ಮೈಸೂರಿನ ಮುಸ್ಲಿಮರಿಂದ ಮನೆಗಳಲ್ಲೇ ರಂಜಾನ್ ಆಚರಣೆ
ಮೈಸೂರು, ಮೇ 25: ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಸ್ಲಿಮರು ತಮ್ಮ ಪವಿತ್ರ ಹಬ್ಬವಾದ ರಂಜಾನ್ ನ್ನು ವಿಶೇಷ ಪ್ರಾರ್ಥನೆಯೊಂದಿಗೆ ತಮ್ಮ ಮನೆಗಳಲ್ಲಿಯೇ ಆಚರಿಸಿದರು.
ಈದ್ ನಮಾಜ್ ನ್ನು ಪ್ರತಿ ವರ್ಷವೂ ಈದ್ಗಾ ಮೈದಾನದಲ್ಲಿ ಅಥವಾ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆಯ ಮೂಲಕ ಆಚರಿಸುವ ಸಂಪ್ರದಾಯವಿದ್ದು, ಲಾಕ್ ಡೌನ್ ಇರುವ ಕಾರಣ ಇದಕ್ಕೆ ಅವಕಾಶವಿರಲಿಲ್ಲ. ಈ ಕಾರಣದಿಂದ ಮುಸಲ್ಮಾನ ಸಮುದಾಯದವರು ತಮ್ಮ ಮನೆಗಳಲ್ಲಿ ನಮಾಜ್ ಮಾಡಿದರು.
ಸ್ನೇಹಿತರು, ಬಂಧು ಬಾಂಧವರ ಜೊತೆ ಈದ್ಗಾ ಮೈದಾನದಲ್ಲಿ ಸಂಭ್ರಮದಿಂದ ನಮಾಜ್ ಆಚರಿಸುವ ಮುಸಲ್ಮಾನರಿಗೆ ಈ ಬಾರಿ ಅಂತಹ ಅವಕಾಶ ದೊರೆಯಲಿಲ್ಲ. ಇದರಿಂದ ಸಂಭ್ರಮದ ಕೊರತೆ ಎದ್ದು ಕಾಣುತ್ತಿತ್ತು. ಅದಾಗ್ಯೂ ಮನೆಗಳಲ್ಲಿ ನಮಾಜ್ ಆಚರಿಸಿ ಕುಟುಂಬದವರ ಜತೆ ಸಂತಸ ಹಂಚಿಕೊಂಡರು.

ಈದುಲ್ ಫಿತ್ರ್ ನಮಾಜ್ ಬಳಿಕ ಮುಸಲ್ಮಾನರು ಈದ್ಗಾ ಅಥವಾ ಮಸೀದಿಯಿಂದ ನೇರವಾಗಿ ಖಬರಸ್ತಾನ್ (ಸ್ಮಶಾನ) ಗೆ ಆಗಮಿಸಿ ಮೃತ ಪಟ್ಟಿರುವ ತಮ್ಮ ಬಾಂಧವರ ಸಮಾಧಿ ಬಳಿ ಪ್ರಾರ್ಥನೆ ನಡೆಸುವುದು ವಾಡಿಕೆ. ಆದರೆ ಪೊಲೀಸರು ಇದಕ್ಕೆ ಅವಕಾಶ ನೀಡಲಿಲ್ಲ.
ಟಿಪ್ಪು ಸರ್ಕಲ್ ಬಳಿಯ ಬಡಾ ಮಕಾನ್ ಸೇರಿದಂತೆ ನಗರದ ಬಹುತೇಕ ಮುಸ್ಲಿಂ ಸ್ಮಶಾನದ ಬಳಿ ಪೊಲೀಸ್ ಸರ್ಪಗಾವಲು ಹಾಕಲಾಗಿತ್ತು. ಬಹುತೇಕ ಮುಸಲ್ಮಾನರು ಸ್ಮಶಾನದ ಬಳಿ ಆಗಮಿಸಿ ಪೊಲೀಸರನ್ನು ಕಂಡು ದೂರದಿಂದಲೇ ಸ್ಮಶಾನಕ್ಕೆ ನಮಿಸಿ ಹಿಂತಿರುಗಿದ್ದು ಕಂಡುಬಂತು.
ನಮಾಜ್ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗಿತ್ತು. ಪ್ರಾರ್ಥನೆಯಲ್ಲಿ ಮಹಾಮಾರಿ ಕೊರೊನಾ ವೈರಸ್ ಜಗತ್ತಿನಿಂದ ದೂರ ಹೋಗುವಂತೆ ಪ್ರಾರ್ಥಿಸಲಾಯಿತು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications