯಕ್ರಮದಲ್ಲಿ ಯೋಜನೆ ಉದ್ಘಾಟನೆ ಮಾಡಲಿದ್ದಾರೆ. ಇನ್ನು ಮುಂದೆ ಮೈಸೂರು ತಾಲೂಕಿನ ರಮ್ಮನಹಳ್ಳಿಯ ಸಂಪೂರ್ಣ ವೈ-ಫೈ ಗ್ರಾಮವಾಗಲಿದೆ.
ಬಿಎಸ್ಎನ್ಎಲ್ನ ಮೈಸೂರು ವೃತ್ತ ಗ್ರಾಮಕ್ಕೆ ಆಪ್ಟಿಕಲ್ ಫೈಬರ್ ಸಂಪರ್ಕದ ಮೂಲಕ 8 ಕಡೆ ಸಾರ್ವಜನಿಕ ದತ್ತಾಂಶ ಕೇಂದ್ರವನ್ನು ಸ್ಥಾಪನೆ ಮಾಡಿದೆ. ಗ್ರಾಮದ 32 ಪ್ರದೇಶಗಳಲ್ಲಿ ವೈ-ಫೈ ಹಾಟ್ ಸ್ಟಾಟ್ ಲಭ್ಯವಿರಲಿದೆ.

ರಮ್ಮನಹಳ್ಳಿಯು ಸಂಪೂರ್ಣ ವೈ-ಪೈ ಗ್ರಾಮವಾಗಿದ್ದು, ವಿವಿಧ ಯೋಜನೆಯಡಿ 50 ಎಂಬಿಪಿಎಸ್ ವೇಗದ ತನಕ ಇಂಟರ್ ನೆಟ್ ಸಂಪರ್ಕ ಪಡೆಯಬಹುದಾಗಿದೆ. ಬಿಎಸ್ಎನ್ಎಲ್ ವೈ-ಫೈ 69 ಸೇರಿದಂತೆ 5 ಯೋಜನೆಗಳನ್ನು ಜನರಿಗಾಗಿ ಪರಿಚಯಿಸಲಾಗಿದೆ.
5 ಯೋಜನೆಗಳು; ರಮ್ಮನಹಳ್ಳಿ ಗ್ರಾಮದ ಜನರು 69 ರೂ. ಪಾವತಿ ಮಾಡಿ 30 ದಿನದ ತನಕ 300 ಜಿಡಿ ಡೇಟಾವನ್ನು ಬಿಎಸ್ಎನ್ಎಲ್ ವೈಫೈ 69 ಯೋಜನೆಯಡಿ ಪಡೆಯಬಹುದಾಗಿದೆ.
ಬಿಎಸ್ಎನ್ಎಲ್ ವೈಫೈ 9 ಯೋಜನೆಯಡಿ 9 ರೂ. ಪಾವತಿ ಮಾಡಿದರೆ 1 ದಿನಕ್ಕೆ 1 ಜಿಬಿ ಡೇಟಾ ಪಡೆಯಬಹುದಾಗಿದೆ. ಇದೇ ಮಾದರಿಯ ಒಟ್ಟು 5 ಯೋಜನೆಗಳನ್ನು ಬಿಎಸ್ಎನ್ಎಲ್ ಪರಿಚಯಿಸಿದೆ. ಜನರು ವೋಚರ್ ಖರೀದಿ ಮಾಡಿದ ಬಳಿಕ ಮೊಬೈಲ್ ಅಥವ ಲ್ಯಾಪ್ ಟಾಪ್ ಮೂಲಕ ವೈ-ಫೈ ಸಂಪರ್ಕ ಪಡೆಯಬಹುದಾಗಿದೆ.
ಬಿಎಸ್ಎನ್ಎಲ್ ದೇಶದಲ್ಲಿ 40 ಸಾವಿರ ವೈ-ಫೈ ಹಾಟ್ ಸ್ಟಾಟ್ಗಳನ್ನು ನಿರ್ಮಿಸಲಾಗುತ್ತದೆ ಎಂದು ಘೋಷಣೆ ಮಾಡಿತ್ತು. ಗ್ರಾಮಗಳನ್ನು ಆಯ್ಕೆ ಮಾಡಿಕೊಂಡು ಸಾರ್ವಜನಿಕ ವೈ-ಫೈ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications